<p><strong>ಪ್ಯಾರಿಸ್:</strong> ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳು ಒಟ್ಟಾಗಿ ಹೋರಾಟ ನಡೆಸಲಿವೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. </p><p>ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷಗಳ ಸಂಸದರನ್ನು ಒಳಗೊಂಡ ನಿಯೋಗವು, ಪಹಲ್ಗಾಮ್ನಲ್ಲಿನ ಉಗ್ರರ ದಾಳಿ ನಂತರ ಭಾರತ ಕೈಗೊಂಡ ‘ಆಪರೇಷನ್ ಸಿಂಧೂರ’ ಹಾಗೂ ಉಗ್ರವಾದದ ವಿರುದ್ಧ ಭಾರತ ಕೈಗೊಂಡಿರುವ ಹೋರಾಟ ಕುರಿತು ವಿವರಿಸಿದೆ. </p><p>‘ಭಯೋತ್ಪಾದನೆ ವಿರುದ್ಧ ಇಡೀ ಜಗತ್ತು ಧ್ವನಿ ಎತ್ತುವ ಅಗತ್ಯವಿದೆ. ಅದರಂತೆ ಭಯೋತ್ಪಾದನೆ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ಫ್ರಾನ್ಸ್ ಸಂಪೂರ್ಣ ಬೆಂಬಲ ನೀಡುತ್ತದೆ’ ಎಂದು ಫ್ರಾನ್ಸ್ನ ಸೆನೆಟರ್ಗಳು ಭರವಸೆ ನೀಡಿರುವುದಾಗಿ ಪ್ರಸಾದ್ ತಿಳಿಸಿದ್ದಾರೆ. </p><p>ಪಾಕಿಸ್ತಾನ ಮತ್ತು ಭಯೋತ್ಪಾದನೆಯ ನಡುವಿನ ವ್ಯತ್ಯಾಸ ಈಗ ಮಾಯವಾಗಿದೆ. ಪಾಕ್ ಸೇನೆ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದು ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. </p><p>‘ಭಾರತೀಯರಂತೆ ನಾವೂ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದೇವೆ. ಭಯೋತ್ಪಾದನೆ ಎಂಬುದು ‘ಕ್ಯಾನ್ಸರ್’ ಇದ್ದಂತೆ. ಇದರ ವಿರುದ್ಧ ನಾವು ಒಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ಬಲಶಾಲಿಯಾಗುತ್ತೇವೆ’ ಎಂದು ಫ್ರಾನ್ಸ್ನ ಸೆನೆಟರ್ರೊಬ್ಬರು ತಿಳಿಸಿದ್ದಾರೆ. </p><p>ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ವ್ಯಕ್ತಪಡಿಸಲು ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷಗಳ ಸಂಸದರನ್ನು ಒಳಗೊಂಡ ನಿಯೋಗವು ಇಟಲಿಯಲ್ಲಿ ಸಂವಾದ ಮತ್ತು ಸಭೆಗಳನ್ನು ನಡೆಸಲು ನಿರ್ಧರಿಸಿದೆ. ಬಳಿಕ ಡೆನ್ಮಾರ್ಕ್, ಬ್ರಿಟನ್, ಬೆಲ್ಜಿಯಂ ಮತ್ತು ಜರ್ಮನಿಗೆ ಭೇಟಿ ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ಯಾರಿಸ್:</strong> ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳು ಒಟ್ಟಾಗಿ ಹೋರಾಟ ನಡೆಸಲಿವೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. </p><p>ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷಗಳ ಸಂಸದರನ್ನು ಒಳಗೊಂಡ ನಿಯೋಗವು, ಪಹಲ್ಗಾಮ್ನಲ್ಲಿನ ಉಗ್ರರ ದಾಳಿ ನಂತರ ಭಾರತ ಕೈಗೊಂಡ ‘ಆಪರೇಷನ್ ಸಿಂಧೂರ’ ಹಾಗೂ ಉಗ್ರವಾದದ ವಿರುದ್ಧ ಭಾರತ ಕೈಗೊಂಡಿರುವ ಹೋರಾಟ ಕುರಿತು ವಿವರಿಸಿದೆ. </p><p>‘ಭಯೋತ್ಪಾದನೆ ವಿರುದ್ಧ ಇಡೀ ಜಗತ್ತು ಧ್ವನಿ ಎತ್ತುವ ಅಗತ್ಯವಿದೆ. ಅದರಂತೆ ಭಯೋತ್ಪಾದನೆ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ಫ್ರಾನ್ಸ್ ಸಂಪೂರ್ಣ ಬೆಂಬಲ ನೀಡುತ್ತದೆ’ ಎಂದು ಫ್ರಾನ್ಸ್ನ ಸೆನೆಟರ್ಗಳು ಭರವಸೆ ನೀಡಿರುವುದಾಗಿ ಪ್ರಸಾದ್ ತಿಳಿಸಿದ್ದಾರೆ. </p><p>ಪಾಕಿಸ್ತಾನ ಮತ್ತು ಭಯೋತ್ಪಾದನೆಯ ನಡುವಿನ ವ್ಯತ್ಯಾಸ ಈಗ ಮಾಯವಾಗಿದೆ. ಪಾಕ್ ಸೇನೆ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದು ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. </p><p>‘ಭಾರತೀಯರಂತೆ ನಾವೂ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದೇವೆ. ಭಯೋತ್ಪಾದನೆ ಎಂಬುದು ‘ಕ್ಯಾನ್ಸರ್’ ಇದ್ದಂತೆ. ಇದರ ವಿರುದ್ಧ ನಾವು ಒಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ಬಲಶಾಲಿಯಾಗುತ್ತೇವೆ’ ಎಂದು ಫ್ರಾನ್ಸ್ನ ಸೆನೆಟರ್ರೊಬ್ಬರು ತಿಳಿಸಿದ್ದಾರೆ. </p><p>ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ವ್ಯಕ್ತಪಡಿಸಲು ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷಗಳ ಸಂಸದರನ್ನು ಒಳಗೊಂಡ ನಿಯೋಗವು ಇಟಲಿಯಲ್ಲಿ ಸಂವಾದ ಮತ್ತು ಸಭೆಗಳನ್ನು ನಡೆಸಲು ನಿರ್ಧರಿಸಿದೆ. ಬಳಿಕ ಡೆನ್ಮಾರ್ಕ್, ಬ್ರಿಟನ್, ಬೆಲ್ಜಿಯಂ ಮತ್ತು ಜರ್ಮನಿಗೆ ಭೇಟಿ ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>