<p><strong>ಜೆರುಸಲೆಮ್</strong>: ಭಯೋತ್ಪಾದಕರಾದ ಹಫೀಜ್ ಸಯೀದ್, ಸಾಜಿದ್ ಮಿರ್ ಮತ್ತು ಜಕಿಯುರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನವು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಇಸ್ರೇಲ್ನ ಭಾರತದ ರಾಯಭಾರಿ ಜೆ ಪಿ ಸಿಂಗ್ ಹೇಳಿದ್ದಾರೆ.</p><p>ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಿದಂತೆ ಪಾಕಿಸ್ತಾನವೂ ಮಾಡಬಹುದು ಎಂದಿದ್ದಾರೆ. , </p><p>ಭಯೋತ್ಪಾದನೆ ಜಾಗತಿಕ ಬೆದರಿಕೆ ಎಂದು ವಾದಿಸಿರುವ ಸಿಂಗ್, ಅದರ ವಿರುದ್ಧ ಅಂತರರಾಷ್ಟ್ರೀಯ ಒಕ್ಕೂಟವನ್ನು ರಚಿಸುವಂತೆಯೂ ಕರೆ ನೀಡಿದರು.</p><p>ಇಸ್ರೇಲಿ ಟಿವಿ ಚಾನೆಲ್ i24ಗೆ ನೀಡಿದ ಸಂದರ್ಶನದಲ್ಲಿ ಸಿಂಗ್, ಪಾಕಿಸ್ತಾನದ ವಿರುದ್ಧ ಭಾರತದ ಆಪರೇಷನ್ ಸಿಂಧೂರಕ್ಕೆ ವಿರಾಮ ನೀಡಲಾಗಿದೆ. ಅದಿನ್ನೂ ಮುಗಿದಿಲ್ಲ ಎಂದು ಒತ್ತಿ ಹೇಳಿದರು.</p><p>ಭಾರತದ ಆಕ್ರಮಣಕ್ಕೆ ಕಾರಣವಾದ ಘಟನೆಗಳನ್ನು ವಿವರಿಸುತ್ತಾ, ಪಾಕಿಸ್ತಾನದಲ್ಲಿನ ಭಯೋತ್ಪಾದಕ ಗುಂಪುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಂಗ್ ಹೇಳಿದರು.</p><p>ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು ಧರ್ಮದ ಆಧಾರದ ಮೇಲೆ ಜನರನ್ನು ಕೊಂದರು. ಪ್ರತಿಯೊಬ್ಬರನ್ನೂ ಅವರ ಧರ್ಮ ಕೇಳಿ ಗುಂಡಿಕ್ಕಿದ್ದಾರೆ. 26 ಅಮಾಯಕ ಜೀವಗಳು ಬಲಿಯಾದವು ಎಂದು ಹೇಳಿದ್ದಾರೆ.</p><p>ಭಾರತದ ಕಾರ್ಯಾಚರಣೆಯು ಭಯೋತ್ಪಾದಕ ಗುಂಪುಗಳು ಮತ್ತು ಅವುಗಳ ಮೂಲಸೌಕರ್ಯಗಳ ವಿರುದ್ಧವಾಗಿತ್ತು, ಇದಕ್ಕೆ ಪಾಕಿಸ್ತಾನವು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕ್ರಿಯಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ.</p><p>ಭಾರತದಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗಳ ದೀರ್ಘ ಪಟ್ಟಿಯನ್ನು ಉಲ್ಲೇಖಿಸಿದ ಸಿಂಗ್, ಜೈಶ್ ಎ ಮೊಹಮ್ಮದ್ ಮತ್ತು ಲಷ್ಕರ್ ಎ ತಯಬಾ ಈ ದಾಳಿಗಳ ರೂವಾರಿ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೆಮ್</strong>: ಭಯೋತ್ಪಾದಕರಾದ ಹಫೀಜ್ ಸಯೀದ್, ಸಾಜಿದ್ ಮಿರ್ ಮತ್ತು ಜಕಿಯುರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನವು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಇಸ್ರೇಲ್ನ ಭಾರತದ ರಾಯಭಾರಿ ಜೆ ಪಿ ಸಿಂಗ್ ಹೇಳಿದ್ದಾರೆ.</p><p>ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಿದಂತೆ ಪಾಕಿಸ್ತಾನವೂ ಮಾಡಬಹುದು ಎಂದಿದ್ದಾರೆ. , </p><p>ಭಯೋತ್ಪಾದನೆ ಜಾಗತಿಕ ಬೆದರಿಕೆ ಎಂದು ವಾದಿಸಿರುವ ಸಿಂಗ್, ಅದರ ವಿರುದ್ಧ ಅಂತರರಾಷ್ಟ್ರೀಯ ಒಕ್ಕೂಟವನ್ನು ರಚಿಸುವಂತೆಯೂ ಕರೆ ನೀಡಿದರು.</p><p>ಇಸ್ರೇಲಿ ಟಿವಿ ಚಾನೆಲ್ i24ಗೆ ನೀಡಿದ ಸಂದರ್ಶನದಲ್ಲಿ ಸಿಂಗ್, ಪಾಕಿಸ್ತಾನದ ವಿರುದ್ಧ ಭಾರತದ ಆಪರೇಷನ್ ಸಿಂಧೂರಕ್ಕೆ ವಿರಾಮ ನೀಡಲಾಗಿದೆ. ಅದಿನ್ನೂ ಮುಗಿದಿಲ್ಲ ಎಂದು ಒತ್ತಿ ಹೇಳಿದರು.</p><p>ಭಾರತದ ಆಕ್ರಮಣಕ್ಕೆ ಕಾರಣವಾದ ಘಟನೆಗಳನ್ನು ವಿವರಿಸುತ್ತಾ, ಪಾಕಿಸ್ತಾನದಲ್ಲಿನ ಭಯೋತ್ಪಾದಕ ಗುಂಪುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಂಗ್ ಹೇಳಿದರು.</p><p>ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು ಧರ್ಮದ ಆಧಾರದ ಮೇಲೆ ಜನರನ್ನು ಕೊಂದರು. ಪ್ರತಿಯೊಬ್ಬರನ್ನೂ ಅವರ ಧರ್ಮ ಕೇಳಿ ಗುಂಡಿಕ್ಕಿದ್ದಾರೆ. 26 ಅಮಾಯಕ ಜೀವಗಳು ಬಲಿಯಾದವು ಎಂದು ಹೇಳಿದ್ದಾರೆ.</p><p>ಭಾರತದ ಕಾರ್ಯಾಚರಣೆಯು ಭಯೋತ್ಪಾದಕ ಗುಂಪುಗಳು ಮತ್ತು ಅವುಗಳ ಮೂಲಸೌಕರ್ಯಗಳ ವಿರುದ್ಧವಾಗಿತ್ತು, ಇದಕ್ಕೆ ಪಾಕಿಸ್ತಾನವು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕ್ರಿಯಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ.</p><p>ಭಾರತದಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗಳ ದೀರ್ಘ ಪಟ್ಟಿಯನ್ನು ಉಲ್ಲೇಖಿಸಿದ ಸಿಂಗ್, ಜೈಶ್ ಎ ಮೊಹಮ್ಮದ್ ಮತ್ತು ಲಷ್ಕರ್ ಎ ತಯಬಾ ಈ ದಾಳಿಗಳ ರೂವಾರಿ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>