<p><strong>ವಾಷಿಂಗ್ಟನ್:</strong> ಭಾರತವು ಪ್ರಜಾಸತ್ತಾತ್ಮಕ ಲಾಭಾಂಶವನ್ನು ಪಡೆಯುತ್ತಿಲ್ಲ ಎಂದು ಹೇಳಿರುವ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ಮಾನವ ಬಂಡವಾಳವನ್ನು ಸುಧಾರಿಸಲು ಮತ್ತು ಕೌಶಲ ಹೆಚ್ಚಿಸಲು ಗಮನಹರಿಸಬೇಕಾದ ಅಗತ್ಯವಿದೆ ಎಂದು ಮಂಗಳವಾರ ಪ್ರತಿಪಾದಿಸಿದ್ದಾರೆ.</p>.<p>ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಭಾರತವನ್ನು 2047ರ ಹೊತ್ತಿಗೆ ಸುಧಾರಿತ ಆರ್ಥಿಕತೆಯನ್ನಾಗಿ ಮಾಡುವುದು ಹೇಗೆ: ಅದರ ಅಗತ್ಯಗಳೇನು?’ ಎಂಬ ವಿಷಯ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ನಮ್ಮ ಯುವ ಜನರಿಗೆ ಉದ್ಯೋಗಗಳನ್ನು ನೀಡದ ಕಾರಣ ಜನಸಂಖ್ಯೆಯ ಲಾಭಾಂಶವನ್ನು ಕಳೆದುಕೊಳ್ಳುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಉದ್ಯೋಗಗಳನ್ನು ಹೇಗೆ ಸೃಷ್ಟಿಸಬಹುದು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಇದಕ್ಕೆ ನಮ್ಮ ಜನರ ಸಾಮರ್ಥ್ಯವನ್ನು ಭಾಗಶಃ ಹೆಚ್ಚಿಸಬೇಕು ಮತ್ತು ಲಭ್ಯವಿರುವ ಉದ್ಯೋಗಗಳ ಸ್ವರೂಪವನ್ನೂ ಭಾಗಶಃ ಬದಲಿಸಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ’ ಎಂದಿದ್ದಾರೆ.</p>.<p>ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಶಿಷ್ಯವೇತನದ ಪ್ರಸ್ತಾಪ ಮಾಡಿರುವುದು ಯೋಗ್ಯವಾಗಿದೆ. ಇದನ್ನು ಬಹಳಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದೆ. ಉತ್ತಮ ಕೆಲಸ ಮಾಡುವ ಸಾಮರ್ಥ್ಯ ಹೊಂದಲು ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಬೇಕಾಗುತ್ತಾರೆ ಎಂದರು.</p>.<p>ಚಿಪ್ ತಯಾರಿಕೆಯಲ್ಲಿ ಭಾರತ ಶತಕೋಟಿ ಡಾಲರ್ಗಳನ್ನು ವ್ಯಯಿಸುತ್ತಿದೆ ಎಂದು ಟೀಕಿಸಿದ ಅವರು, ಇದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ನೀಡಬೇಕಾಗುತ್ತದೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ದೇಶದಲ್ಲಿನ ಉದ್ಯೋಗ ಸಮಸ್ಯೆ ಕಳೆದ 10 ವರ್ಷಗಳಲ್ಲಿ ಸೃಷ್ಟಿಯಾಗಿದ್ದಲ್ಲ. ಇದು ಕಳೆದ ಕೆಲವು ದಶಕಗಳಿಂದ ಬೆಳೆಯುತ್ತ ಬಂದಿದೆ. ಇದನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಭಾರತೀಯ ನವೋದ್ಯಮಿಗಳು ಸಿಂಗಪುರಕ್ಕೆ ಹೋಗಲು ಬಯಸುತ್ತಿದ್ದಾರೆ. ಏಕೆಂದರೆ, ಅವರು ಅಲ್ಲಿ ಸುಲಭವಾಗಿ ಮಾರುಕಟ್ಟೆಗಳಿಗೆ ಪ್ರವೇಶ ಕಂಡುಕೊಳ್ಳುತ್ತಾರೆ. ಅವರು ವಾಸ್ತವದಲ್ಲಿ ಜಾಗತಿಕವಾಗಿ ತಮ್ಮ ಉದ್ಯಮವನ್ನು ಹೆಚ್ಚು ವಿಸ್ತರಿಸಲು ಉತ್ಸುಕರಾಗಿದ್ದಾರೆ’ ಎಂದಿದ್ದಾರೆ.</p>.<p>‘ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಂತಹದ್ದೇ ಮನಃಸ್ಥಿತಿ ಹೊಂದಿರುವ ಯುವ ಭಾರತ ನಮ್ಮ ಮುಂದಿದೆ ಎಂದು ನಾನು ಭಾವಿಸುತ್ತೇನೆ’ ಎಂದ ಅವರು, ‘ವಿಶ್ವದಲ್ಲಿ ನಾವು ಯಾರಿಗಿಂತಲೂ ಕಡಿಮೆಯಿಲ್ಲ’ ಎಂದು ಹೇಳಿದ್ದಾರೆ.</p>.<p>‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಏರುಗತಿಯಲ್ಲಿದೆ. ಕಾರ್ಮಿಕ ವರ್ಗದ ಭಾಗವಹಿಸುವಿಕೆ ಕಡಿಮೆಯಾಗಿದೆ. ಸರ್ಕಾರಿ ಉದ್ಯೋಗಗಳಿಗೆ ಬೃಹತ್ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ರೈಲ್ವೆಯ ಗುಮಾಸ್ತ ಹುದ್ದೆಗೆ ಪಿಎಚ್.ಡಿ ಪದವೀಧರರು ಅರ್ಜಿ ಸಲ್ಲಿಸುತ್ತಿದ್ದಾರೆ’ ಎಂದು ಅವರು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಭಾರತವು ಪ್ರಜಾಸತ್ತಾತ್ಮಕ ಲಾಭಾಂಶವನ್ನು ಪಡೆಯುತ್ತಿಲ್ಲ ಎಂದು ಹೇಳಿರುವ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ಮಾನವ ಬಂಡವಾಳವನ್ನು ಸುಧಾರಿಸಲು ಮತ್ತು ಕೌಶಲ ಹೆಚ್ಚಿಸಲು ಗಮನಹರಿಸಬೇಕಾದ ಅಗತ್ಯವಿದೆ ಎಂದು ಮಂಗಳವಾರ ಪ್ರತಿಪಾದಿಸಿದ್ದಾರೆ.</p>.<p>ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಭಾರತವನ್ನು 2047ರ ಹೊತ್ತಿಗೆ ಸುಧಾರಿತ ಆರ್ಥಿಕತೆಯನ್ನಾಗಿ ಮಾಡುವುದು ಹೇಗೆ: ಅದರ ಅಗತ್ಯಗಳೇನು?’ ಎಂಬ ವಿಷಯ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ನಮ್ಮ ಯುವ ಜನರಿಗೆ ಉದ್ಯೋಗಗಳನ್ನು ನೀಡದ ಕಾರಣ ಜನಸಂಖ್ಯೆಯ ಲಾಭಾಂಶವನ್ನು ಕಳೆದುಕೊಳ್ಳುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಉದ್ಯೋಗಗಳನ್ನು ಹೇಗೆ ಸೃಷ್ಟಿಸಬಹುದು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಇದಕ್ಕೆ ನಮ್ಮ ಜನರ ಸಾಮರ್ಥ್ಯವನ್ನು ಭಾಗಶಃ ಹೆಚ್ಚಿಸಬೇಕು ಮತ್ತು ಲಭ್ಯವಿರುವ ಉದ್ಯೋಗಗಳ ಸ್ವರೂಪವನ್ನೂ ಭಾಗಶಃ ಬದಲಿಸಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ’ ಎಂದಿದ್ದಾರೆ.</p>.<p>ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಶಿಷ್ಯವೇತನದ ಪ್ರಸ್ತಾಪ ಮಾಡಿರುವುದು ಯೋಗ್ಯವಾಗಿದೆ. ಇದನ್ನು ಬಹಳಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದೆ. ಉತ್ತಮ ಕೆಲಸ ಮಾಡುವ ಸಾಮರ್ಥ್ಯ ಹೊಂದಲು ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಬೇಕಾಗುತ್ತಾರೆ ಎಂದರು.</p>.<p>ಚಿಪ್ ತಯಾರಿಕೆಯಲ್ಲಿ ಭಾರತ ಶತಕೋಟಿ ಡಾಲರ್ಗಳನ್ನು ವ್ಯಯಿಸುತ್ತಿದೆ ಎಂದು ಟೀಕಿಸಿದ ಅವರು, ಇದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ನೀಡಬೇಕಾಗುತ್ತದೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ದೇಶದಲ್ಲಿನ ಉದ್ಯೋಗ ಸಮಸ್ಯೆ ಕಳೆದ 10 ವರ್ಷಗಳಲ್ಲಿ ಸೃಷ್ಟಿಯಾಗಿದ್ದಲ್ಲ. ಇದು ಕಳೆದ ಕೆಲವು ದಶಕಗಳಿಂದ ಬೆಳೆಯುತ್ತ ಬಂದಿದೆ. ಇದನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಭಾರತೀಯ ನವೋದ್ಯಮಿಗಳು ಸಿಂಗಪುರಕ್ಕೆ ಹೋಗಲು ಬಯಸುತ್ತಿದ್ದಾರೆ. ಏಕೆಂದರೆ, ಅವರು ಅಲ್ಲಿ ಸುಲಭವಾಗಿ ಮಾರುಕಟ್ಟೆಗಳಿಗೆ ಪ್ರವೇಶ ಕಂಡುಕೊಳ್ಳುತ್ತಾರೆ. ಅವರು ವಾಸ್ತವದಲ್ಲಿ ಜಾಗತಿಕವಾಗಿ ತಮ್ಮ ಉದ್ಯಮವನ್ನು ಹೆಚ್ಚು ವಿಸ್ತರಿಸಲು ಉತ್ಸುಕರಾಗಿದ್ದಾರೆ’ ಎಂದಿದ್ದಾರೆ.</p>.<p>‘ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಂತಹದ್ದೇ ಮನಃಸ್ಥಿತಿ ಹೊಂದಿರುವ ಯುವ ಭಾರತ ನಮ್ಮ ಮುಂದಿದೆ ಎಂದು ನಾನು ಭಾವಿಸುತ್ತೇನೆ’ ಎಂದ ಅವರು, ‘ವಿಶ್ವದಲ್ಲಿ ನಾವು ಯಾರಿಗಿಂತಲೂ ಕಡಿಮೆಯಿಲ್ಲ’ ಎಂದು ಹೇಳಿದ್ದಾರೆ.</p>.<p>‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಏರುಗತಿಯಲ್ಲಿದೆ. ಕಾರ್ಮಿಕ ವರ್ಗದ ಭಾಗವಹಿಸುವಿಕೆ ಕಡಿಮೆಯಾಗಿದೆ. ಸರ್ಕಾರಿ ಉದ್ಯೋಗಗಳಿಗೆ ಬೃಹತ್ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ರೈಲ್ವೆಯ ಗುಮಾಸ್ತ ಹುದ್ದೆಗೆ ಪಿಎಚ್.ಡಿ ಪದವೀಧರರು ಅರ್ಜಿ ಸಲ್ಲಿಸುತ್ತಿದ್ದಾರೆ’ ಎಂದು ಅವರು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>