<p><strong>ಕೊಲಂಬೊ:</strong> ಭಾರತೀಯ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳನ್ನು ಪಡೆದ ತಮಿಳು ಮೂಲದ ಫಲಾನುಭವಿಗಳನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಸೋಮವಾರ ಭೇಟಿಯಾದರು.</p>.<p>ರಾಧಾಕೃಷ್ಣನ್ ಅವರು ಎರಡು ದಿನ ಶ್ರೀಲಂಕಾಕ್ಕೆ ಭೇಟಿ ನೀಡಿದ್ದು, ಅಲ್ಲಿನ ನುವಾರಾ ಎಲಿಯಾ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.</p>.<p>‘ಶ್ರೀಲಂಕಾದ ತಮಿಳು ಜನರಿಗಾಗಿ ಭಾರತ ಸರ್ಕಾರವು ಈವರೆಗೆ 50,000 ಮನೆಗಳನ್ನು ನಿರ್ಮಿಸಿದೆ. ಯೋಜನೆಯ ನಾಲ್ಕನೇ ಹಂತದಲ್ಲಿ 10,000 ಮನೆಗಳನ್ನು ಹಸ್ತಾಂತರಿಸಲಾಗು ವುದು’ ಎಂದು ರಾಧಾಕೃಷ್ಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.</p>.<p>ಹಲವು ಒಪ್ಪಂದಗಳಿಗೆ ಸಹಿ: ರಾಧಾಕೃಷ್ಣನ್ ಅವರು ದ್ವೀಪ ರಾಷ್ಟ್ರ ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ಡಿಸ್ಸಾನಾಯಕೆ ಅವರೊಂದಿಗೆ ಸಮಾಲೋಚನೆ ನಡೆಸಿ, ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಒಪ್ಪಂದಗಳಿಗೆ ಸಹಿ ಮಾಡಿದರು.</p>.<p>ಶ್ರೀಲಂಕಾದಲ್ಲಿ ಅನುಷ್ಠಾನಗೊಂಡಿರುವ ಭಾರತದ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-1797326205</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಭಾರತೀಯ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳನ್ನು ಪಡೆದ ತಮಿಳು ಮೂಲದ ಫಲಾನುಭವಿಗಳನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಸೋಮವಾರ ಭೇಟಿಯಾದರು.</p>.<p>ರಾಧಾಕೃಷ್ಣನ್ ಅವರು ಎರಡು ದಿನ ಶ್ರೀಲಂಕಾಕ್ಕೆ ಭೇಟಿ ನೀಡಿದ್ದು, ಅಲ್ಲಿನ ನುವಾರಾ ಎಲಿಯಾ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.</p>.<p>‘ಶ್ರೀಲಂಕಾದ ತಮಿಳು ಜನರಿಗಾಗಿ ಭಾರತ ಸರ್ಕಾರವು ಈವರೆಗೆ 50,000 ಮನೆಗಳನ್ನು ನಿರ್ಮಿಸಿದೆ. ಯೋಜನೆಯ ನಾಲ್ಕನೇ ಹಂತದಲ್ಲಿ 10,000 ಮನೆಗಳನ್ನು ಹಸ್ತಾಂತರಿಸಲಾಗು ವುದು’ ಎಂದು ರಾಧಾಕೃಷ್ಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.</p>.<p>ಹಲವು ಒಪ್ಪಂದಗಳಿಗೆ ಸಹಿ: ರಾಧಾಕೃಷ್ಣನ್ ಅವರು ದ್ವೀಪ ರಾಷ್ಟ್ರ ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ಡಿಸ್ಸಾನಾಯಕೆ ಅವರೊಂದಿಗೆ ಸಮಾಲೋಚನೆ ನಡೆಸಿ, ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಒಪ್ಪಂದಗಳಿಗೆ ಸಹಿ ಮಾಡಿದರು.</p>.<p>ಶ್ರೀಲಂಕಾದಲ್ಲಿ ಅನುಷ್ಠಾನಗೊಂಡಿರುವ ಭಾರತದ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-1797326205</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>