<p><strong>ನವದೆಹಲಿ:</strong> ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಹಲವು ನಾಯಕರು ಭಾಗವಹಿಸಿದ್ದ ಟೊರೊಂಟೊದಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ‘ಖಾಲಿಸ್ತಾನ’ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಭಾರತವು ಸೋಮವಾರ ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿದೆ.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ), ಟ್ರೊಡೊ ಅವರು ಭಾನುವಾರ ಭಾಷಣ ಮಾಡುತ್ತಿದ್ದ ಕಾರ್ಯಕ್ರಮದಲ್ಲಿ ಈ ರೀತಿ ಘೋಷಣೆಗಳನ್ನು ಕೂಗಿರುವುದು ಕೆನಡಾದಲ್ಲಿ ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ರಾಜಕೀಯ ಬೆಂಬಲ ನೀಡುತ್ತಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ದೂಷಿಸಿದೆ.</p>.<p>ಇಂತಹ ಕ್ರಮಗಳು ಭಾರತ-ಕೆನಡಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಲ್ಲದೆ, ಕೆನಡಾದಲ್ಲಿ ತನ್ನದೇ ದೇಶದ ನಾಗರಿಕರ ಮೇಲೆ ಹಾನಿಯಾಗುವಂತೆ ಹಿಂಸಾಚಾರ ಮತ್ತು ಅಪರಾಧ ಕೃತ್ಯವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುತ್ತದೆ ಎಂದೂ ಅದು ಹೇಳಿದೆ.</p>.<p>ಸಾರ್ವಜನಿಕ ಸಮಾರಂಭದಲ್ಲಿ ಟ್ರೊಡೊ ಅವರು ಮಾಡಿದ ಭಾಷಣದಲ್ಲಿ, ಸಿಖ್ ಸಮುದಾಯದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ರಕ್ಷಿಸಲು ಕೆನಡಾ ಅಚಲವಾದ ಬದ್ಧತೆ ಹೊಂದಿದೆ ಎಂದು ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಹಲವು ನಾಯಕರು ಭಾಗವಹಿಸಿದ್ದ ಟೊರೊಂಟೊದಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ‘ಖಾಲಿಸ್ತಾನ’ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಭಾರತವು ಸೋಮವಾರ ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿದೆ.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ), ಟ್ರೊಡೊ ಅವರು ಭಾನುವಾರ ಭಾಷಣ ಮಾಡುತ್ತಿದ್ದ ಕಾರ್ಯಕ್ರಮದಲ್ಲಿ ಈ ರೀತಿ ಘೋಷಣೆಗಳನ್ನು ಕೂಗಿರುವುದು ಕೆನಡಾದಲ್ಲಿ ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ರಾಜಕೀಯ ಬೆಂಬಲ ನೀಡುತ್ತಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ದೂಷಿಸಿದೆ.</p>.<p>ಇಂತಹ ಕ್ರಮಗಳು ಭಾರತ-ಕೆನಡಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಲ್ಲದೆ, ಕೆನಡಾದಲ್ಲಿ ತನ್ನದೇ ದೇಶದ ನಾಗರಿಕರ ಮೇಲೆ ಹಾನಿಯಾಗುವಂತೆ ಹಿಂಸಾಚಾರ ಮತ್ತು ಅಪರಾಧ ಕೃತ್ಯವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುತ್ತದೆ ಎಂದೂ ಅದು ಹೇಳಿದೆ.</p>.<p>ಸಾರ್ವಜನಿಕ ಸಮಾರಂಭದಲ್ಲಿ ಟ್ರೊಡೊ ಅವರು ಮಾಡಿದ ಭಾಷಣದಲ್ಲಿ, ಸಿಖ್ ಸಮುದಾಯದ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ರಕ್ಷಿಸಲು ಕೆನಡಾ ಅಚಲವಾದ ಬದ್ಧತೆ ಹೊಂದಿದೆ ಎಂದು ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>