<p><strong>ಜೆರುಸಲೇಮ್</strong>: ಸಿಡ್ನಿಯ ಬೋಂಡಿ ಬೀಚ್ನ ‘ಹನುಕ್ಕಾ ಯಹೂದಿ ಹಬ್ಬ’ದ ಸಂದರ್ಭದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ‘ಭಾರತ ಮತ್ತು ಇಸ್ರೇಲ್ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿವೆ’ ಎಂದು ಹೇಳಿದರು.</p>.<p>ಎರಡು ದಿನಗಳ ಭೇಟಿಗಾಗಿ ಮಂಗಳವಾರ ಇಸ್ರೇಲ್ಗೆ ಭೇಟಿ ನೀಡಿದ ಜೈಶಂಕರ್ ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವ ಗಿಡಿಯಾನ್ ಮೋಶೆ ಸಾರ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. </p>.<p>‘ಹನುಕ್ಕಾ’ ಆಚರಣೆಯಲ್ಲಿ ನಡೆದ ದಾಳಿಯಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ನಾವು ಭಯೋತ್ಪಾದನೆಯನ್ನು ಪ್ರಬಲವಾಗಿ ಖಂಡಿಸುತ್ತೇವೆ. ಅದರ ವಿರುದ್ಧದ ನಮ್ಮ ಹೋರಾಟಕ್ಕೆ ಇಸ್ರೇಲ್ ನೀಡುತ್ತಿರುವ ನಿರಂತರ ಬೆಂಬಲವು ಪ್ರಶಂಸನಾರ್ಹವಾದದ್ದು’ ಎಂದರು. </p>.<p>‘ಕಳೆದ ದಶಕದಲ್ಲಿ ಗಮನಾರ್ಹವಾಗಿ ಅಭಿವೃದ್ಧಿ ಹೊಂದಿದ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಕುರಿತು ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಸಚಿವರು, ‘ಇದು ಶಾಶ್ವತ ಮತ್ತು ಉತ್ತಮ ಪರಿಹಾರವನ್ನು ಕಲ್ಪಿಸುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.</p>.<p>ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾರತ ಪ್ರವಾಸಕ್ಕೆ ಸಿದ್ಧತೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜೈಶಂಕರ್ ಅಲ್ಲಿಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೇಮ್</strong>: ಸಿಡ್ನಿಯ ಬೋಂಡಿ ಬೀಚ್ನ ‘ಹನುಕ್ಕಾ ಯಹೂದಿ ಹಬ್ಬ’ದ ಸಂದರ್ಭದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ‘ಭಾರತ ಮತ್ತು ಇಸ್ರೇಲ್ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿವೆ’ ಎಂದು ಹೇಳಿದರು.</p>.<p>ಎರಡು ದಿನಗಳ ಭೇಟಿಗಾಗಿ ಮಂಗಳವಾರ ಇಸ್ರೇಲ್ಗೆ ಭೇಟಿ ನೀಡಿದ ಜೈಶಂಕರ್ ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವ ಗಿಡಿಯಾನ್ ಮೋಶೆ ಸಾರ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. </p>.<p>‘ಹನುಕ್ಕಾ’ ಆಚರಣೆಯಲ್ಲಿ ನಡೆದ ದಾಳಿಯಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ನಾವು ಭಯೋತ್ಪಾದನೆಯನ್ನು ಪ್ರಬಲವಾಗಿ ಖಂಡಿಸುತ್ತೇವೆ. ಅದರ ವಿರುದ್ಧದ ನಮ್ಮ ಹೋರಾಟಕ್ಕೆ ಇಸ್ರೇಲ್ ನೀಡುತ್ತಿರುವ ನಿರಂತರ ಬೆಂಬಲವು ಪ್ರಶಂಸನಾರ್ಹವಾದದ್ದು’ ಎಂದರು. </p>.<p>‘ಕಳೆದ ದಶಕದಲ್ಲಿ ಗಮನಾರ್ಹವಾಗಿ ಅಭಿವೃದ್ಧಿ ಹೊಂದಿದ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಕುರಿತು ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಸಚಿವರು, ‘ಇದು ಶಾಶ್ವತ ಮತ್ತು ಉತ್ತಮ ಪರಿಹಾರವನ್ನು ಕಲ್ಪಿಸುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.</p>.<p>ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾರತ ಪ್ರವಾಸಕ್ಕೆ ಸಿದ್ಧತೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜೈಶಂಕರ್ ಅಲ್ಲಿಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>