ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪನ್ನೂ ಹತ್ಯೆಗೆ ಸಂಚು; ಸಮಗ್ರ ತನಿಖೆಯಾಗಬೇಕು: ಅಮೆರಿಕ

Published 8 ಡಿಸೆಂಬರ್ 2023, 2:34 IST
Last Updated 8 ಡಿಸೆಂಬರ್ 2023, 2:34 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತ, ಅಮೆರಿಕದ ಅತ್ಯಂತ ಪ್ರಮುಖ ಕಾರ್ಯತಂತ್ರದ ಪಾಲುದಾರ ದೇಶ. ಆದರೆ ಅಮೆರಿಕ ನಾಗರಿಕ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ಸಂಚಿನ ಹಿಂದೆ ಯಾರಿದ್ದಾರೋ ಅವರನ್ನು ಶಿಕ್ಷೆಗೆ ಗುರಿಯಾಗಿಸಬೇಕು ಎಂದು ಶ್ವೇತಭವನ ಹೇಳಿದೆ.

ಭಾರತ ಹಾಗೂ ಅಮೆರಿಕದ ನಡುವಣ ಬಾಂಧವ್ಯ ಮತ್ತಷ್ಟು ಸದೃಢವಾಗಿದೆ. ಭಾರತ-ಅಮೆರಿಕ ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ. ಉಭಯ ರಾಷ್ಟ್ರಗಳು ಅನೇಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸುತ್ತಿವೆ. ಅದೇ ಹೊತ್ತಿಗೆ ಈ ಆರೋಪಗಳ ಗಂಭೀರತೆಯನ್ನು ಮನಗಂಡಿದ್ದೇವೆ ಎಂದು ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ.

ಈ ಹತ್ಯೆ ಸಂಚು ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ ಮೇಲೆ ಪರಿಣಾಮ ಬೀರಬಹುದೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಕಿರ್ಬಿ, ನಾವು ಸಮಗ್ರ ತನಿಖೆ ನಡೆಸಬೇಕೆಂದು ಬಯಸುತ್ತೇವೆ. ಇದರ ಸಂಚಿನ ಹಿಂದೆ ಯಾರಿದ್ದಾರೋ ಅವರನ್ನ ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದರು.

ತನಿಖೆ ಪ್ರಗತಿಯಲ್ಲಿದೆ. ಭಾರತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿರುವುದರಲ್ಲಿ ಸಂತಸವಿದೆ. ತನಿಖೆ ಕೊನೆಗೊಳ್ಳುವುದಕ್ಕಿಂತಲೂ ಮೊದಲು ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಘೋಷಿತ ಖಾಲಿಸ್ತಾನಿ ಉಗ್ರ ಹಾಗೂ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್‌ನ (ಎಸ್‌ಜೆಎಫ್) ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ಯತ್ನ ನಡೆಸಲಾಗಿತ್ತು ಎಂದು ವರದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT