<p>ನವದೆಹಲಿ (ಪಿಟಿಐ): ‘ಪಶ್ಚಿಮ ಏಷ್ಯಾ ವಲಯದಲ್ಲಿ ಶಾಂತಿ ಮರುಸ್ಥಾಪಿಸುವಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸಬಹುದು’ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಶ್ಚಿಮ ಏಷ್ಯಾ ಸಂಘರ್ಷವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲ. ಇರಾನ್ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೂ ಮಿಲಿಟರಿ ಪರಿಹಾರವಲ್ಲ’ ಎಂದರು.</p>.<p>‘ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳುವ ಯಾವುದೇ ರಚನಾತ್ಮಕ ಕ್ರಮವನ್ನೂ ಇರಾನ್ ಸ್ವಾಗತಿಸುತ್ತದೆ. ಈಗಾಗಲೇ ಅಮೆರಿಕದ ಜತೆಗೆ ಒಂದು ಸುತ್ತಿನ ಮಾತುಕತೆ ಮುಗಿದಿದೆ. ಆದರೆ, ಆ ಮಾತುಕತೆ ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿತ್ತು’ ಎಂದು ಅರಾಘ್ಚಿ ಹೇಳಿದರು.</p>.<p>‘ಹೊರ್ಮುಜ್ ಜಲಸಂಧಿ ಸಮಸ್ಯೆ ಈಗ ಇನ್ನಷ್ಟು ಜಟಿಲವಾಗಿದೆ. ಆದರೆ, ಈ ಮಾರ್ಗವನ್ನು ಎಲ್ಲ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಲು ಇರಾನ್ ಸಿದ್ಧವಿದೆ’ ಎಂದರು.</p>.<p>‘ಅಮೆರಿಕನ್ನರಿಗೆ ಇರಾನ್ ಅನ್ನು ನಂಬಲು ಹಲವು ಕಾರಣಗಳಿವೆ. ಆದರೆ, ಇರಾನ್ಗೆ ಅಮೆರಿಕವನ್ನು ನಂಬದಿರಲು ಅನೇಕ ಕಾರಣಗಳಿವೆ’ ಎಂದ ಅರಾಘ್ಚಿ, ‘ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆ ಪ್ರಯತ್ನಗಳು ಇನ್ನೂ ವಿಫಲಗೊಂಡಿಲ್ಲ. ಇರಾನ್ ಅಣ್ವಸ್ತ್ರ ಹೊಂದಲು ಬಯಸುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಅರಾಘ್ಚಿ– ಜೈಶಂಕರ್ ಮಾತುಕತೆ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕಚ್ಚಾತೈಲ ಪೂರೈಕೆಯಲ್ಲಿ ಆಗಿರುವ ವ್ಯತ್ಯಯ ಮತ್ತು ಸಾಗರ ಸ್ಥಿರತೆ ಕುರಿತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶುಕ್ರವಾರ ಇಲ್ಲಿ ಮಾತುಕತೆ ನಡೆಸಿದರು.</p>.<p>ಅರಾಘ್ಚಿ ಅವರು ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದಾರೆ.</p>.<p>‘ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಕುರಿತು ಮತ್ತು ದ್ವಿಪಕ್ಷೀಯ ಸಹಕಾರದ ಬಗ್ಗೆ ಅರಾಘ್ಚಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1012389704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ‘ಪಶ್ಚಿಮ ಏಷ್ಯಾ ವಲಯದಲ್ಲಿ ಶಾಂತಿ ಮರುಸ್ಥಾಪಿಸುವಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸಬಹುದು’ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಶ್ಚಿಮ ಏಷ್ಯಾ ಸಂಘರ್ಷವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲ. ಇರಾನ್ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೂ ಮಿಲಿಟರಿ ಪರಿಹಾರವಲ್ಲ’ ಎಂದರು.</p>.<p>‘ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳುವ ಯಾವುದೇ ರಚನಾತ್ಮಕ ಕ್ರಮವನ್ನೂ ಇರಾನ್ ಸ್ವಾಗತಿಸುತ್ತದೆ. ಈಗಾಗಲೇ ಅಮೆರಿಕದ ಜತೆಗೆ ಒಂದು ಸುತ್ತಿನ ಮಾತುಕತೆ ಮುಗಿದಿದೆ. ಆದರೆ, ಆ ಮಾತುಕತೆ ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿತ್ತು’ ಎಂದು ಅರಾಘ್ಚಿ ಹೇಳಿದರು.</p>.<p>‘ಹೊರ್ಮುಜ್ ಜಲಸಂಧಿ ಸಮಸ್ಯೆ ಈಗ ಇನ್ನಷ್ಟು ಜಟಿಲವಾಗಿದೆ. ಆದರೆ, ಈ ಮಾರ್ಗವನ್ನು ಎಲ್ಲ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಲು ಇರಾನ್ ಸಿದ್ಧವಿದೆ’ ಎಂದರು.</p>.<p>‘ಅಮೆರಿಕನ್ನರಿಗೆ ಇರಾನ್ ಅನ್ನು ನಂಬಲು ಹಲವು ಕಾರಣಗಳಿವೆ. ಆದರೆ, ಇರಾನ್ಗೆ ಅಮೆರಿಕವನ್ನು ನಂಬದಿರಲು ಅನೇಕ ಕಾರಣಗಳಿವೆ’ ಎಂದ ಅರಾಘ್ಚಿ, ‘ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆ ಪ್ರಯತ್ನಗಳು ಇನ್ನೂ ವಿಫಲಗೊಂಡಿಲ್ಲ. ಇರಾನ್ ಅಣ್ವಸ್ತ್ರ ಹೊಂದಲು ಬಯಸುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಅರಾಘ್ಚಿ– ಜೈಶಂಕರ್ ಮಾತುಕತೆ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕಚ್ಚಾತೈಲ ಪೂರೈಕೆಯಲ್ಲಿ ಆಗಿರುವ ವ್ಯತ್ಯಯ ಮತ್ತು ಸಾಗರ ಸ್ಥಿರತೆ ಕುರಿತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶುಕ್ರವಾರ ಇಲ್ಲಿ ಮಾತುಕತೆ ನಡೆಸಿದರು.</p>.<p>ಅರಾಘ್ಚಿ ಅವರು ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದಾರೆ.</p>.<p>‘ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಕುರಿತು ಮತ್ತು ದ್ವಿಪಕ್ಷೀಯ ಸಹಕಾರದ ಬಗ್ಗೆ ಅರಾಘ್ಚಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1012389704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>