<p><strong>ಢಾಕಾ:</strong> ಬಾಂಗ್ಲಾದೇಶದ ಗಡಿಯಲ್ಲಿ ಹರಿಯುವ ತೀಸ್ತಾ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಭಾರತ ಬೆಂಬಲ ವ್ಯಕ್ತಪಡಿಸಿದೆ ಎಂದು ಬಾಂಗ್ಲಾದ ವಿದೇಶಾಂಗ ಸಚಿವ ಹಸನ್ ಮಹಮೂದ್ ಗುರುವಾರ ತಿಳಿಸಿದರು.</p>.<p>ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಬಾಂಗ್ಲಾದ ವಿದೇಶಾಂಗ ಸಚಿವರ ಜತೆ ಮಾತುಕತೆ ನಡೆಸಿದ ಬಳಿಕ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ತೀಸ್ತಾ ನದಿ ನೀರಿನ ಹಂಚಿಕೆಯು ನವದೆಹಲಿ ಮತ್ತು ಢಾಕಾ ನಡುವೆ ವಿವಾದಾತ್ಮಕ ವಿಷಯವಾಗಿ ಉಳಿದಿದೆ. ಇಲ್ಲಿ ಜಲಾಶಯ ನಿರ್ಮಿಸುವ ಯೋಜನೆ ಕೈಗೊಳ್ಳಲು ಬಾಂಗ್ಲಾ ಮುಂದಾಗಿದ್ದು, ಅದಕ್ಕೆ ಬೀಜಿಂಗ್ ತಕ್ಷಣವೇ ತನ್ನ ಬೆಂಬಲ ವ್ಯಕ್ತಪಡಿಸಿತ್ತು. </p>.<p>‘ನಮ್ಮ ತೀಸ್ತಾ ಯೋಜನೆಗೆ ಭಾರತವು ಹಣಕಾಸು ನೀಡಲು ಬಯಸುತ್ತಿದೆ. ಯೋಜನೆಯು ನಮ್ಮ ಅಗತ್ಯಗಳಿಗೆ ಅನುಗುಣವಾಗಿ ಇರಬೇಕು ಮತ್ತು ನಮ್ಮ ಅಗತ್ಯಗಳನ್ನು ಪೂರೈಸಬೇಕು ಎಂದು ನಾವು ಹೇಳಿದ್ದೇವೆ’ ಎಂದು ಸಚಿವರು ತಿಳಿಸಿದರು. ಆದರೆ ಭಾರತದ ಪ್ರಸ್ತಾವನೆ ಕುರಿತು ಸಚಿವರು ಹೆಚ್ಚಿನ ವಿವರ ನೀಡಲಿಲ್ಲ.</p>.<p>ಇದಕ್ಕೂ ಮುನ್ನಾ ಕ್ವಾತ್ರಾ ಅವರು ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಹಸೀನಾ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಕ್ವಾತ್ರಾ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದ ಗಡಿಯಲ್ಲಿ ಹರಿಯುವ ತೀಸ್ತಾ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಭಾರತ ಬೆಂಬಲ ವ್ಯಕ್ತಪಡಿಸಿದೆ ಎಂದು ಬಾಂಗ್ಲಾದ ವಿದೇಶಾಂಗ ಸಚಿವ ಹಸನ್ ಮಹಮೂದ್ ಗುರುವಾರ ತಿಳಿಸಿದರು.</p>.<p>ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಬಾಂಗ್ಲಾದ ವಿದೇಶಾಂಗ ಸಚಿವರ ಜತೆ ಮಾತುಕತೆ ನಡೆಸಿದ ಬಳಿಕ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ತೀಸ್ತಾ ನದಿ ನೀರಿನ ಹಂಚಿಕೆಯು ನವದೆಹಲಿ ಮತ್ತು ಢಾಕಾ ನಡುವೆ ವಿವಾದಾತ್ಮಕ ವಿಷಯವಾಗಿ ಉಳಿದಿದೆ. ಇಲ್ಲಿ ಜಲಾಶಯ ನಿರ್ಮಿಸುವ ಯೋಜನೆ ಕೈಗೊಳ್ಳಲು ಬಾಂಗ್ಲಾ ಮುಂದಾಗಿದ್ದು, ಅದಕ್ಕೆ ಬೀಜಿಂಗ್ ತಕ್ಷಣವೇ ತನ್ನ ಬೆಂಬಲ ವ್ಯಕ್ತಪಡಿಸಿತ್ತು. </p>.<p>‘ನಮ್ಮ ತೀಸ್ತಾ ಯೋಜನೆಗೆ ಭಾರತವು ಹಣಕಾಸು ನೀಡಲು ಬಯಸುತ್ತಿದೆ. ಯೋಜನೆಯು ನಮ್ಮ ಅಗತ್ಯಗಳಿಗೆ ಅನುಗುಣವಾಗಿ ಇರಬೇಕು ಮತ್ತು ನಮ್ಮ ಅಗತ್ಯಗಳನ್ನು ಪೂರೈಸಬೇಕು ಎಂದು ನಾವು ಹೇಳಿದ್ದೇವೆ’ ಎಂದು ಸಚಿವರು ತಿಳಿಸಿದರು. ಆದರೆ ಭಾರತದ ಪ್ರಸ್ತಾವನೆ ಕುರಿತು ಸಚಿವರು ಹೆಚ್ಚಿನ ವಿವರ ನೀಡಲಿಲ್ಲ.</p>.<p>ಇದಕ್ಕೂ ಮುನ್ನಾ ಕ್ವಾತ್ರಾ ಅವರು ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಹಸೀನಾ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಕ್ವಾತ್ರಾ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>