<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಜಮ್ಮು ಮತ್ತು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ತಗಾದೆ ಎತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ರಾಯಭಾರಿ ಪಿ. ಹರೀಶ್, 'ಎಂದಿನಂತೆ ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ಅಸಮರ್ಥನೀಯ ಆರೋಪವನ್ನು ಮಾಡಿದ್ದಾರೆ' ಎಂದು ಹೇಳಿದ್ದಾರೆ.</p><p>ಗಡಿಯಾಚೆಗಿನ ಭಯೋತ್ಪಾದನೆ ಹಬ್ಬುವುದರಲ್ಲಿ ಪಾಕಿಸ್ತಾನದ ಪಾತ್ರವನ್ನು ಅವರು ಟೀಕಿಸಿದ್ದಾರೆ. </p><p>'ಆ ದೇಶದ ಮತಾಂಧ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಜಮ್ಮು ಮತ್ತು ಕಾಶ್ಮೀರದ ಭಾರತದ ಅವಿಭಾಜ್ಯ ಅಂಗವಾಗಿತ್ತು. ಈಗಲೂ ಅಂಗವಾಗಿದೆ ಮತ್ತು ಯಾವತ್ತೂ ಕೂಡ ಅವಿಭಾಜ್ಯ ಅಂಗವಾಗಿರಲಿದೆ. ಈ ವಾಸ್ತವವನ್ನು ಬದಲಿಸಲು ಸಾಧ್ಯವಿಲ್ಲ' ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ. </p><p>'ಇಸ್ಲಾಮೋಫೋಬಿಯಾ' ವಿರುದ್ಧದ ಅನೌಪಚಾರಿಕ ಚರ್ಚೆಯಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ತಹಮೀನ ಜಂಜುವಾ, ಕಾಶ್ಮೀರದ ಕುರಿತು ಉಲ್ಲೇಖ ಮಾಡಿದ್ದರು. </p>.ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ: ರೈಲು ಮೇಲಿನ ದಾಳಿ ಕೈವಾಡ ನಿರಾಕರಿಸಿದ ಭಾರತ.ಪಾಕಿಸ್ತಾನ ರೈಲನ್ನು 'ಬಲೂಚಿ' ಬಂಡುಕೋರರು ಹೈಜಾಕ್ ಮಾಡಿದ್ದು ಹೇಗೆ? ವಿಡಿಯೊ ನೋಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಜಮ್ಮು ಮತ್ತು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ತಗಾದೆ ಎತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ರಾಯಭಾರಿ ಪಿ. ಹರೀಶ್, 'ಎಂದಿನಂತೆ ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ಅಸಮರ್ಥನೀಯ ಆರೋಪವನ್ನು ಮಾಡಿದ್ದಾರೆ' ಎಂದು ಹೇಳಿದ್ದಾರೆ.</p><p>ಗಡಿಯಾಚೆಗಿನ ಭಯೋತ್ಪಾದನೆ ಹಬ್ಬುವುದರಲ್ಲಿ ಪಾಕಿಸ್ತಾನದ ಪಾತ್ರವನ್ನು ಅವರು ಟೀಕಿಸಿದ್ದಾರೆ. </p><p>'ಆ ದೇಶದ ಮತಾಂಧ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಜಮ್ಮು ಮತ್ತು ಕಾಶ್ಮೀರದ ಭಾರತದ ಅವಿಭಾಜ್ಯ ಅಂಗವಾಗಿತ್ತು. ಈಗಲೂ ಅಂಗವಾಗಿದೆ ಮತ್ತು ಯಾವತ್ತೂ ಕೂಡ ಅವಿಭಾಜ್ಯ ಅಂಗವಾಗಿರಲಿದೆ. ಈ ವಾಸ್ತವವನ್ನು ಬದಲಿಸಲು ಸಾಧ್ಯವಿಲ್ಲ' ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ. </p><p>'ಇಸ್ಲಾಮೋಫೋಬಿಯಾ' ವಿರುದ್ಧದ ಅನೌಪಚಾರಿಕ ಚರ್ಚೆಯಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ತಹಮೀನ ಜಂಜುವಾ, ಕಾಶ್ಮೀರದ ಕುರಿತು ಉಲ್ಲೇಖ ಮಾಡಿದ್ದರು. </p>.ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ: ರೈಲು ಮೇಲಿನ ದಾಳಿ ಕೈವಾಡ ನಿರಾಕರಿಸಿದ ಭಾರತ.ಪಾಕಿಸ್ತಾನ ರೈಲನ್ನು 'ಬಲೂಚಿ' ಬಂಡುಕೋರರು ಹೈಜಾಕ್ ಮಾಡಿದ್ದು ಹೇಗೆ? ವಿಡಿಯೊ ನೋಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>