<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಂತರ ಭಾರತೀಯ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿದ ನಂತರ ಉಭಯ ದೇಶಗಳ ಉಂಟಾಗಿರುವ ಉದ್ವಿಗ್ನತೆ ಪೂರ್ಣ ಶಮನವಾಗಿಲ್ಲ.</p>.<p>ಈ ಬೆಳವಣಿಗೆ ನಂತರ, ಪಾಕಿಸ್ತಾನದ ಜೊತೆಗಿನ ಮಾತುಕತೆಯನ್ನು ಮತ್ತೆ ಆರಂಭಿಸುವಂತೆ ಭಾರತದ ಮೇಲೆ ಅಮೆರಿಕ ಒತ್ತಡ ಹೇರುತ್ತಲೇ ಬಂದಿದೆ. ಈಗ, ಮಿತ್ರ ರಾಷ್ಟ್ರವಾದ ರಷ್ಯಾ ಕೂಡ ಈ ಕುರಿತು ಭಾರತದ ಮೇಲೆ ಒತ್ತಡ ಹೇರಲು ಆರಂಭಿಸಿದೆ.</p>.<p>ಉಭಯ ದೇಶಗಳು ಗಡಿಯಾಚೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮೇ 10ರಂದು ನಿಲ್ಲಿಸದ ಬೆನ್ನಲ್ಲೇ, ಪ್ರತಿಕ್ರಿಯಿಸಿದ್ದ ಚೀನಾ, ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆ ನಡೆಸಿ, ಪುನಃ ಸಂಘರ್ಷ ಉದ್ಭವಿಸದಂತೆ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಚೀನಾ ಹೇಳಿತ್ತು.</p>.<p>‘ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮತ್ತೆ ಚಾಲನೆ ನೀಡಬೇಕು. ಉಭಯ ದೇಶಗಳ ನಡುವೆ ವಿಶ್ವಾಸ ವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂಬುದು ರಷ್ಯಾ ಹೇಳುತ್ತಲೇ ಬಂದಿದೆ’ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ವಕ್ತಾರೆ ಮಾರಿಯಾ ಝಖರೋವಾ ಹೇಳಿದ್ದಾರೆ.</p>.<p>ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಕುರಿತಂತೆ ರಷ್ಯಾ ನಿಲುವು ಏನು ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಕಳೆದ 12 ವರ್ಷಗಳಿಂದ ಸ್ಥಗಿತಗೊಂಡಿರುವ ಮಾತುಕತೆಯನ್ನು ಮತ್ತೆ ಆರಂಭಿಸಲು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿದೆ. ‘ಆಪರೇಷನ್ ಸಿಂಧೂರ’ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಸಂದರ್ಭದಲ್ಲಿಯೇ ಅಮೆರಿಕ ಮತ್ತು ರಷ್ಯಾ ಕೂಡ ಉಭಯ ದೇಶಗಳ ನಡುವೆ ನೇರ ಮಾತುಕತೆ ಮತ್ತೆ ಆರಂಭವಾಗಬೇಕು ಎಂಬುದಾಗಿ ಹೇಳುತ್ತಿರುವುದು ಗಮನಾರ್ಹ.</p>.<p>ಭಾರತದ ಜೊತೆ ಮಾತುಕತೆ ಆರಂಭಿಸುವುದಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಕೂಡ ಇಚ್ಛೆ ವ್ಯಕ್ತಪಡಿಸಿದ್ದರು.</p>.<p><strong>ಮಾತುಕತೆ ಆರಂಭಕ್ಕೆ ಡಾರ್ ಕರೆ</strong></p><p>ಇಸ್ಲಾಮಾಬಾದ್: ತಮ್ಮ ನಡುವಿನ ವಿವಾದಾತ್ಮಕ ವಿಷಯಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮುಂದಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಕರೆ ನೀಡಿದ್ದಾರೆ. </p><p>ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಭಯೋತ್ಪಾದನೆಯ ವಿಷಯದ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p><p>ಪಾಕಿಸ್ತಾನದ ಸೆನೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಡಾರ್, ‘ಭಾರತದ ಜತೆ ಮಾತುಕತೆ ನಡೆಸುತ್ತೇವೆ ಎಂದು ನಾವು ಜಗತ್ತಿಗೆ ತಿಳಿಸಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಂತರ ಭಾರತೀಯ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿದ ನಂತರ ಉಭಯ ದೇಶಗಳ ಉಂಟಾಗಿರುವ ಉದ್ವಿಗ್ನತೆ ಪೂರ್ಣ ಶಮನವಾಗಿಲ್ಲ.</p>.<p>ಈ ಬೆಳವಣಿಗೆ ನಂತರ, ಪಾಕಿಸ್ತಾನದ ಜೊತೆಗಿನ ಮಾತುಕತೆಯನ್ನು ಮತ್ತೆ ಆರಂಭಿಸುವಂತೆ ಭಾರತದ ಮೇಲೆ ಅಮೆರಿಕ ಒತ್ತಡ ಹೇರುತ್ತಲೇ ಬಂದಿದೆ. ಈಗ, ಮಿತ್ರ ರಾಷ್ಟ್ರವಾದ ರಷ್ಯಾ ಕೂಡ ಈ ಕುರಿತು ಭಾರತದ ಮೇಲೆ ಒತ್ತಡ ಹೇರಲು ಆರಂಭಿಸಿದೆ.</p>.<p>ಉಭಯ ದೇಶಗಳು ಗಡಿಯಾಚೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮೇ 10ರಂದು ನಿಲ್ಲಿಸದ ಬೆನ್ನಲ್ಲೇ, ಪ್ರತಿಕ್ರಿಯಿಸಿದ್ದ ಚೀನಾ, ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆ ನಡೆಸಿ, ಪುನಃ ಸಂಘರ್ಷ ಉದ್ಭವಿಸದಂತೆ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಚೀನಾ ಹೇಳಿತ್ತು.</p>.<p>‘ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮತ್ತೆ ಚಾಲನೆ ನೀಡಬೇಕು. ಉಭಯ ದೇಶಗಳ ನಡುವೆ ವಿಶ್ವಾಸ ವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂಬುದು ರಷ್ಯಾ ಹೇಳುತ್ತಲೇ ಬಂದಿದೆ’ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ವಕ್ತಾರೆ ಮಾರಿಯಾ ಝಖರೋವಾ ಹೇಳಿದ್ದಾರೆ.</p>.<p>ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಕುರಿತಂತೆ ರಷ್ಯಾ ನಿಲುವು ಏನು ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಕಳೆದ 12 ವರ್ಷಗಳಿಂದ ಸ್ಥಗಿತಗೊಂಡಿರುವ ಮಾತುಕತೆಯನ್ನು ಮತ್ತೆ ಆರಂಭಿಸಲು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿದೆ. ‘ಆಪರೇಷನ್ ಸಿಂಧೂರ’ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಸಂದರ್ಭದಲ್ಲಿಯೇ ಅಮೆರಿಕ ಮತ್ತು ರಷ್ಯಾ ಕೂಡ ಉಭಯ ದೇಶಗಳ ನಡುವೆ ನೇರ ಮಾತುಕತೆ ಮತ್ತೆ ಆರಂಭವಾಗಬೇಕು ಎಂಬುದಾಗಿ ಹೇಳುತ್ತಿರುವುದು ಗಮನಾರ್ಹ.</p>.<p>ಭಾರತದ ಜೊತೆ ಮಾತುಕತೆ ಆರಂಭಿಸುವುದಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಕೂಡ ಇಚ್ಛೆ ವ್ಯಕ್ತಪಡಿಸಿದ್ದರು.</p>.<p><strong>ಮಾತುಕತೆ ಆರಂಭಕ್ಕೆ ಡಾರ್ ಕರೆ</strong></p><p>ಇಸ್ಲಾಮಾಬಾದ್: ತಮ್ಮ ನಡುವಿನ ವಿವಾದಾತ್ಮಕ ವಿಷಯಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮುಂದಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಕರೆ ನೀಡಿದ್ದಾರೆ. </p><p>ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಭಯೋತ್ಪಾದನೆಯ ವಿಷಯದ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p><p>ಪಾಕಿಸ್ತಾನದ ಸೆನೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಡಾರ್, ‘ಭಾರತದ ಜತೆ ಮಾತುಕತೆ ನಡೆಸುತ್ತೇವೆ ಎಂದು ನಾವು ಜಗತ್ತಿಗೆ ತಿಳಿಸಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>