<p><strong>ಬೀಜಿಂಗ್:</strong> ಭಾರತ ಮತ್ತು ನಾವು ಒಳ್ಳೆಯ ಗೆಳೆಯರಾಗಿದ್ದು, ಉತ್ತಮ ನೆರೆಹೊರೆಯ ರಾಷ್ಟ್ರಗಳಾಗಿವೆ. ಎರಡೂ ದೇಶಗಳು ಒಟ್ಟಾಗಿ ಸಾಗುವುದರಿಂದ ಉಭಯ ದೇಶಗಳಿಗೂ ಅನುಕೂಲವಾಗಲಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ಸೋಮವಾರ ಹೇಳಿದ್ದಾರೆ. </p><p>77ನೇ ಗಣರಾಜೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಷಿ ಜಿನ್ಪಿಂಗ್ ಅವರು ಶುಭಾಶಯವನ್ನು ಕೋರಿದ್ದಾರೆ. </p><p>ಭಾರತ ಮತ್ತು ಚೀನಾ ನಡುವಿನ ಸಂಬಂಧವು ಉಭಯ ದೇಶಗಳ ನಾಗರಿಕರ ಅಭಿವೃದ್ದಿಗೆ ಸಹಾಯ ಮಾಡುತ್ತದೆ ಹಾಗೂ ಅದು ಜಾಗತಿಕ ಶಾಂತಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. </p><p>ಚೀನಾ, ಭಾರತವನ್ನು ಉತ್ತಮ ನೆರೆಹೊರೆಯ ದೇಶ ಎಂದು ಭಾವಿಸಿದ್ದು, ಉಭಯ ದೇಶಗಳ ಅಭಿವೃದ್ದಿ ಯೋಜನೆಗಳಿಗೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಒಟ್ಟಾಗಿ ಹೆಜ್ಜೆ ಇಡಬೇಕಾಗಿದೆ ಎಂದು ತಿಳಿಸಿದ್ದಾರೆ.</p><p>2020ರಲ್ಲಿ ಲಡಾಖ್ನ ಎಲ್ಎಸಿ ಬಳಿ ಉಂಟಾದ ಸಂಘರ್ಷದ ನಂತರ, ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿತ್ತು. 2025ರ ಆಗಸ್ಟ್ನಲ್ಲಿ ಪ್ರಧಾನಿ ಮೋದಿ ಹಾಗೂ ಷಿ ಜಿನ್ಪಿಂಗ್ ನಡುವೆ ನಡೆದ ಮಾತುಕತೆಯ ನಂತರ, ದ್ವಿಪಕ್ಷೀಯ ಸಂಬಂಧದಲ್ಲಿ ಸುಧಾರಣೆ ಕಾಣುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಭಾರತ ಮತ್ತು ನಾವು ಒಳ್ಳೆಯ ಗೆಳೆಯರಾಗಿದ್ದು, ಉತ್ತಮ ನೆರೆಹೊರೆಯ ರಾಷ್ಟ್ರಗಳಾಗಿವೆ. ಎರಡೂ ದೇಶಗಳು ಒಟ್ಟಾಗಿ ಸಾಗುವುದರಿಂದ ಉಭಯ ದೇಶಗಳಿಗೂ ಅನುಕೂಲವಾಗಲಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ಸೋಮವಾರ ಹೇಳಿದ್ದಾರೆ. </p><p>77ನೇ ಗಣರಾಜೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಷಿ ಜಿನ್ಪಿಂಗ್ ಅವರು ಶುಭಾಶಯವನ್ನು ಕೋರಿದ್ದಾರೆ. </p><p>ಭಾರತ ಮತ್ತು ಚೀನಾ ನಡುವಿನ ಸಂಬಂಧವು ಉಭಯ ದೇಶಗಳ ನಾಗರಿಕರ ಅಭಿವೃದ್ದಿಗೆ ಸಹಾಯ ಮಾಡುತ್ತದೆ ಹಾಗೂ ಅದು ಜಾಗತಿಕ ಶಾಂತಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. </p><p>ಚೀನಾ, ಭಾರತವನ್ನು ಉತ್ತಮ ನೆರೆಹೊರೆಯ ದೇಶ ಎಂದು ಭಾವಿಸಿದ್ದು, ಉಭಯ ದೇಶಗಳ ಅಭಿವೃದ್ದಿ ಯೋಜನೆಗಳಿಗೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಒಟ್ಟಾಗಿ ಹೆಜ್ಜೆ ಇಡಬೇಕಾಗಿದೆ ಎಂದು ತಿಳಿಸಿದ್ದಾರೆ.</p><p>2020ರಲ್ಲಿ ಲಡಾಖ್ನ ಎಲ್ಎಸಿ ಬಳಿ ಉಂಟಾದ ಸಂಘರ್ಷದ ನಂತರ, ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿತ್ತು. 2025ರ ಆಗಸ್ಟ್ನಲ್ಲಿ ಪ್ರಧಾನಿ ಮೋದಿ ಹಾಗೂ ಷಿ ಜಿನ್ಪಿಂಗ್ ನಡುವೆ ನಡೆದ ಮಾತುಕತೆಯ ನಂತರ, ದ್ವಿಪಕ್ಷೀಯ ಸಂಬಂಧದಲ್ಲಿ ಸುಧಾರಣೆ ಕಾಣುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>