<p><strong>ವಿಶ್ವಸಂಸ್ಥೆ</strong>: ಗಾಜಾ ಪಟ್ಟಿಯಲ್ಲಿ ‘ತಕ್ಷಣದ, ಷರತ್ತಿಲ್ಲದ ಮತ್ತು ಶಾಶ್ವತ’ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಕರಡು ನಿರ್ಣಯ ಅಂಗೀಕರಿಸಲು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಮತದಾನ ಪ್ರಕ್ರಿಯೆಗೆ ಭಾರತ ಗೈರಾಗಿದೆ. </p>.<p>ಗಾಜಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ ಘೋಷಿಸಿ, ಹಮಾಸ್, ಮತ್ತಿತರರ ಸಂಘಟನೆಗಳು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವವರನ್ನು ಷರತ್ತುಗಳಿಲ್ಲದೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸ್ಪೇನ್ ಮಂಡಿಸಿದ ಈ ನಿರ್ಣಯಕ್ಕೆ 193 ಸದಸ್ಯ ರಾಷ್ಟ್ರಗಳು ಸದಸ್ಯರಾಗಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಭೂತಪೂರ್ವ ಬೆಂಬಲ ಲಭಿಸಿತು.</p>.<p>ಭಾರತ ಸೇರಿ 19 ರಾಷ್ಟ್ರಗಳು ಮತದಾನ ಪ್ರಕ್ರಿಯೆಯಿಂದ ಹೊರಗುಳಿದಿದ್ದವು. 12 ರಾಷ್ಟ್ರಗಳು ನಿರ್ಣಯಕ್ಕೆ ವಿರುದ್ಧವಾಗಿ, 149 ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಗೈರಾದ ದೇಶಗಳಲ್ಲಿ ಭಾರತ, ಅಲ್ಬಾನಿಯಾ, ಈಕ್ವೆಡಾರ್, ಇಥಿಯೋಪಿಯಾ, ಮಾಲಾವಿ, ಪನಾಮಾ, ದಕ್ಷಿಣ ಸುಡಾನ್, ಟೊಗೊ ಸೇರಿವೆ. </p>.<p>‘ಗಾಜಾ ಪಟ್ಟಿಯಲ್ಲಿ ಮಾನವೀಯ ಪರಿಸ್ಥಿತಿ ಹದಗೆಡುತ್ತಿರುವ ಕಾರಣದಿಂದ ಈ ನಿರ್ಣಯ ಅಂಗೀಕರಿಸಲಾಗಿದೆ’ ಎಂದು ವಿಶ್ವ ಸಂಸ್ಥೆಯಲ್ಲಿನ ಭಾರತದ ಶಾಶ್ವತ ರಾಯಭಾರ ಪ್ರತಿನಿಧಿ ಪರ್ವತನೇನಿ ಹರೀಶ್ ತಿಳಿಸಿದ್ದಾರೆ. </p>.<p>‘ಗಾಜಾ ಪಟ್ಟಿಯಲ್ಲಿನ ಮಾನವೀಯ ಬಿಕ್ಕಟ್ಟು ಮತ್ತು ನಾಗರಿಕರ ಜೀವಹಾನಿಯ ಕುರಿತು ಭಾರತ ಅತೀವ ಕಳವಳ ಹೊಂದಿದೆ’ ಎಂದು ಅವರು ಹೇಳಿದ್ದಾರೆ. </p>.<p>‘ಇಸ್ರೇಲ್–ಪ್ಯಾಲೆಸ್ಟೀನಿಯನ್ ವಿಷಯದಲ್ಲಿ ವಿಶ್ವಸಂಸ್ಥೆ ಕೈಗೊಂಡ ನಿರ್ಣಯದಿಂದಲೂ ಭಾರತ ದೂರ ಉಳಿದಿತ್ತು’ ಎಂದು ಹರೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಗಾಜಾ ಪಟ್ಟಿಯಲ್ಲಿ ‘ತಕ್ಷಣದ, ಷರತ್ತಿಲ್ಲದ ಮತ್ತು ಶಾಶ್ವತ’ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಕರಡು ನಿರ್ಣಯ ಅಂಗೀಕರಿಸಲು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಮತದಾನ ಪ್ರಕ್ರಿಯೆಗೆ ಭಾರತ ಗೈರಾಗಿದೆ. </p>.<p>ಗಾಜಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ ಘೋಷಿಸಿ, ಹಮಾಸ್, ಮತ್ತಿತರರ ಸಂಘಟನೆಗಳು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವವರನ್ನು ಷರತ್ತುಗಳಿಲ್ಲದೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸ್ಪೇನ್ ಮಂಡಿಸಿದ ಈ ನಿರ್ಣಯಕ್ಕೆ 193 ಸದಸ್ಯ ರಾಷ್ಟ್ರಗಳು ಸದಸ್ಯರಾಗಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಭೂತಪೂರ್ವ ಬೆಂಬಲ ಲಭಿಸಿತು.</p>.<p>ಭಾರತ ಸೇರಿ 19 ರಾಷ್ಟ್ರಗಳು ಮತದಾನ ಪ್ರಕ್ರಿಯೆಯಿಂದ ಹೊರಗುಳಿದಿದ್ದವು. 12 ರಾಷ್ಟ್ರಗಳು ನಿರ್ಣಯಕ್ಕೆ ವಿರುದ್ಧವಾಗಿ, 149 ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಗೈರಾದ ದೇಶಗಳಲ್ಲಿ ಭಾರತ, ಅಲ್ಬಾನಿಯಾ, ಈಕ್ವೆಡಾರ್, ಇಥಿಯೋಪಿಯಾ, ಮಾಲಾವಿ, ಪನಾಮಾ, ದಕ್ಷಿಣ ಸುಡಾನ್, ಟೊಗೊ ಸೇರಿವೆ. </p>.<p>‘ಗಾಜಾ ಪಟ್ಟಿಯಲ್ಲಿ ಮಾನವೀಯ ಪರಿಸ್ಥಿತಿ ಹದಗೆಡುತ್ತಿರುವ ಕಾರಣದಿಂದ ಈ ನಿರ್ಣಯ ಅಂಗೀಕರಿಸಲಾಗಿದೆ’ ಎಂದು ವಿಶ್ವ ಸಂಸ್ಥೆಯಲ್ಲಿನ ಭಾರತದ ಶಾಶ್ವತ ರಾಯಭಾರ ಪ್ರತಿನಿಧಿ ಪರ್ವತನೇನಿ ಹರೀಶ್ ತಿಳಿಸಿದ್ದಾರೆ. </p>.<p>‘ಗಾಜಾ ಪಟ್ಟಿಯಲ್ಲಿನ ಮಾನವೀಯ ಬಿಕ್ಕಟ್ಟು ಮತ್ತು ನಾಗರಿಕರ ಜೀವಹಾನಿಯ ಕುರಿತು ಭಾರತ ಅತೀವ ಕಳವಳ ಹೊಂದಿದೆ’ ಎಂದು ಅವರು ಹೇಳಿದ್ದಾರೆ. </p>.<p>‘ಇಸ್ರೇಲ್–ಪ್ಯಾಲೆಸ್ಟೀನಿಯನ್ ವಿಷಯದಲ್ಲಿ ವಿಶ್ವಸಂಸ್ಥೆ ಕೈಗೊಂಡ ನಿರ್ಣಯದಿಂದಲೂ ಭಾರತ ದೂರ ಉಳಿದಿತ್ತು’ ಎಂದು ಹರೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>