<p><strong>ಒಟ್ಟಾವ:</strong> ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತದ ರಾಯಭಾರಿ ದಿನೇಶ್ ಕೆ. ಪಟ್ನಾಯಕ್ ಅಲ್ಲಗಳೆದಿದ್ದಾರೆ.</p>.<p>‘ಕೆನಡಾದಲ್ಲಿ ನಡೆದ ನಿಜ್ಜರ್ ಹತ್ಯೆ ಪ್ರಕರಣವು ಕೇವಲ ನಾಲ್ಕು ವ್ಯಕ್ತಿಗಳ ವಿರುದ್ಧ ಇದೆಯೇ ಹೊರತು ಭಾರತ ಸರ್ಕಾರದ ವಿರುದ್ಧವಲ್ಲ’ ಎಂದು ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ. </p>.<p class="bodytext">ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಜೂನ್ 18ರಂದು ಸರ್ರೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. </p>.<p class="bodytext">ಕಳೆದ ನಾಲ್ಕು ದಶಕಗಳಿಂದ ಭಾರತವು ಕೆನಡಾದಲ್ಲಿನ ಭಯೋತ್ಪಾದನೆ ಬಗ್ಗೆ ಮಾತನಾಡುತ್ತಿದೆ. ಆದರೂ, ಐರ್ಲೆಂಡ್ ಕರಾವಳಿ ಪ್ರದೇಶದಲ್ಲಿ 1985ರಲ್ಲಿ ನಡೆದಿದ್ದ ಏರ್ ಇಂಡಿಯಾ ಬಾಂಬ್ ದಾಳಿ ಪ್ರಕರಣದ ತನಿಖೆಯಲ್ಲಿ ಇದುವರೆಗೆ ಯಾವುದೇ ಫಲಿತಾಂಶ ಹೊರಬಿದ್ದಿಲ್ಲ. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ‘ ಎಂದು ಭಾರತದ ರಾಯಭಾರಿ ಸಿಬಿಸಿ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. </p>.<p class="bodytext"> ಕೆನಡಾದ ಸರ್ರೆಯ ನಿವಾಸಿಯಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್ನ ಮೂಲ ಪಂಜಾಬ್ನ ಜಲಂಧರ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ:</strong> ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತದ ರಾಯಭಾರಿ ದಿನೇಶ್ ಕೆ. ಪಟ್ನಾಯಕ್ ಅಲ್ಲಗಳೆದಿದ್ದಾರೆ.</p>.<p>‘ಕೆನಡಾದಲ್ಲಿ ನಡೆದ ನಿಜ್ಜರ್ ಹತ್ಯೆ ಪ್ರಕರಣವು ಕೇವಲ ನಾಲ್ಕು ವ್ಯಕ್ತಿಗಳ ವಿರುದ್ಧ ಇದೆಯೇ ಹೊರತು ಭಾರತ ಸರ್ಕಾರದ ವಿರುದ್ಧವಲ್ಲ’ ಎಂದು ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ. </p>.<p class="bodytext">ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಜೂನ್ 18ರಂದು ಸರ್ರೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. </p>.<p class="bodytext">ಕಳೆದ ನಾಲ್ಕು ದಶಕಗಳಿಂದ ಭಾರತವು ಕೆನಡಾದಲ್ಲಿನ ಭಯೋತ್ಪಾದನೆ ಬಗ್ಗೆ ಮಾತನಾಡುತ್ತಿದೆ. ಆದರೂ, ಐರ್ಲೆಂಡ್ ಕರಾವಳಿ ಪ್ರದೇಶದಲ್ಲಿ 1985ರಲ್ಲಿ ನಡೆದಿದ್ದ ಏರ್ ಇಂಡಿಯಾ ಬಾಂಬ್ ದಾಳಿ ಪ್ರಕರಣದ ತನಿಖೆಯಲ್ಲಿ ಇದುವರೆಗೆ ಯಾವುದೇ ಫಲಿತಾಂಶ ಹೊರಬಿದ್ದಿಲ್ಲ. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ‘ ಎಂದು ಭಾರತದ ರಾಯಭಾರಿ ಸಿಬಿಸಿ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. </p>.<p class="bodytext"> ಕೆನಡಾದ ಸರ್ರೆಯ ನಿವಾಸಿಯಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್ನ ಮೂಲ ಪಂಜಾಬ್ನ ಜಲಂಧರ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>