ವಿಶ್ವಸಂಸ್ಥೆ: ‘ಮ್ಯಾನ್ಮಾರ್ನಲ್ಲಿನ ಯಾವುದೇ ಅಸ್ಥಿರತೆಯೂ ಭಾರತದ ಮೇಲೆ ನೇರ ಪರಿಣಾಮ ಬೀರುತ್ತದೆ. ಹಾಗಾಗಿ ಮ್ಯಾನ್ಮಾರ್ ಅನ್ನು ಇನ್ನಷ್ಟು ಅಸ್ಥಿರಗೊಳಿಸುವ ಅಂತರರಾಷ್ಟ್ರೀಯ ಸಮುದಾಯದ ಕ್ರಮವನ್ನು ಭಾರತ ಬೆಂಬಲಿಸುವುದಿಲ್ಲ’ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಆಗಸ್ಟ್ ತಿಂಗಳ ಅಧ್ಯಕ್ಷ, ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು ಹೇಳಿದ್ದಾರೆ.