<p>ಢಾಕಾ (ಪಿಟಿಐ): ‘ಗಡಿ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ದಬ್ಬುವುದಿಲ್ಲ’ ಎಂದು ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಅವರು ಬುಧವಾರ ಇಲ್ಲಿ ಭರವಸೆ ವ್ಯಕ್ತಪಡಿಸಿದರು.</p>.<p>‘ಅಕ್ರಮ ವಲಸಿಗರನ್ನು ಬಂಗಾಳದಿಂದ ಬಲವಂತವಾಗಿ ಹೊರದಬ್ಬುವ ಯಾವುದೇ ಘಟನೆ ಸಂಭವಿಸುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಆದರೂ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಗಡಿ ಭದ್ರತಾ ಪಡೆಗೆ ಸೂಚಿಸಿದ್ದೇನೆ’ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.</p>.<p>‘ಬಂಗಾಳದಲ್ಲಿ ಸರ್ಕಾರ ಬದಲಾಗಿದ್ದು, ಅಕ್ರಮ ವಲಸಿಗರು ಎಂದು ಜನರನ್ನು ಬಾಂಗ್ಲಾದೇಶಕ್ಕೆ ದಬ್ಬಿದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿದೇಶಾಂಗ ಸಚಿವ ಖಲೀಲ್ ಉರ್ ರೆಹಮಾನ್ ಅವರು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ಫೇಸ್ಬುಕ್ ಪುಟದಲ್ಲಿ ಉಲ್ಲೇಖಿಸಿದ ಒಂದು ದಿನದ ನಂತರ ಅಹ್ಮದ್ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ಅಕ್ರಮ ವಲಸಿಗರನ್ನು ಬಂಗಾಳ, ಅಸ್ಸಾಂನಿಂದ ಹೊರಹಾಕಲಾಗುವುದು ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-870764531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಢಾಕಾ (ಪಿಟಿಐ): ‘ಗಡಿ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ದಬ್ಬುವುದಿಲ್ಲ’ ಎಂದು ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಅವರು ಬುಧವಾರ ಇಲ್ಲಿ ಭರವಸೆ ವ್ಯಕ್ತಪಡಿಸಿದರು.</p>.<p>‘ಅಕ್ರಮ ವಲಸಿಗರನ್ನು ಬಂಗಾಳದಿಂದ ಬಲವಂತವಾಗಿ ಹೊರದಬ್ಬುವ ಯಾವುದೇ ಘಟನೆ ಸಂಭವಿಸುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಆದರೂ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಗಡಿ ಭದ್ರತಾ ಪಡೆಗೆ ಸೂಚಿಸಿದ್ದೇನೆ’ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.</p>.<p>‘ಬಂಗಾಳದಲ್ಲಿ ಸರ್ಕಾರ ಬದಲಾಗಿದ್ದು, ಅಕ್ರಮ ವಲಸಿಗರು ಎಂದು ಜನರನ್ನು ಬಾಂಗ್ಲಾದೇಶಕ್ಕೆ ದಬ್ಬಿದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿದೇಶಾಂಗ ಸಚಿವ ಖಲೀಲ್ ಉರ್ ರೆಹಮಾನ್ ಅವರು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ಫೇಸ್ಬುಕ್ ಪುಟದಲ್ಲಿ ಉಲ್ಲೇಖಿಸಿದ ಒಂದು ದಿನದ ನಂತರ ಅಹ್ಮದ್ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ಅಕ್ರಮ ವಲಸಿಗರನ್ನು ಬಂಗಾಳ, ಅಸ್ಸಾಂನಿಂದ ಹೊರಹಾಕಲಾಗುವುದು ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-870764531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>