<p><strong>ವಿಶ್ವಸಂಸ್ಥೆ:</strong> ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಚೋದಿಸುವ ದೇಶಗಳ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರತಿಪಾದಿಸಿದ ಭಾರತ, ನೆರೆಯ ಪಾಕಿಸ್ತಾನವನ್ನು ‘ಮತಾಂಧ’, ‘ಸರಣಿ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶ’ ಎಂದು ಟೀಕಿಸಿದೆ.</p>.<p>ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಈ ರೀತಿ ವಾದ ಮಂಡಿಸಿದೆ.</p>.<p>ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್, ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಕುರಿತು ಚರ್ಚಿಸುವಾಗ, ಕೆಲ ಮೂಲಭೂತ ತತ್ವಗಳನ್ನು ಗುರುತಿಸುವುದು ಅಗತ್ಯವಾಗಿದೆ. ಅವುಗಳಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುವಾಗಿರುವುದೂ ಮುಖ್ಯವಾಗಿದೆ ಎಂದು ಹೇಳಿದರು. </p>.<p>‘ಒಂದೆಡೆ, ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರಬುದ್ಧ ಪ್ರಜಾಪ್ರಭುತ್ವ, ವೃದ್ಧಿಸುತ್ತಿರುವ ಆರ್ಥಿಕತೆ, ಬಹುತ್ವ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜದೊಂದಿಗೆ ಮುನ್ನುಗುತ್ತಿದೆ. ಆದರೆ ಮತ್ತೊಂದೆಡೆ, ಪಾಕಿಸ್ತಾನವು ಮತಾಂಧತೆ, ಭಯೋತ್ಪಾದನೆಯಲ್ಲಿ ಮುಳುಗಿದೆ. ಅಲ್ಲದೆ, ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) ಸರಣಿ ಸಾಲಗಾರನಾಗಿಬಿಟ್ಟಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರಚೋದಿಸುವ ದೇಶಗಳ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರತಿಪಾದಿಸಿದ ಭಾರತ, ನೆರೆಯ ಪಾಕಿಸ್ತಾನವನ್ನು ‘ಮತಾಂಧ’, ‘ಸರಣಿ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶ’ ಎಂದು ಟೀಕಿಸಿದೆ.</p>.<p>ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಈ ರೀತಿ ವಾದ ಮಂಡಿಸಿದೆ.</p>.<p>ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್, ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಕುರಿತು ಚರ್ಚಿಸುವಾಗ, ಕೆಲ ಮೂಲಭೂತ ತತ್ವಗಳನ್ನು ಗುರುತಿಸುವುದು ಅಗತ್ಯವಾಗಿದೆ. ಅವುಗಳಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುವಾಗಿರುವುದೂ ಮುಖ್ಯವಾಗಿದೆ ಎಂದು ಹೇಳಿದರು. </p>.<p>‘ಒಂದೆಡೆ, ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರಬುದ್ಧ ಪ್ರಜಾಪ್ರಭುತ್ವ, ವೃದ್ಧಿಸುತ್ತಿರುವ ಆರ್ಥಿಕತೆ, ಬಹುತ್ವ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜದೊಂದಿಗೆ ಮುನ್ನುಗುತ್ತಿದೆ. ಆದರೆ ಮತ್ತೊಂದೆಡೆ, ಪಾಕಿಸ್ತಾನವು ಮತಾಂಧತೆ, ಭಯೋತ್ಪಾದನೆಯಲ್ಲಿ ಮುಳುಗಿದೆ. ಅಲ್ಲದೆ, ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) ಸರಣಿ ಸಾಲಗಾರನಾಗಿಬಿಟ್ಟಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>