<p><strong>ಬೀಜಿಂಗ್:</strong> ಚೀನಾ ಮತ್ತು ಭಾರತ ಸೇನೆಗಳು ಜಂಟಿಯಾಗಿ ತಮ್ಮ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಿಕೊಳ್ಳಬೇಕು ಎಂದು ಚೀನಾ ಸೇನೆ ಗುರುವಾರ ಹೇಳಿದೆ.</p>.<p>ಉಭಯ ದೇಶಗಳ ನಡುವೆ ಇತ್ತೀಚೆಗೆ ಗಡಿಯಲ್ಲಿನ ಪರಿಸ್ಥಿತಿ ಕುರಿತು ರಚನಾತ್ಮಕ ಮತ್ತು ಸಕಾರಾತ್ಮಕ ಮಾತುಕತೆ ನಡೆದ ಬಳಿಕ ಚೀನಾ ಸೇನೆ ಈ ಕುರಿತು ಹೇಳಿಕೆ ನೀಡಿದೆ.</p>.<p>ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನಡುವೆ ಆಗಸ್ಟ್ 19ರಂದು ದೆಹಲಿಯಲ್ಲಿ ಭಾರತ– ಚೀನಾ ಗಡಿ ಸಮಸ್ಯೆಗಳ ಕುರಿತು 24ನೇ ಸುತ್ತಿನ ಮಾತುಕತೆ ನಡೆದಿತ್ತು. ಈ ವೇಳೆ 10 ಅಂಶಗಳಿಗೆ ಒಮ್ಮತ ಮೂಡಿತ್ತು ಎಂದು ಚೀನಾ ತಿಳಿಸಿದೆ. </p>.<p>ರಾಜತಾಂತ್ರಿಕ ಮತ್ತು ಸೇನಾ ಮಾರ್ಗಗಳ ಮೂಲಕ ಗಡಿ ನಿರ್ವಹಣೆ ಮತ್ತು ನಿಯಂತ್ರಣ ಕಾರ್ಯವಿಧಾನಗಳನ್ನು ಬಳಸಿಕೊಳ್ಳಲು ಎರಡೂ ಕಡೆಯವರು ಸಮ್ಮತಿಸಿದ್ದಾರೆ ಎಂದು ಚೀನಾದ ರಕ್ಷಣಾ ವಕ್ತಾರ ಜಾಂಗ್ ಕ್ಸಿಯೋಗಾಂಗ್ ತಿಳಿಸಿದರು. ಮಾತುಕತೆಯ ಫಲಿತಾಂಶದ ಕುರಿತು ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದರು.</p>.<p>ಗಡಿ ಸಮಸ್ಯೆಗಳ ಕುರಿತು ಉಭಯ ದೇಶಗಳ ಕಡೆಯವರು ಸಕಾರಾತ್ಮಕ, ರಚನಾತ್ಮಕವಾಗಿ ಹಾಗೂ ಪ್ರಾಮಾಣಿಕ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಹಲವು ವಿಷಯಗಳಲ್ಲಿ ಒಮ್ಮತ ಮೂಡಿತು ಎಂದೂ ಅವರು ವಿವರಿಸಿದರು. </p>.<p>ಚೀನಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳು ಆರಂಭವಾಗಿ 75 ವರ್ಷಗಳು ಸಂದಿರುವ ಈ ಹೊತ್ತಿನಲ್ಲಿ ಎರಡೂ ಕಡೆಯ ದ್ವಿಪಕ್ಷೀಯ ಸಂಬಂಧಗಳು ಸಕಾರಾತ್ಮಕವಾಗಿ ಸುಧಾರಿಸಬೇಕು. ಪರಸ್ಪರ ಗೌರವ, ವಿಶ್ವಾಸ, ಶಾಂತಿ, ಸಹಬಾಳ್ವೆಯಿಂದ ಮುನ್ನಡೆಯಬೇಕು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಚೀನಾ ಮತ್ತು ಭಾರತ ಸೇನೆಗಳು ಜಂಟಿಯಾಗಿ ತಮ್ಮ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಿಕೊಳ್ಳಬೇಕು ಎಂದು ಚೀನಾ ಸೇನೆ ಗುರುವಾರ ಹೇಳಿದೆ.</p>.<p>ಉಭಯ ದೇಶಗಳ ನಡುವೆ ಇತ್ತೀಚೆಗೆ ಗಡಿಯಲ್ಲಿನ ಪರಿಸ್ಥಿತಿ ಕುರಿತು ರಚನಾತ್ಮಕ ಮತ್ತು ಸಕಾರಾತ್ಮಕ ಮಾತುಕತೆ ನಡೆದ ಬಳಿಕ ಚೀನಾ ಸೇನೆ ಈ ಕುರಿತು ಹೇಳಿಕೆ ನೀಡಿದೆ.</p>.<p>ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನಡುವೆ ಆಗಸ್ಟ್ 19ರಂದು ದೆಹಲಿಯಲ್ಲಿ ಭಾರತ– ಚೀನಾ ಗಡಿ ಸಮಸ್ಯೆಗಳ ಕುರಿತು 24ನೇ ಸುತ್ತಿನ ಮಾತುಕತೆ ನಡೆದಿತ್ತು. ಈ ವೇಳೆ 10 ಅಂಶಗಳಿಗೆ ಒಮ್ಮತ ಮೂಡಿತ್ತು ಎಂದು ಚೀನಾ ತಿಳಿಸಿದೆ. </p>.<p>ರಾಜತಾಂತ್ರಿಕ ಮತ್ತು ಸೇನಾ ಮಾರ್ಗಗಳ ಮೂಲಕ ಗಡಿ ನಿರ್ವಹಣೆ ಮತ್ತು ನಿಯಂತ್ರಣ ಕಾರ್ಯವಿಧಾನಗಳನ್ನು ಬಳಸಿಕೊಳ್ಳಲು ಎರಡೂ ಕಡೆಯವರು ಸಮ್ಮತಿಸಿದ್ದಾರೆ ಎಂದು ಚೀನಾದ ರಕ್ಷಣಾ ವಕ್ತಾರ ಜಾಂಗ್ ಕ್ಸಿಯೋಗಾಂಗ್ ತಿಳಿಸಿದರು. ಮಾತುಕತೆಯ ಫಲಿತಾಂಶದ ಕುರಿತು ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದರು.</p>.<p>ಗಡಿ ಸಮಸ್ಯೆಗಳ ಕುರಿತು ಉಭಯ ದೇಶಗಳ ಕಡೆಯವರು ಸಕಾರಾತ್ಮಕ, ರಚನಾತ್ಮಕವಾಗಿ ಹಾಗೂ ಪ್ರಾಮಾಣಿಕ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಹಲವು ವಿಷಯಗಳಲ್ಲಿ ಒಮ್ಮತ ಮೂಡಿತು ಎಂದೂ ಅವರು ವಿವರಿಸಿದರು. </p>.<p>ಚೀನಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳು ಆರಂಭವಾಗಿ 75 ವರ್ಷಗಳು ಸಂದಿರುವ ಈ ಹೊತ್ತಿನಲ್ಲಿ ಎರಡೂ ಕಡೆಯ ದ್ವಿಪಕ್ಷೀಯ ಸಂಬಂಧಗಳು ಸಕಾರಾತ್ಮಕವಾಗಿ ಸುಧಾರಿಸಬೇಕು. ಪರಸ್ಪರ ಗೌರವ, ವಿಶ್ವಾಸ, ಶಾಂತಿ, ಸಹಬಾಳ್ವೆಯಿಂದ ಮುನ್ನಡೆಯಬೇಕು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>