<p><strong>ನವದೆಹಲಿ</strong>:ಭಯೋತ್ಪಾದನೆ ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲು ಭಾರತ ಮತ್ತು ಕೆನಡಾ ಸಮ್ಮತಿಸಿವೆ ಎಂದು ವಿದೇಶಾಂಗ ಸಚಿವಾಲಯವು ಶನಿವಾರ ತಿಳಿಸಿದೆ.</p>.<p>ಭಾರತದ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಹಾಗೂ ಕೆನಡಾದ ಭದ್ರತಾ ಸಲಹೆಗಾರ ನಥಾಲಿ ಡ್ರೌಯಿನ್ ಅವರ ನಡುವೆ ಗುರುವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ರಾಷ್ಟ್ರಗಳು ಈ ನಿರ್ಧಾರ ಪ್ರಕಟಿಸಿವೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.</p>.<p>ಉಭಯ ರಾಷ್ಟ್ರಗಳ ನಡುವಿನ ವಿಶ್ವಾಸಾರ್ಹತೆ ಮರುಸ್ಥಾಪಿಸಿ, ರಾಜಕೀಯ ಸಂಬಂಧವನ್ನು ವೃದ್ಧಿಸುವುದರ ಜತೆಗೆ ಸಹಕಾರದ ಹೆಚ್ಚಳವನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಭೆ ನಡೆದಿತ್ತು. </p>.<p>ಈ ವೇಳೆ, ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಲಪಡಿಸಿ ಭದ್ರತಾ ಸಹಕಾರವನ್ನು ಹೆಚ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಜತೆಗೆ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆ ಕುರಿತಂತೆಯೂ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದೂ ಸಚಿವಾಲಯ ಹೇಳಿದೆ. </p>.<p>ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಚಾರವಾಗಿ ಉಭಯ ರಾಷ್ಟ್ರಗಳ ನಡುವೆ ವೈಮನಸ್ಸು ಎದುರಾಗಿ, ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಈ ವರ್ಷ ಜೂನ್ನಲ್ಲಿ ಜಿ–7 ಶೃಂಗದ ವೇಳೆ ಕೆನಡಾ ಪ್ರಧಾನಿಯ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದ ಬಳಿಕ ದ್ವಿಪಕ್ಷೀಯ ಸಂಬಂಧ ತಿಳಿಯಾಗುವ ಸೂಚನೆ ಸಿಕ್ಕಿತ್ತು. ಅದರ ಮುಂದುವರೆದ ಭಾಗವಾಗಿ ಉಭಯ ರಾಷ್ಟ್ರಗಳ ಭದ್ರತಾ ಸಲಹೆಗಾರರ ಈ ಸಭೆ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಭಯೋತ್ಪಾದನೆ ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲು ಭಾರತ ಮತ್ತು ಕೆನಡಾ ಸಮ್ಮತಿಸಿವೆ ಎಂದು ವಿದೇಶಾಂಗ ಸಚಿವಾಲಯವು ಶನಿವಾರ ತಿಳಿಸಿದೆ.</p>.<p>ಭಾರತದ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಹಾಗೂ ಕೆನಡಾದ ಭದ್ರತಾ ಸಲಹೆಗಾರ ನಥಾಲಿ ಡ್ರೌಯಿನ್ ಅವರ ನಡುವೆ ಗುರುವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ರಾಷ್ಟ್ರಗಳು ಈ ನಿರ್ಧಾರ ಪ್ರಕಟಿಸಿವೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.</p>.<p>ಉಭಯ ರಾಷ್ಟ್ರಗಳ ನಡುವಿನ ವಿಶ್ವಾಸಾರ್ಹತೆ ಮರುಸ್ಥಾಪಿಸಿ, ರಾಜಕೀಯ ಸಂಬಂಧವನ್ನು ವೃದ್ಧಿಸುವುದರ ಜತೆಗೆ ಸಹಕಾರದ ಹೆಚ್ಚಳವನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಭೆ ನಡೆದಿತ್ತು. </p>.<p>ಈ ವೇಳೆ, ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಲಪಡಿಸಿ ಭದ್ರತಾ ಸಹಕಾರವನ್ನು ಹೆಚ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಜತೆಗೆ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆ ಕುರಿತಂತೆಯೂ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದೂ ಸಚಿವಾಲಯ ಹೇಳಿದೆ. </p>.<p>ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಚಾರವಾಗಿ ಉಭಯ ರಾಷ್ಟ್ರಗಳ ನಡುವೆ ವೈಮನಸ್ಸು ಎದುರಾಗಿ, ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಈ ವರ್ಷ ಜೂನ್ನಲ್ಲಿ ಜಿ–7 ಶೃಂಗದ ವೇಳೆ ಕೆನಡಾ ಪ್ರಧಾನಿಯ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದ ಬಳಿಕ ದ್ವಿಪಕ್ಷೀಯ ಸಂಬಂಧ ತಿಳಿಯಾಗುವ ಸೂಚನೆ ಸಿಕ್ಕಿತ್ತು. ಅದರ ಮುಂದುವರೆದ ಭಾಗವಾಗಿ ಉಭಯ ರಾಷ್ಟ್ರಗಳ ಭದ್ರತಾ ಸಲಹೆಗಾರರ ಈ ಸಭೆ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>