<p><strong>ವಿಶ್ವಸಂಸ್ಥೆ</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ.</p><p>ಈ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಒಡ್ಡಿದ್ದರು ಎಂದು ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.</p><p>ದಾಳಿಯ ವೇಳೆ ಪ್ರವಾಸಿಗರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ಕೊಂದಿರುವ ಬಗ್ಗೆಯೂ ಭದ್ರತಾ ಮಂಡಳಿಯ ಕೆಲವು ಸದಸ್ಯರು ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.</p>.IPL 2025 | ಮುಂಬೈ–ಗುಜರಾತ್ ಸೆಣಸು ಇಂದು: ಬಲಾಢ್ಯರ ಹಣಾಹಣಿಗೆ ವಾಂಖೆಡೆ ಸಿದ್ಧ.ಆರೋಪಿಗಳ ಪರ ವರದಿ ಸಲ್ಲಿಕೆಗೆ ₹1 ಲಕ್ಷ ಲಂಚ: ಪಿಐ, ಪಿಎಸ್ಐ ಲೋಕಾ ಬಲೆಗೆ. <p>ಪರಿಸ್ಥಿತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ದೇಶದ ಪರ ಗಮನ ಸೆಳೆಯಲು ಪಾಕಿಸ್ತಾನ ಮಾಡಿದ ಪ್ರಯತ್ನಗಳು ವಿಫಲವಾದವು. ಭಾರತದೊಂದಿಗೆ ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.</p><p>ಭದ್ರತಾ ಮಂಡಳಿಯ 15 ಕಾಯಂ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿರುವ ಪಾಕಿಸ್ತಾನ, ಪರಿಸ್ಥಿತಿಯ ಕುರಿತು ರಹಸ್ಯ ಸಮಾಲೋಚನೆ ನಡೆಸುವಂತೆ ಕೋರಿತ್ತು.</p><p>ಪರಮಾಣು ಶಸ್ತ್ರಸಜ್ಜಿತ ಉಭಯ ದೇಶಗಳ ನಡುವಿನ ಉದ್ವಿಗ್ನತೆ ವರ್ಷಗಳಲ್ಲಿಯೇ ಎತ್ತರದ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದರು.</p>.ಬೆಂಗಳೂರು: ಔಷಧ ಅಂಗಡಿ ಮಾಲೀಕನಿಗೆ ವಂಚಿಸಿದ ಆರೋಪ;ಮೂವರು ಕಾನ್ಸ್ಟೆಬಲ್ಗಳ ಬಂಧನ .Bengaluru Crime | ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ .Met Gala | ಮೊದಲ ಬಾರಿ ಭಾಗಿಯಾದ ಶಾರುಕ್, ದಿಲ್ಜಿತ್; ಬಾಲಿವುಡ್ ತಾರೆಯರ ಮಿಂಚು.ಸತತ 12ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಭಾರತ ಪ್ರತ್ಯುತ್ತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ.</p><p>ಈ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಒಡ್ಡಿದ್ದರು ಎಂದು ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.</p><p>ದಾಳಿಯ ವೇಳೆ ಪ್ರವಾಸಿಗರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ಕೊಂದಿರುವ ಬಗ್ಗೆಯೂ ಭದ್ರತಾ ಮಂಡಳಿಯ ಕೆಲವು ಸದಸ್ಯರು ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.</p>.IPL 2025 | ಮುಂಬೈ–ಗುಜರಾತ್ ಸೆಣಸು ಇಂದು: ಬಲಾಢ್ಯರ ಹಣಾಹಣಿಗೆ ವಾಂಖೆಡೆ ಸಿದ್ಧ.ಆರೋಪಿಗಳ ಪರ ವರದಿ ಸಲ್ಲಿಕೆಗೆ ₹1 ಲಕ್ಷ ಲಂಚ: ಪಿಐ, ಪಿಎಸ್ಐ ಲೋಕಾ ಬಲೆಗೆ. <p>ಪರಿಸ್ಥಿತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ದೇಶದ ಪರ ಗಮನ ಸೆಳೆಯಲು ಪಾಕಿಸ್ತಾನ ಮಾಡಿದ ಪ್ರಯತ್ನಗಳು ವಿಫಲವಾದವು. ಭಾರತದೊಂದಿಗೆ ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.</p><p>ಭದ್ರತಾ ಮಂಡಳಿಯ 15 ಕಾಯಂ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿರುವ ಪಾಕಿಸ್ತಾನ, ಪರಿಸ್ಥಿತಿಯ ಕುರಿತು ರಹಸ್ಯ ಸಮಾಲೋಚನೆ ನಡೆಸುವಂತೆ ಕೋರಿತ್ತು.</p><p>ಪರಮಾಣು ಶಸ್ತ್ರಸಜ್ಜಿತ ಉಭಯ ದೇಶಗಳ ನಡುವಿನ ಉದ್ವಿಗ್ನತೆ ವರ್ಷಗಳಲ್ಲಿಯೇ ಎತ್ತರದ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದರು.</p>.ಬೆಂಗಳೂರು: ಔಷಧ ಅಂಗಡಿ ಮಾಲೀಕನಿಗೆ ವಂಚಿಸಿದ ಆರೋಪ;ಮೂವರು ಕಾನ್ಸ್ಟೆಬಲ್ಗಳ ಬಂಧನ .Bengaluru Crime | ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ .Met Gala | ಮೊದಲ ಬಾರಿ ಭಾಗಿಯಾದ ಶಾರುಕ್, ದಿಲ್ಜಿತ್; ಬಾಲಿವುಡ್ ತಾರೆಯರ ಮಿಂಚು.ಸತತ 12ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಭಾರತ ಪ್ರತ್ಯುತ್ತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>