<p><strong>ಮಾಸ್ಕೊ</strong>: ‘ಅಂತರರಾಷ್ಟ್ರೀಯ ಕಾನೂನುಗಳ ರಕ್ಷಣೆಯನ್ನು ಖಾತರಿಪಡಿಸಿಕೊಳ್ಳುವುದರ ಜತೆಗೆ ಆಧುನಿಕ ಸವಾಲುಗಳನ್ನು ಜಂಟಿಯಾಗಿ ಎದುರಿಸಲು ನಾವು ಬದ್ಧರಾಗಿದ್ದೇವೆ. ರಷ್ಯಾ ಮತ್ತು ಭಾರತದ ನಡುವಿನ ಸ್ನೇಹವು ಸರ್ವ ಕಾಲಕ್ಕೂ ಭದ್ರವಾಗಿರಲಿದೆ’ ಎಂದು ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸರ್ಗೆ ಶೊಯಿಗು ಗುರುವಾರ ಹೇಳಿದ್ದಾರೆ.</p>.<p>ಇಂಧನ ಮತ್ತು ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಲು ಹಾಗೂ ಭಾರತಕ್ಕೆ ಪುಟಿನ್ ಭೇಟಿಯ ಸಿದ್ದತೆ ಕುರಿತಂತೆ ಚರ್ಚಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ರಷ್ಯಾಗೆ ತೆರಳಿದ್ದು, ಗುರುವಾರ ಸರ್ಗೆ ಅವರನ್ನು ಭೇಟಿಯಾಗಿದ್ದಾರೆ. </p>.<p>ಈ ವೇಳೆ ಮಾತನಾಡಿರುವ ಸರ್ಗೆ, ‘ಪ್ರಧಾನಿ ಮೋದಿ ಹಾಗೂ ಪುಟಿನ್ ಅವರು ನಿರಂತರ ಸಂಪರ್ಕದಲ್ಲಿದ್ದು, ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಸಂಬಂಧ ಉತ್ತಮವಾಗಿದೆ. ವಿಶ್ವಾಸ, ಪರಸ್ಪರ ಹಿತಾಸಕ್ತಿ, ನಂಬಿಕೆಯ ಆಧಾರದಲ್ಲಿ ಭಾರತದೊಂದಿಗೆ ಹೊಂದಿರುವ ಉತ್ತಮ ಕಾರ್ಯತಂತ್ರ ಪಾಲುದಾರಿಕೆಯನ್ನು ಬಲಗೊಳಿಸುವುದು ರಷ್ಯಾದ ಆದ್ಯತೆ’ ಎಂದಿದ್ದಾರೆ.</p>.<p>‘ಅಲ್ಲದೇ, ಭಾರತ–ರಷ್ಯಾ ನಡುವಿನ ಸಂಬಂಧವು ಸರ್ವಕಾಲಕ್ಕೂ ಭದ್ರವಾಗಿ ಇರಲಿದೆ ಎಂದಿರುವ ಅವರು, ಶೀಘ್ರವೇ ನಮ್ಮ ನಾಯಕರ ನಡುವೆ ಪೂರ್ಣ ಪ್ರಮಾಣದ ಮಾತುಕತೆಯೂ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲಿದ್ದೇವೆ’ ಎಂದೂ ತಿಳಿಸಿದ್ದಾರೆ.</p>.<p>ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ವಿಚಾರದಲ್ಲಿ ಅಮೆರಿಕ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದ ಮೇಲೆ ಶೇ 25ರ ಪ್ರತಿಸುಂಕದ ಜತೆಗೆ ಶೇ 25 ಹೆಚ್ಚುವರಿ ಸುಂಕ ವಿಧಿಸಿದೆ. ಈ ನಡುವೆಯೇ ದೋಬಾಲ್ ಅವರು ರಷ್ಯಾ ಭೇಟಿ ಕೈಗೊಂಡಿರುವುದು ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ</strong>: ‘ಅಂತರರಾಷ್ಟ್ರೀಯ ಕಾನೂನುಗಳ ರಕ್ಷಣೆಯನ್ನು ಖಾತರಿಪಡಿಸಿಕೊಳ್ಳುವುದರ ಜತೆಗೆ ಆಧುನಿಕ ಸವಾಲುಗಳನ್ನು ಜಂಟಿಯಾಗಿ ಎದುರಿಸಲು ನಾವು ಬದ್ಧರಾಗಿದ್ದೇವೆ. ರಷ್ಯಾ ಮತ್ತು ಭಾರತದ ನಡುವಿನ ಸ್ನೇಹವು ಸರ್ವ ಕಾಲಕ್ಕೂ ಭದ್ರವಾಗಿರಲಿದೆ’ ಎಂದು ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸರ್ಗೆ ಶೊಯಿಗು ಗುರುವಾರ ಹೇಳಿದ್ದಾರೆ.</p>.<p>ಇಂಧನ ಮತ್ತು ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಲು ಹಾಗೂ ಭಾರತಕ್ಕೆ ಪುಟಿನ್ ಭೇಟಿಯ ಸಿದ್ದತೆ ಕುರಿತಂತೆ ಚರ್ಚಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ರಷ್ಯಾಗೆ ತೆರಳಿದ್ದು, ಗುರುವಾರ ಸರ್ಗೆ ಅವರನ್ನು ಭೇಟಿಯಾಗಿದ್ದಾರೆ. </p>.<p>ಈ ವೇಳೆ ಮಾತನಾಡಿರುವ ಸರ್ಗೆ, ‘ಪ್ರಧಾನಿ ಮೋದಿ ಹಾಗೂ ಪುಟಿನ್ ಅವರು ನಿರಂತರ ಸಂಪರ್ಕದಲ್ಲಿದ್ದು, ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಸಂಬಂಧ ಉತ್ತಮವಾಗಿದೆ. ವಿಶ್ವಾಸ, ಪರಸ್ಪರ ಹಿತಾಸಕ್ತಿ, ನಂಬಿಕೆಯ ಆಧಾರದಲ್ಲಿ ಭಾರತದೊಂದಿಗೆ ಹೊಂದಿರುವ ಉತ್ತಮ ಕಾರ್ಯತಂತ್ರ ಪಾಲುದಾರಿಕೆಯನ್ನು ಬಲಗೊಳಿಸುವುದು ರಷ್ಯಾದ ಆದ್ಯತೆ’ ಎಂದಿದ್ದಾರೆ.</p>.<p>‘ಅಲ್ಲದೇ, ಭಾರತ–ರಷ್ಯಾ ನಡುವಿನ ಸಂಬಂಧವು ಸರ್ವಕಾಲಕ್ಕೂ ಭದ್ರವಾಗಿ ಇರಲಿದೆ ಎಂದಿರುವ ಅವರು, ಶೀಘ್ರವೇ ನಮ್ಮ ನಾಯಕರ ನಡುವೆ ಪೂರ್ಣ ಪ್ರಮಾಣದ ಮಾತುಕತೆಯೂ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲಿದ್ದೇವೆ’ ಎಂದೂ ತಿಳಿಸಿದ್ದಾರೆ.</p>.<p>ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ವಿಚಾರದಲ್ಲಿ ಅಮೆರಿಕ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದ ಮೇಲೆ ಶೇ 25ರ ಪ್ರತಿಸುಂಕದ ಜತೆಗೆ ಶೇ 25 ಹೆಚ್ಚುವರಿ ಸುಂಕ ವಿಧಿಸಿದೆ. ಈ ನಡುವೆಯೇ ದೋಬಾಲ್ ಅವರು ರಷ್ಯಾ ಭೇಟಿ ಕೈಗೊಂಡಿರುವುದು ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>