ಈ ಹತ್ಯೆ ಸಂಚು ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ ಮೇಲೆ ಪರಿಣಾಮ ಬೀರಬಹುದೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಕಿರ್ಬಿ, ನಾವು ಸಮಗ್ರ ತನಿಖೆ ನಡೆಸಬೇಕೆಂದು ಬಯಸುತ್ತೇವೆ. ಇದರ ಸಂಚಿನ ಹಿಂದೆ ಯಾರಿದ್ದಾರೋ ಅವರನ್ನ ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದರು.
ತನಿಖೆ ಪ್ರಗತಿಯಲ್ಲಿದೆ. ಭಾರತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿರುವುದರಲ್ಲಿ ಸಂತಸವಿದೆ. ತನಿಖೆ ಕೊನೆಗೊಳ್ಳುವುದಕ್ಕಿಂತಲೂ ಮೊದಲು ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಘೋಷಿತ ಖಾಲಿಸ್ತಾನಿ ಉಗ್ರ ಹಾಗೂ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ನ (ಎಸ್ಜೆಎಫ್) ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ಯತ್ನ ನಡೆಸಲಾಗಿತ್ತು ಎಂದು ವರದಿಯಾಗಿತ್ತು.