<p><strong>ಒಟ್ಟಾವ</strong>: ಬ್ರಿಟಿಷ್ ಕೊಲಂಬಿಯಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಭಾರತವು ಕೆನಡಾ ಸರ್ಕಾರಕ್ಕೆ ಸಹಕಾರ ನೀಡುತ್ತಿದೆ. ಅಲ್ಲದೆ, ಹದಗೆಟ್ಟಿದ್ದ ಉಭಯ ದೇಶಗಳ ನಡುವಿನ ಸಂಬಂಧವು ಸುಧಾರಿಸುತ್ತಿದೆ ಎಂದು ಕೆನಡಾದ ರಾಷ್ಟ್ರೀಯ ಭದ್ರತೆಯ ಮಾಜಿ ಸಲಹೆಗಾರ್ತಿ ಹೇಳಿದರು.</p>.<p>ಶುಕ್ರವಾರ ಸಿಟಿವಿ ಜೊತೆ ಸಂದರ್ಶನದಲ್ಲಿ ಭಾಗಿಯಾದ ಕೆನಡಾದ ರಾಷ್ಟ್ರೀಯ ಭದ್ರತೆಯ ಮಾಜಿ ಸಲಹೆಗಾರ್ತಿ ಜೊಡಿ ಥಾಮಸ್, ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಕೊಲೆ ಪ್ರಕರಣದ ತನಿಖೆಗೆ ಭಾರತ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು. </p>.<p>ನಿಜ್ಜಾರ್ ಹತ್ಯೆ ಪ್ರಕರಣದ ತನಿಖೆಗೆ ಭಾರತ ಸಹಕಾರ ನೀಡುತ್ತಿಲ್ಲ ಎಂಬ ಆರೋಪದಿಂದಾಗಿ ಉಭಯ ದೇಶಗಳ ಸಂಬಂಧ ಹದಗೆಟ್ಟ ಬಳಿಕ ಇದೇ ಮೊದಲ ಬಾರಿಗೆ ಕೆನಡಾದ ಅಧಿಕಾರಿಯೊಬ್ಬರು, ಭಾರತ ಸಹಕಾರ ನೀಡುತ್ತಿದೆ ಎಂದು ಒಪ್ಪಿಕೊಂಡಂತಾಗಿದೆ. </p>.<p>ಹಲವು ತಿಂಗಳುಗಳ ವೈಷಮ್ಯದ ಬಳಿಕ ಭಾರತದ ಜೊತೆ ಆರೋಗ್ಯಕರ ಸಂಬಂಧದ ನಿಟ್ಟಿನಲ್ಲಿ ಕೆನಡಾ ಕಾರ್ಯಪ್ರವೃತ್ತವಾಗಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ</strong>: ಬ್ರಿಟಿಷ್ ಕೊಲಂಬಿಯಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಭಾರತವು ಕೆನಡಾ ಸರ್ಕಾರಕ್ಕೆ ಸಹಕಾರ ನೀಡುತ್ತಿದೆ. ಅಲ್ಲದೆ, ಹದಗೆಟ್ಟಿದ್ದ ಉಭಯ ದೇಶಗಳ ನಡುವಿನ ಸಂಬಂಧವು ಸುಧಾರಿಸುತ್ತಿದೆ ಎಂದು ಕೆನಡಾದ ರಾಷ್ಟ್ರೀಯ ಭದ್ರತೆಯ ಮಾಜಿ ಸಲಹೆಗಾರ್ತಿ ಹೇಳಿದರು.</p>.<p>ಶುಕ್ರವಾರ ಸಿಟಿವಿ ಜೊತೆ ಸಂದರ್ಶನದಲ್ಲಿ ಭಾಗಿಯಾದ ಕೆನಡಾದ ರಾಷ್ಟ್ರೀಯ ಭದ್ರತೆಯ ಮಾಜಿ ಸಲಹೆಗಾರ್ತಿ ಜೊಡಿ ಥಾಮಸ್, ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಕೊಲೆ ಪ್ರಕರಣದ ತನಿಖೆಗೆ ಭಾರತ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು. </p>.<p>ನಿಜ್ಜಾರ್ ಹತ್ಯೆ ಪ್ರಕರಣದ ತನಿಖೆಗೆ ಭಾರತ ಸಹಕಾರ ನೀಡುತ್ತಿಲ್ಲ ಎಂಬ ಆರೋಪದಿಂದಾಗಿ ಉಭಯ ದೇಶಗಳ ಸಂಬಂಧ ಹದಗೆಟ್ಟ ಬಳಿಕ ಇದೇ ಮೊದಲ ಬಾರಿಗೆ ಕೆನಡಾದ ಅಧಿಕಾರಿಯೊಬ್ಬರು, ಭಾರತ ಸಹಕಾರ ನೀಡುತ್ತಿದೆ ಎಂದು ಒಪ್ಪಿಕೊಂಡಂತಾಗಿದೆ. </p>.<p>ಹಲವು ತಿಂಗಳುಗಳ ವೈಷಮ್ಯದ ಬಳಿಕ ಭಾರತದ ಜೊತೆ ಆರೋಗ್ಯಕರ ಸಂಬಂಧದ ನಿಟ್ಟಿನಲ್ಲಿ ಕೆನಡಾ ಕಾರ್ಯಪ್ರವೃತ್ತವಾಗಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>