<p>ಕಠ್ಮಂಡು (ಪಿಟಿಐ): ‘ಭಾರತ ಮತ್ತು ನೇಪಾಳದ ಮಧ್ಯೆ ದೀರ್ಘಕಾಲದಿಂದ ಇರುವ ಗಡಿ ವಿವಾದವನ್ನು ಬಗೆ ಹರಿಸಿಕೊಳ್ಳಲು ಇತಿಹಾಸಕಾರರ, ಸರ್ವೇ ನಡೆಸುವವರ ಮತ್ತು ತಜ್ಞರ ಸಹಕಾರ ತೆಗೆದುಕೊಳ್ಳಲಾಗುವುದು.ಭಾರತ ಕೂಡ ಇದಕ್ಕೆ ಒಪ್ಪಿಕೊಂಡಿದೆ’ ಎಂದು ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರು ಸಂಸತ್ತಿಗೆ ತಿಳಿಸಿದರು.</p>.<p>ಕಾಲಾಪಾನಿ, ಲಿಪುಲೆಖ್ ಮತ್ತು ಲಿಂಪಿಯಾಧುರಾ ಪ್ರದೇಶಗಳ ಕುರಿತು ಭಾರತ ಮತ್ತು ನೇಪಾಳದ ಮಧ್ಯೆ ಗಡಿ ವಿವಾದವಿದೆ. ಈ ಪ್ರದೇಶಗಳು ನೇಪಾಳ, ಭಾರತ ಮತ್ತು ಟಿಬೆಟ್ ಗಡಿಗಳಿಗೆ ಹೊಂದಿಕೊಂಡಿವೆ. ಈ ಪ್ರದೇಶಗಳು ಉತ್ತರಾಖಂಡದ ಭಾಗಗಳು ಎಂಬುದು ಭಾರತದ ನಿಲುವು.</p>.<p>‘ನಾವು ಭಾರತಕ್ಕೆ ಅಧಿಕೃತವಾಗಿಯೇ ಈ ಬಗ್ಗೆ ಪತ್ರ ಕಳುಹಿಸಿದ್ದೆವು. ಭಾರತದ ಕೂಡ ಇದಕ್ಕೆ ಪ್ರತಿಕ್ರಿಯೆ ನೀಡಿದೆ. ಭಾರತ ಮಾತ್ರವಲ್ಲ ನಾವು ಕೂಡ ಭಾರತದ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಂಡಿದ್ದೇವೆ. ಪ್ರಧಾನಿ ಆದ ಬಳಿಕವೇ ನನಗೆ ಈ ಬಗ್ಗೆ ಮಾಹಿತಿ ತಿಳಿಯಿತು. ಸ್ನೇಹಪೂರ್ವಕವಾಗಿ ವಿವಾದ ಬಗೆಹರಿಸಿಕೊಳ್ಳಲು ನಾವುಗಳು ಒಪ್ಪಿಕೊಂಡಿದ್ದೇವೆ’ ಎಂದು ಭಾನುವಾರ ತಿಳಿಸಿದರು.</p>.<p>‘ನಾವೂ ಭಾರತದ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿದ್ದೇವೆ’ ಎಂಬ ಪ್ರಧಾನಿ ಶಾ ಅವರ ಹೇಳಿಕೆಯು ವಿವಾದಕ್ಕೆ ಕಾರಣವಾಯಿತು. ಬಳಿಕ, ಸ್ಪಷ್ಟನೆ ನೀಡಿದ ನೇಪಾಳದ ವಿದೇಶಾಂಗ ಸಚಿವಾಲಯವು, ‘ಪ್ರಧಾನಿ ಶಾ ಅವರು ಪ್ರಸ್ತಾಪಿಸಿರುವುದು ಯಾರಿಗೂ ಸೇರದ ಎರಡೂ ದೇಶಕ್ಕೂ ಸೇರದ ಸ್ಥಳವಾಗಿದೆ’ ಎಂದಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-485388186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಠ್ಮಂಡು (ಪಿಟಿಐ): ‘ಭಾರತ ಮತ್ತು ನೇಪಾಳದ ಮಧ್ಯೆ ದೀರ್ಘಕಾಲದಿಂದ ಇರುವ ಗಡಿ ವಿವಾದವನ್ನು ಬಗೆ ಹರಿಸಿಕೊಳ್ಳಲು ಇತಿಹಾಸಕಾರರ, ಸರ್ವೇ ನಡೆಸುವವರ ಮತ್ತು ತಜ್ಞರ ಸಹಕಾರ ತೆಗೆದುಕೊಳ್ಳಲಾಗುವುದು.ಭಾರತ ಕೂಡ ಇದಕ್ಕೆ ಒಪ್ಪಿಕೊಂಡಿದೆ’ ಎಂದು ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರು ಸಂಸತ್ತಿಗೆ ತಿಳಿಸಿದರು.</p>.<p>ಕಾಲಾಪಾನಿ, ಲಿಪುಲೆಖ್ ಮತ್ತು ಲಿಂಪಿಯಾಧುರಾ ಪ್ರದೇಶಗಳ ಕುರಿತು ಭಾರತ ಮತ್ತು ನೇಪಾಳದ ಮಧ್ಯೆ ಗಡಿ ವಿವಾದವಿದೆ. ಈ ಪ್ರದೇಶಗಳು ನೇಪಾಳ, ಭಾರತ ಮತ್ತು ಟಿಬೆಟ್ ಗಡಿಗಳಿಗೆ ಹೊಂದಿಕೊಂಡಿವೆ. ಈ ಪ್ರದೇಶಗಳು ಉತ್ತರಾಖಂಡದ ಭಾಗಗಳು ಎಂಬುದು ಭಾರತದ ನಿಲುವು.</p>.<p>‘ನಾವು ಭಾರತಕ್ಕೆ ಅಧಿಕೃತವಾಗಿಯೇ ಈ ಬಗ್ಗೆ ಪತ್ರ ಕಳುಹಿಸಿದ್ದೆವು. ಭಾರತದ ಕೂಡ ಇದಕ್ಕೆ ಪ್ರತಿಕ್ರಿಯೆ ನೀಡಿದೆ. ಭಾರತ ಮಾತ್ರವಲ್ಲ ನಾವು ಕೂಡ ಭಾರತದ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಂಡಿದ್ದೇವೆ. ಪ್ರಧಾನಿ ಆದ ಬಳಿಕವೇ ನನಗೆ ಈ ಬಗ್ಗೆ ಮಾಹಿತಿ ತಿಳಿಯಿತು. ಸ್ನೇಹಪೂರ್ವಕವಾಗಿ ವಿವಾದ ಬಗೆಹರಿಸಿಕೊಳ್ಳಲು ನಾವುಗಳು ಒಪ್ಪಿಕೊಂಡಿದ್ದೇವೆ’ ಎಂದು ಭಾನುವಾರ ತಿಳಿಸಿದರು.</p>.<p>‘ನಾವೂ ಭಾರತದ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿದ್ದೇವೆ’ ಎಂಬ ಪ್ರಧಾನಿ ಶಾ ಅವರ ಹೇಳಿಕೆಯು ವಿವಾದಕ್ಕೆ ಕಾರಣವಾಯಿತು. ಬಳಿಕ, ಸ್ಪಷ್ಟನೆ ನೀಡಿದ ನೇಪಾಳದ ವಿದೇಶಾಂಗ ಸಚಿವಾಲಯವು, ‘ಪ್ರಧಾನಿ ಶಾ ಅವರು ಪ್ರಸ್ತಾಪಿಸಿರುವುದು ಯಾರಿಗೂ ಸೇರದ ಎರಡೂ ದೇಶಕ್ಕೂ ಸೇರದ ಸ್ಥಳವಾಗಿದೆ’ ಎಂದಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-485388186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>