<p><strong>ವಾಷಿಂಗ್ಟನ್:</strong> 'ಭಾರತವು ಅಮೆರಿಕದ ಅಧ್ಯಕ್ಷಗಿರಿಯನ್ನು ಗೌರವಿಸುತ್ತದೆ. ಆದರೆ ಭಾರತ-ಪಾಕಿಸ್ತಾನ ವಿಷಯದಲ್ಲಿ ಯಾರೂ ಮಧ್ಯಸ್ಥಿಕೆ ವಹಿಸುವುದನ್ನು ಬಯಸುವುದಿಲ್ಲ' ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. </p><p>ಇತ್ತೀಚೆಗಿನ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದರು ಎಂಬುದರ ಕುರಿತಾಗಿ ಪ್ರತಿಕ್ರಿಯಿಸಿದ ತರೂರ್, 'ಕಾರ್ಯಾಚರಣೆ 'ನಿಲ್ಲಿಸಿ' ಅಂತ ಭಾರತಕ್ಕೆ ಯಾರೂ ಹೇಳಬೇಕಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಆಪರೇಷನ್ ಸಿಂಧೂರ' ಹಾಗೂ ಪಾಕಿಸ್ತಾನದ ಭಯೋತ್ಪಾದನೆ ಚಟುವಟಿಕೆಗಳ ಕುರಿತು ಜಾಗತಿಕ ರಾಷ್ಟ್ರಗಳಿಗೆ ವಿವರಿಸುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ತರೂರ್, ಅಮೆರಿಕದ ಸರ್ಕಾರದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. </p><p>'ನಾವು ಅಮೆರಿಕದ ಅಧ್ಯಕ್ಷಗಿರಿ ಹಾಗೂ ಅಮೆರಿಕದ ಅಧ್ಯಕ್ಷರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇವೆ. ಆದರೆ ಈ ವಿಷಯದಲ್ಲಿ ಯಾರಾದರೂ ಮಧ್ಯಸ್ಥಿಕೆ ವಹಿಸಬೇಕು ಎಂದು ಭಾರತ ಎಂದಿಗೂ ಬಯಸಿಲ್ಲ' ಎಂದು ಹೇಳಿದ್ದಾರೆ. </p><p>ರಾಷ್ಟ್ರೀಯ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ತರೂರ್, 'ಪಾಕಿಸ್ತಾನ ಭಯೋತ್ಪಾದನೆಯ ಭಾಷೆಯನ್ನು ಬಳಸುವವರೆಗೂ ನಾವು ಸೇನೆಯ ಭಾಷೆ ಬಳಸುವುದರಲ್ಲಿ ಯಾವುದೇ ತಪ್ಪು ಇಲ್ಲ. ಹಾಗಾಗಿ ಮೂರನೇ ವ್ಯಕ್ತಿಯ ಅಗತ್ಯವಿಲ್ಲ' ಎಂದು ಹೇಳಿದ್ದಾರೆ. </p><p>'ನಮ್ಮೊಂದಿಗೆ ಸಹಜ ಬಾಂಧವ್ಯ ಪುನಃಸ್ಥಾಪಿಸಲು ಪಾಕಿಸ್ತಾನ ನಿಜವಾಗಿಯೂ ಬಯಸುವುದಾದರೆ ಆ ನಿಟ್ಟಿನಲ್ಲಿ ಗಂಭೀರವಾದ ಕ್ರಮ ಕೈಗೊಂಡಲ್ಲಿ ನಮಗೆ ಮಧ್ಯವರ್ತಿಗಳ ಸಹಾಯವಿಲ್ಲದೆ ಮಾತುಕತೆ ನಡೆಸಬಹುದಾಗಿದೆ' ಎಂದು ಹೇಳಿದ್ದಾರೆ. </p><p>'ಹಾಗಾಗಿ ಸಂಘರ್ಷದ ಸಮಯದಲ್ಲೂ ಯಾರೂ ನಮಗೆ 'ನಿಲ್ಲಿಸಿ' ಎಂದು ಹೇಳುವ ಅಗತ್ಯವಿಲ್ಲ. ಪಾಕಿಸ್ತಾನ ನಿಲ್ಲಿಸಿದಾಕ್ಷಣ ನಿಲ್ಲಿಸಲು ನಾವು ಸಿದ್ಧರಿದ್ದೆವು' ಎಂದು ಹೇಳಿದ್ದಾರೆ. </p> .ಭಯೋತ್ಪಾದನೆ ವಿರುದ್ಧ ಹೋರಾಟ: ಬ್ರೆಜಿಲ್ ತಲುಪಿದ ತರೂರ್ ನೇತೃತ್ವದ ನಿಯೋಗ.ಪ್ರತೀಕಾರದ ಬಗ್ಗೆ ಮಾತ್ರ ಮಾತನಾಡಿರುವೆ: ಪಕ್ಷದ ನಾಯಕರ ಆರೋಪಗಳಿಗೆ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> 'ಭಾರತವು ಅಮೆರಿಕದ ಅಧ್ಯಕ್ಷಗಿರಿಯನ್ನು ಗೌರವಿಸುತ್ತದೆ. ಆದರೆ ಭಾರತ-ಪಾಕಿಸ್ತಾನ ವಿಷಯದಲ್ಲಿ ಯಾರೂ ಮಧ್ಯಸ್ಥಿಕೆ ವಹಿಸುವುದನ್ನು ಬಯಸುವುದಿಲ್ಲ' ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. </p><p>ಇತ್ತೀಚೆಗಿನ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದರು ಎಂಬುದರ ಕುರಿತಾಗಿ ಪ್ರತಿಕ್ರಿಯಿಸಿದ ತರೂರ್, 'ಕಾರ್ಯಾಚರಣೆ 'ನಿಲ್ಲಿಸಿ' ಅಂತ ಭಾರತಕ್ಕೆ ಯಾರೂ ಹೇಳಬೇಕಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಆಪರೇಷನ್ ಸಿಂಧೂರ' ಹಾಗೂ ಪಾಕಿಸ್ತಾನದ ಭಯೋತ್ಪಾದನೆ ಚಟುವಟಿಕೆಗಳ ಕುರಿತು ಜಾಗತಿಕ ರಾಷ್ಟ್ರಗಳಿಗೆ ವಿವರಿಸುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ತರೂರ್, ಅಮೆರಿಕದ ಸರ್ಕಾರದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. </p><p>'ನಾವು ಅಮೆರಿಕದ ಅಧ್ಯಕ್ಷಗಿರಿ ಹಾಗೂ ಅಮೆರಿಕದ ಅಧ್ಯಕ್ಷರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇವೆ. ಆದರೆ ಈ ವಿಷಯದಲ್ಲಿ ಯಾರಾದರೂ ಮಧ್ಯಸ್ಥಿಕೆ ವಹಿಸಬೇಕು ಎಂದು ಭಾರತ ಎಂದಿಗೂ ಬಯಸಿಲ್ಲ' ಎಂದು ಹೇಳಿದ್ದಾರೆ. </p><p>ರಾಷ್ಟ್ರೀಯ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ತರೂರ್, 'ಪಾಕಿಸ್ತಾನ ಭಯೋತ್ಪಾದನೆಯ ಭಾಷೆಯನ್ನು ಬಳಸುವವರೆಗೂ ನಾವು ಸೇನೆಯ ಭಾಷೆ ಬಳಸುವುದರಲ್ಲಿ ಯಾವುದೇ ತಪ್ಪು ಇಲ್ಲ. ಹಾಗಾಗಿ ಮೂರನೇ ವ್ಯಕ್ತಿಯ ಅಗತ್ಯವಿಲ್ಲ' ಎಂದು ಹೇಳಿದ್ದಾರೆ. </p><p>'ನಮ್ಮೊಂದಿಗೆ ಸಹಜ ಬಾಂಧವ್ಯ ಪುನಃಸ್ಥಾಪಿಸಲು ಪಾಕಿಸ್ತಾನ ನಿಜವಾಗಿಯೂ ಬಯಸುವುದಾದರೆ ಆ ನಿಟ್ಟಿನಲ್ಲಿ ಗಂಭೀರವಾದ ಕ್ರಮ ಕೈಗೊಂಡಲ್ಲಿ ನಮಗೆ ಮಧ್ಯವರ್ತಿಗಳ ಸಹಾಯವಿಲ್ಲದೆ ಮಾತುಕತೆ ನಡೆಸಬಹುದಾಗಿದೆ' ಎಂದು ಹೇಳಿದ್ದಾರೆ. </p><p>'ಹಾಗಾಗಿ ಸಂಘರ್ಷದ ಸಮಯದಲ್ಲೂ ಯಾರೂ ನಮಗೆ 'ನಿಲ್ಲಿಸಿ' ಎಂದು ಹೇಳುವ ಅಗತ್ಯವಿಲ್ಲ. ಪಾಕಿಸ್ತಾನ ನಿಲ್ಲಿಸಿದಾಕ್ಷಣ ನಿಲ್ಲಿಸಲು ನಾವು ಸಿದ್ಧರಿದ್ದೆವು' ಎಂದು ಹೇಳಿದ್ದಾರೆ. </p> .ಭಯೋತ್ಪಾದನೆ ವಿರುದ್ಧ ಹೋರಾಟ: ಬ್ರೆಜಿಲ್ ತಲುಪಿದ ತರೂರ್ ನೇತೃತ್ವದ ನಿಯೋಗ.ಪ್ರತೀಕಾರದ ಬಗ್ಗೆ ಮಾತ್ರ ಮಾತನಾಡಿರುವೆ: ಪಕ್ಷದ ನಾಯಕರ ಆರೋಪಗಳಿಗೆ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>