<p><strong>ಇಸ್ಲಾಮಾಬಾದ್:</strong> ತಮ್ಮ ಹತ್ಯೆಗೆ ವಿದೇಶ ಮತ್ತು ಪಾಕಿಸ್ತಾನದಲ್ಲಿ ಸಂಚು ರೂಪಿಸಲಾಗುತ್ತಿದೆ. ಸಂಚಿನ ಹಿಂದಿರುವವರನ್ನು ವಿಡಿಯೊ ಸಂದೇಶವೊಂದರಲ್ಲಿ ಹೆಸರಿಸಿದ್ದೇನೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ ಬೆನ್ನಿಗೇ, ಅವರ ಎರಡು ಮೊಬೈಲ್ ಫೋನ್ಗಳು ಕಳುವಾಗಿವೆ. ಹೀಗಾಗಿ ಪಾಕಿಸ್ತಾನದಲ್ಲಿ ಅಚ್ಚರಿ ಮನೆ ಮಾಡಿದೆ.</p>.<p>ಸಮಾವೇಶವೊಂದರಲ್ಲಿ ಭಾಗವಹಿಸಲೆಂದು ಸಿಯಾಲ್ಕೋಟ್ಗೆ ತೆರಳಿದ್ದಾಗ ವಿಮಾನ ನಿಲ್ದಾಣದಲ್ಲಿ ಫೋನ್ಗಳನ್ನು ಕದಿಯಲಾಗಿದೆ ಎಂದು ಖಾನ್ ಅವರ ವಕ್ತಾರರಾದ ಶಾಹಬಾಝ್ ಗಿಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.</p>.<p>ರ್ಯಾಲಿಯೊಂದರಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಮಾಜಿ ಪ್ರಧಾನಿ ಖಾನ್, ತಮ್ಮ ಜೀವಕ್ಕೆ ಬೆದರಿಕೆ ಇರುವುದಾಗಿಯೂ, ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ವಿಡಿಯೊವೊಂದರಲ್ಲಿ ಉಲ್ಲೇಖಿಸಿರುವುದಾಗಿಯೂ, ಒಂದು ವೇಳೆ ಹತ್ಯೆಯಾದ ಸಂದರ್ಭದಲ್ಲಿ ವಿಡಿಯೊ ಬಿಡುಗಡೆ ಆಗುವುದಾಗಿ ಹೇಳಿದ್ದರು.</p>.<p>‘ಒಂದೆಡೆ, ಇಮ್ರಾನ್ ಖಾನ್ಗೆ ಉದ್ದೇಶಪೂರ್ವಕವಾಗಿಯೇ ಭದ್ರತೆಯನ್ನು ಒದಗಿಸುತ್ತಿಲ್ಲ. ಇನ್ನೊಂದು ಕಡೆ ಅವರ ಫೋನ್ಗಳನ್ನು ಕಳವು ಮಾಡಲಾಗಿದೆ’ ಎಂದು ಗಿಲ್ ಹೇಳಿದರು.</p>.<p>‘ಮಾಜಿ ಪ್ರಧಾನಿ ಇಮ್ರಾನ್ ಖಾನ್ ರೆಕಾರ್ಡ್ ಮಾಡಿದ ವಿಡಿಯೊ ಹೇಳಿಕೆಯು ಆ ಫೋನ್ಗಳಲ್ಲಿ ಇಲ್ಲ. ಹೀಗಾಗಿ ನೀವು ಸಂಪೂರ್ಣವಾಗಿ ಗೊಂದಲಕ್ಕೀಡಾಗಿದ್ದೀರಿ’ ಎಂದು ಗಿಲ್ ಯಾರ ಹೆಸರೂ ಹೇಳದೇ ವ್ಯಂಗ್ಯವಾಡಿದ್ದಾರೆ.</p>.<p>ಫೋನ್ಗಳ ಕಳವು ಮತ್ತು ಗಿಲ್ ಅವರ ಹೇಳಿಕೆ ಬಗ್ಗೆ ಸರ್ಕಾರದ ಕಡೆಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ತಮ್ಮ ಹತ್ಯೆಗೆ ವಿದೇಶ ಮತ್ತು ಪಾಕಿಸ್ತಾನದಲ್ಲಿ ಸಂಚು ರೂಪಿಸಲಾಗುತ್ತಿದೆ. ಸಂಚಿನ ಹಿಂದಿರುವವರನ್ನು ವಿಡಿಯೊ ಸಂದೇಶವೊಂದರಲ್ಲಿ ಹೆಸರಿಸಿದ್ದೇನೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ ಬೆನ್ನಿಗೇ, ಅವರ ಎರಡು ಮೊಬೈಲ್ ಫೋನ್ಗಳು ಕಳುವಾಗಿವೆ. ಹೀಗಾಗಿ ಪಾಕಿಸ್ತಾನದಲ್ಲಿ ಅಚ್ಚರಿ ಮನೆ ಮಾಡಿದೆ.</p>.<p>ಸಮಾವೇಶವೊಂದರಲ್ಲಿ ಭಾಗವಹಿಸಲೆಂದು ಸಿಯಾಲ್ಕೋಟ್ಗೆ ತೆರಳಿದ್ದಾಗ ವಿಮಾನ ನಿಲ್ದಾಣದಲ್ಲಿ ಫೋನ್ಗಳನ್ನು ಕದಿಯಲಾಗಿದೆ ಎಂದು ಖಾನ್ ಅವರ ವಕ್ತಾರರಾದ ಶಾಹಬಾಝ್ ಗಿಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.</p>.<p>ರ್ಯಾಲಿಯೊಂದರಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಮಾಜಿ ಪ್ರಧಾನಿ ಖಾನ್, ತಮ್ಮ ಜೀವಕ್ಕೆ ಬೆದರಿಕೆ ಇರುವುದಾಗಿಯೂ, ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ವಿಡಿಯೊವೊಂದರಲ್ಲಿ ಉಲ್ಲೇಖಿಸಿರುವುದಾಗಿಯೂ, ಒಂದು ವೇಳೆ ಹತ್ಯೆಯಾದ ಸಂದರ್ಭದಲ್ಲಿ ವಿಡಿಯೊ ಬಿಡುಗಡೆ ಆಗುವುದಾಗಿ ಹೇಳಿದ್ದರು.</p>.<p>‘ಒಂದೆಡೆ, ಇಮ್ರಾನ್ ಖಾನ್ಗೆ ಉದ್ದೇಶಪೂರ್ವಕವಾಗಿಯೇ ಭದ್ರತೆಯನ್ನು ಒದಗಿಸುತ್ತಿಲ್ಲ. ಇನ್ನೊಂದು ಕಡೆ ಅವರ ಫೋನ್ಗಳನ್ನು ಕಳವು ಮಾಡಲಾಗಿದೆ’ ಎಂದು ಗಿಲ್ ಹೇಳಿದರು.</p>.<p>‘ಮಾಜಿ ಪ್ರಧಾನಿ ಇಮ್ರಾನ್ ಖಾನ್ ರೆಕಾರ್ಡ್ ಮಾಡಿದ ವಿಡಿಯೊ ಹೇಳಿಕೆಯು ಆ ಫೋನ್ಗಳಲ್ಲಿ ಇಲ್ಲ. ಹೀಗಾಗಿ ನೀವು ಸಂಪೂರ್ಣವಾಗಿ ಗೊಂದಲಕ್ಕೀಡಾಗಿದ್ದೀರಿ’ ಎಂದು ಗಿಲ್ ಯಾರ ಹೆಸರೂ ಹೇಳದೇ ವ್ಯಂಗ್ಯವಾಡಿದ್ದಾರೆ.</p>.<p>ಫೋನ್ಗಳ ಕಳವು ಮತ್ತು ಗಿಲ್ ಅವರ ಹೇಳಿಕೆ ಬಗ್ಗೆ ಸರ್ಕಾರದ ಕಡೆಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>