ವಿಪತ್ತು ತಡೆ ಮೂಲಸೌಕರ್ಯ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅಮೆರಿಕದ ಅಂತರರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ (ಯುಎಸ್ಎಐಡಿ) ಆಡಳಿತಾಧಿಕಾರಿ ಸಮಂತಾ ಪವಾರ್ ‘ಜಗತ್ತಿನಾದ್ಯಂತ ವಿಪತ್ತು ತಡೆಗೆ ಭಾರತ ಸ್ಥಿರವಾದ ಬದ್ಧತೆ ತೋರಿದೆ. ದೇಶದ ನಾಯಕತ್ವವು ಸಿಡಿಆರ್ಐ ಸ್ಥಾಪನೆಗೆ ನೆರವು ನೀಡಿದೆ. ಸರ್ಕಾರ ಮಾತ್ರವಲ್ಲದೆ ಜನರೂ ಇದರ ಅನುಷ್ಠಾನದಲ್ಲಿ ಭಾಗಿಯಾದಾಗ ಮಾತ್ರ ಇದು ಯಶಸ್ವಿಯಾಗಲಿದೆ’ ಎಂದು ತಿಳಿಸಿದರು.