<p><strong>ಕೊಲೊಂಬೊ</strong>: ಶ್ರೀಲಂಕಾದ ಭಾರತೀಯ ರಾಯಭಾರಿ ಸಂತೋಷ್ ಝಾ ಅವರು ಆಡಳಿತಾರೂಢ ಜನತಾ ವಿಮುಕ್ತಿ ಪೆರುಮನ (ಜೆವಿಪಿ) ಪ್ರಧಾನ ಕಾರ್ಯದರ್ಶಿ ಟಿಲ್ವಿನ್ ಸಿಲ್ವಾ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ನಿಕಟ ಆರ್ಥಿಕ ಸಂಬಂಧಗಳ ಸಾಮರ್ಥ್ಯದ ಕುರಿತು ಚರ್ಚಿಸಿದ್ದಾರೆ.</p>.<p>ಈ ಬಗ್ಗೆ ಕೊಲೊಂಬೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ‘ಭಾರತ ಮತ್ತು ಶ್ರೀಲಂಕಾದ ಜನರ ಪರಸ್ಪರ ಸಮೃದ್ಧಿಗಾಗಿ ನಿಕಟ ಆರ್ಥಿಕ ಸಂಬಂಧಗಳ ಅಪರಿಮಿತ ಸಾಮರ್ಥ್ಯದ ಕುರಿತು ಇಬ್ಬರೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು’ ಎಂದು ಹೇಳಿದೆ.</p>.<p>ಬಟ್ಟರಾಮುಲ್ಲಾದ ಪೆಲವಟ್ಟೆಯಲ್ಲಿರುವ ಜೆವಿಪಿ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ದೇಶದ ನಿರಾಶ್ರಿತ ಗುಡ್ಡಗಾಡು ಸಮುದಾಯಗಳಿಗೆ ನೀಡಲಾದ ವಸತಿ ಯೋಜನೆಯ ಯಶಸ್ಸು ಸೇರಿದಂತೆ ಶ್ರೀಲಂಕಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಯಿತು ಎಂದು ಶ್ರೀಲಂಕಾ ಮಿರರ್ ಮಂಗಳವಾರ ವರದಿ ಮಾಡಿದೆ.</p>.<p>ಭಾರತದ ಕೊಡುಗೆಗೆ ಸಿಲ್ವಾ ಕೃತಜ್ಞತೆ ಸಲ್ಲಿಸಿದರೆ, ಭಾರತೀಯ ರಾಯಭಾರಿ ಶ್ರೀಲಂಕಾಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದರು ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲೊಂಬೊ</strong>: ಶ್ರೀಲಂಕಾದ ಭಾರತೀಯ ರಾಯಭಾರಿ ಸಂತೋಷ್ ಝಾ ಅವರು ಆಡಳಿತಾರೂಢ ಜನತಾ ವಿಮುಕ್ತಿ ಪೆರುಮನ (ಜೆವಿಪಿ) ಪ್ರಧಾನ ಕಾರ್ಯದರ್ಶಿ ಟಿಲ್ವಿನ್ ಸಿಲ್ವಾ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ನಿಕಟ ಆರ್ಥಿಕ ಸಂಬಂಧಗಳ ಸಾಮರ್ಥ್ಯದ ಕುರಿತು ಚರ್ಚಿಸಿದ್ದಾರೆ.</p>.<p>ಈ ಬಗ್ಗೆ ಕೊಲೊಂಬೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ‘ಭಾರತ ಮತ್ತು ಶ್ರೀಲಂಕಾದ ಜನರ ಪರಸ್ಪರ ಸಮೃದ್ಧಿಗಾಗಿ ನಿಕಟ ಆರ್ಥಿಕ ಸಂಬಂಧಗಳ ಅಪರಿಮಿತ ಸಾಮರ್ಥ್ಯದ ಕುರಿತು ಇಬ್ಬರೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು’ ಎಂದು ಹೇಳಿದೆ.</p>.<p>ಬಟ್ಟರಾಮುಲ್ಲಾದ ಪೆಲವಟ್ಟೆಯಲ್ಲಿರುವ ಜೆವಿಪಿ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ದೇಶದ ನಿರಾಶ್ರಿತ ಗುಡ್ಡಗಾಡು ಸಮುದಾಯಗಳಿಗೆ ನೀಡಲಾದ ವಸತಿ ಯೋಜನೆಯ ಯಶಸ್ಸು ಸೇರಿದಂತೆ ಶ್ರೀಲಂಕಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಯಿತು ಎಂದು ಶ್ರೀಲಂಕಾ ಮಿರರ್ ಮಂಗಳವಾರ ವರದಿ ಮಾಡಿದೆ.</p>.<p>ಭಾರತದ ಕೊಡುಗೆಗೆ ಸಿಲ್ವಾ ಕೃತಜ್ಞತೆ ಸಲ್ಲಿಸಿದರೆ, ಭಾರತೀಯ ರಾಯಭಾರಿ ಶ್ರೀಲಂಕಾಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದರು ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>