<p><strong>ರೋಮ್:</strong> ಪಶ್ಚಿಮ ಏಷ್ಯಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸುವುದನ್ನು ಭಾರತವು ಬೆಂಬಲಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು. </p>.<p>ರೋಮ್ನಲ್ಲಿ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಕಡೆಗಣಿಸಲಾಗುವುದಿಲ್ಲ. ಮಿಲಿಟರಿ ಕಾರ್ಯಾಚರಣೆಯಲ್ಲಿ ಸಂಭವಿಸಿದ ಹೆಚ್ಚಿನ ನಾಗರಿಕರ ಸಾವು–ನೋವು, ಭಯೋತ್ಪಾದನೆ ಮತ್ತು ಒತ್ತೆಯಾಗಿಟ್ಟುಕೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ಭಾರತ ಪರಿಗಣಿಸುತ್ತದೆ’ ಎಂದು ಹೇಳಿದರು. </p>.<p>‘ಈಗಿರುವ ಪರಿಸ್ಥಿತಿಯಲ್ಲಿ ನಾವೆಲ್ಲರೂ ಕದನ ವಿರಾಮವನ್ನು ಬೆಂಬಲಿಸಬೇಕು. ಪ್ಯಾಲೆಸ್ಟೀನ್ ಜನರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ‘ಎರಡೂ ರಾಷ್ಟ್ರಗಳಿಗೆ ಪರಿಹಾರ’ ಸಿಗುವುದರ ಪರವಾಗಿ ಭಾರತ ಇದೆ ಎಂದರು. </p>.<p>ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ವಿಸ್ತರಣೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಜೈಶಂಕರ್, ‘ತಾಳ್ಮೆಯನ್ನು ಕಾಯ್ಡುಕೊಳ್ಳುವಂತೆ ಭಾರತವು ಇಸ್ರೇಲ್ ಮತ್ತು ಇರಾನ್ಗೆ ಹೇಳುತ್ತ ಬಂದಿದೆ. ಎರಡೂ ದೇಶಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಮ್:</strong> ಪಶ್ಚಿಮ ಏಷ್ಯಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸುವುದನ್ನು ಭಾರತವು ಬೆಂಬಲಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು. </p>.<p>ರೋಮ್ನಲ್ಲಿ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಕಡೆಗಣಿಸಲಾಗುವುದಿಲ್ಲ. ಮಿಲಿಟರಿ ಕಾರ್ಯಾಚರಣೆಯಲ್ಲಿ ಸಂಭವಿಸಿದ ಹೆಚ್ಚಿನ ನಾಗರಿಕರ ಸಾವು–ನೋವು, ಭಯೋತ್ಪಾದನೆ ಮತ್ತು ಒತ್ತೆಯಾಗಿಟ್ಟುಕೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ಭಾರತ ಪರಿಗಣಿಸುತ್ತದೆ’ ಎಂದು ಹೇಳಿದರು. </p>.<p>‘ಈಗಿರುವ ಪರಿಸ್ಥಿತಿಯಲ್ಲಿ ನಾವೆಲ್ಲರೂ ಕದನ ವಿರಾಮವನ್ನು ಬೆಂಬಲಿಸಬೇಕು. ಪ್ಯಾಲೆಸ್ಟೀನ್ ಜನರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ‘ಎರಡೂ ರಾಷ್ಟ್ರಗಳಿಗೆ ಪರಿಹಾರ’ ಸಿಗುವುದರ ಪರವಾಗಿ ಭಾರತ ಇದೆ ಎಂದರು. </p>.<p>ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ವಿಸ್ತರಣೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಜೈಶಂಕರ್, ‘ತಾಳ್ಮೆಯನ್ನು ಕಾಯ್ಡುಕೊಳ್ಳುವಂತೆ ಭಾರತವು ಇಸ್ರೇಲ್ ಮತ್ತು ಇರಾನ್ಗೆ ಹೇಳುತ್ತ ಬಂದಿದೆ. ಎರಡೂ ದೇಶಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>