<p><strong>ನವದೆಹಲಿ:</strong> ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ–20 ಸರಣಿಯಿಂದ ಬ್ಯಾಟರ್ ತಿಲಕ್ ವರ್ಮಾ ಹೊರಬಿದ್ದಿದ್ದಾರೆ. ಅವರ ಬದಲಿಗೆ ಶ್ರೇಯಸ್ ಅಯ್ಯರ್ಗೆ ಅವಕಾಶ ನೀಡಲಾಗಿದೆ.</p><p>ಇತ್ತೀಚೆಗೆ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಲಕ್ ವರ್ಮಾ, ಬೆಂಗಳೂರಿನಲ್ಲಿರುವ ಶ್ರೇಷ್ಠತಾ ಕೇಂದ್ರದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಅವರು ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ, ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದ ಅವರು ತಂಡದಿಂದ ಹೊರಬಿದಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. </p><p>ಟಿ–20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾದ ನಂತರ ಫೆ.3ರಂದು ಮುಂಬೈನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. </p><p>ಮೊದಲ 3 ಪಂದ್ಯಗಳಿಗಷ್ಟೇ ಆಯ್ಕೆ ಆಗಿದ್ದ, ಶ್ರೇಯಸ್ ಅಯ್ಯರ್ಗೆ ತಂಡದಲ್ಲಿ ಮುಂದುವರಿಯುವಂತೆ ಬಿಸಿಸಿಐ ಸೂಚನೆ ನೀಡಿದೆ. </p><p>ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಭಾರತವು 3–0 ಅಲ್ಲಿ ಮುನ್ನಡೆಯಲ್ಲಿದೆ. ನಾಲ್ಕನೇ ಟಿ–20 ಪಂದ್ಯವು ಜ.28ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ–20 ಸರಣಿಯಿಂದ ಬ್ಯಾಟರ್ ತಿಲಕ್ ವರ್ಮಾ ಹೊರಬಿದ್ದಿದ್ದಾರೆ. ಅವರ ಬದಲಿಗೆ ಶ್ರೇಯಸ್ ಅಯ್ಯರ್ಗೆ ಅವಕಾಶ ನೀಡಲಾಗಿದೆ.</p><p>ಇತ್ತೀಚೆಗೆ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಲಕ್ ವರ್ಮಾ, ಬೆಂಗಳೂರಿನಲ್ಲಿರುವ ಶ್ರೇಷ್ಠತಾ ಕೇಂದ್ರದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಅವರು ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ, ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದ ಅವರು ತಂಡದಿಂದ ಹೊರಬಿದಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. </p><p>ಟಿ–20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾದ ನಂತರ ಫೆ.3ರಂದು ಮುಂಬೈನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. </p><p>ಮೊದಲ 3 ಪಂದ್ಯಗಳಿಗಷ್ಟೇ ಆಯ್ಕೆ ಆಗಿದ್ದ, ಶ್ರೇಯಸ್ ಅಯ್ಯರ್ಗೆ ತಂಡದಲ್ಲಿ ಮುಂದುವರಿಯುವಂತೆ ಬಿಸಿಸಿಐ ಸೂಚನೆ ನೀಡಿದೆ. </p><p>ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಭಾರತವು 3–0 ಅಲ್ಲಿ ಮುನ್ನಡೆಯಲ್ಲಿದೆ. ನಾಲ್ಕನೇ ಟಿ–20 ಪಂದ್ಯವು ಜ.28ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>