<p><strong>ತಿಯಾನ್ಜಿನ್:</strong> ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗಿನ ಮಾತುಕತೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ. </p><p>ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆ ವೇಳೆ ಜಿನ್ಪಿಂಗ್ ಅವರೊಂದಿಗೆ ಹಲವು ವಿಷಯಗಳ ಕುರಿತು ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಸ್ತಾಪಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಭಯೋತ್ಪಾದನೆಯು ಉಭಯ ದೇಶಗಳ ಮೇಲೆ ಪರಿಣಾಮ ಬೀರುವುದರಿಂದ ಪರಸ್ಪರ ಸಹಕಾರವನ್ನು ಪ್ರತಿಪಾದಿಸಿದ್ದು, ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. ಇದರ ಪರಿಣಾಮ ಉಭಯ ದೇಶಗಳ ಮೇಲೆ ಬೀರುತ್ತದೆ. ಹಾಗಾಗಿ ಭಯೋತ್ಪಾದನೆ ಎದುರಿಸಲು ಪರಸ್ಪರ ಬೆಂಬಲವನ್ನು ವಿಸ್ತರಿಸುವುದು ಅತಿ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಭಾರತ ನಿಭಾಯಿಸಿದ್ದರ ಬಗ್ಗೆ ಚೀನಾದಿಂದ ಸಹಕಾರವನ್ನು ಪಡಿದಿದ್ದೇವೆ ಎಂದು ಅವರು ತಿಳಿಸಿದ್ದಾರೆ. </p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನದಿಂದ ಚೀನಾದ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆಯೇ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸದ ಮಿಸ್ರಿ, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ನಮ್ಮ ತಿಳಿವಳಿಕೆಯನ್ನು ಸ್ಪಷ್ಟವಾಗಿ ಪ್ರಸ್ತಾಪಿಸಲಾಯಿತು ಎಂದು ಹೇಳಿದ್ದಾರೆ. </p>.ಶಾಂಘೈ ಶೃಂಗಸಭೆ: ಗಡಿ ಬಿಕ್ಕಟ್ಟಿನ ನ್ಯಾಯಯುತ ಇತ್ಯರ್ಥಕ್ಕೆ ಮೋದಿ, ಷಿ ಸಹಮತ.BRICS ಸದಸ್ಯ ರಾಷ್ಟ್ರಗಳ ಮೇಲಿನ ನಿರ್ಬಂಧಕ್ಕೆ ರಷ್ಯಾ, ಚೀನಾ ವಿರೋಧ: ಪುಟಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಯಾನ್ಜಿನ್:</strong> ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗಿನ ಮಾತುಕತೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ. </p><p>ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆ ವೇಳೆ ಜಿನ್ಪಿಂಗ್ ಅವರೊಂದಿಗೆ ಹಲವು ವಿಷಯಗಳ ಕುರಿತು ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಸ್ತಾಪಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಭಯೋತ್ಪಾದನೆಯು ಉಭಯ ದೇಶಗಳ ಮೇಲೆ ಪರಿಣಾಮ ಬೀರುವುದರಿಂದ ಪರಸ್ಪರ ಸಹಕಾರವನ್ನು ಪ್ರತಿಪಾದಿಸಿದ್ದು, ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. ಇದರ ಪರಿಣಾಮ ಉಭಯ ದೇಶಗಳ ಮೇಲೆ ಬೀರುತ್ತದೆ. ಹಾಗಾಗಿ ಭಯೋತ್ಪಾದನೆ ಎದುರಿಸಲು ಪರಸ್ಪರ ಬೆಂಬಲವನ್ನು ವಿಸ್ತರಿಸುವುದು ಅತಿ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಭಾರತ ನಿಭಾಯಿಸಿದ್ದರ ಬಗ್ಗೆ ಚೀನಾದಿಂದ ಸಹಕಾರವನ್ನು ಪಡಿದಿದ್ದೇವೆ ಎಂದು ಅವರು ತಿಳಿಸಿದ್ದಾರೆ. </p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನದಿಂದ ಚೀನಾದ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆಯೇ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸದ ಮಿಸ್ರಿ, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ನಮ್ಮ ತಿಳಿವಳಿಕೆಯನ್ನು ಸ್ಪಷ್ಟವಾಗಿ ಪ್ರಸ್ತಾಪಿಸಲಾಯಿತು ಎಂದು ಹೇಳಿದ್ದಾರೆ. </p>.ಶಾಂಘೈ ಶೃಂಗಸಭೆ: ಗಡಿ ಬಿಕ್ಕಟ್ಟಿನ ನ್ಯಾಯಯುತ ಇತ್ಯರ್ಥಕ್ಕೆ ಮೋದಿ, ಷಿ ಸಹಮತ.BRICS ಸದಸ್ಯ ರಾಷ್ಟ್ರಗಳ ಮೇಲಿನ ನಿರ್ಬಂಧಕ್ಕೆ ರಷ್ಯಾ, ಚೀನಾ ವಿರೋಧ: ಪುಟಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>