<p><strong>ವಾಷಿಂಗ್ಟನ್</strong>: ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಕುರಿತ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ.</p><p>ಪನ್ನೂ ಹತ್ಯೆಯ ಸಂಚಿನಲ್ಲಿ ‘ರಾ’ ಅಧಿಕಾರಿ ವಿಕ್ರಂ ಯಾದವ್ ಅವರು ಭಾಗಿಯಾಗಿದ್ದು, ಯಾದವ್ ಅವರು ಸಂಚಿನ ಭಾಗವಾಗಲು ಆಗ ಭಾರತೀಯ ಗುಪ್ತದಳ ಸಂಸ್ಥೆ ‘ರಾ’ ಮುಖ್ಯಸ್ಥರಾಗಿದ್ದ ಸಾಮಂತ್ ಗೋಯಲ್ ಅವರ ಅನುಮೋದನೆ ಸಿಕ್ಕಿತ್ತು ಎಂದು ‘ವಾಷಿಂಗ್ಟನ್ ಪೋಸ್ಟ್’ ದೈನಿಕ ವರದಿ ಮಾಡಿದೆ.</p><p>ತನಿಖಾ ವರದಿ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕರೀನ್, ಪನ್ನೂ ಹತ್ಯೆ ಸಂಚಿನಲ್ಲಿ ಭಾರತೀಯ ಗುಪ್ತದಳ ಸಂಸ್ಥೆ ಅಧಿಕಾರಿಗಳ ಪಾತ್ರಗಳ ಕುರಿತು ತನಿಖೆ ನಡೆಯುತ್ತಿದೆ. ನ್ಯಾಯಾಂಗ ಇಲಾಖೆಯಿಂದಲೂ (ಡಿಓಜೆ) ಕ್ರಿಮಿನಲ್ ತನಿಖೆ ನಡೆಯುತ್ತಿದೆ’ ಎಂದರು.</p><p>‘ನಾವು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಭಾರತ ಸರ್ಕಾರವು ಅಷ್ಟೇ ಗಂಭೀರವಾಗಿ ಈ ವಿಷಯವನ್ನು ಕಾಣುತ್ತಿದೆ. ಈ ಕುರಿತಂತೆ ಭಾರತ ಸರ್ಕಾರಕ್ಕೆ ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ ’ ಎಂದರು.</p><p>‘ಭಾರತವು ಅಮೆರಿಕದ ಪ್ರಮುಖ ಪಾಲುದಾರ ದೇಶವಾಗಿದ್ದು, ಹಲವಾರು ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ಸಹಕಾರವನ್ನು ವಿಸ್ತರಿಸಲು ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದೇವೆ’ ಎಂದರು.</p><p>ಜೂನ್ 18ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ನಡೆದಿತ್ತು. ಅದೇ ಅವಧಿಯಲ್ಲಿ ಪನ್ನೂ ಹತ್ಯೆಗೂ ಸಂಚು ನಡೆದಿದ್ದು, ಆ ಕಾರ್ಯಾಚರಣೆಗೂ ವಿಕ್ರಂ ಯಾದವ್ ಅವರಿಗೂ ಸಂಪರ್ಕವಿದೆ ಎಂದೂ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಕುರಿತ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ.</p><p>ಪನ್ನೂ ಹತ್ಯೆಯ ಸಂಚಿನಲ್ಲಿ ‘ರಾ’ ಅಧಿಕಾರಿ ವಿಕ್ರಂ ಯಾದವ್ ಅವರು ಭಾಗಿಯಾಗಿದ್ದು, ಯಾದವ್ ಅವರು ಸಂಚಿನ ಭಾಗವಾಗಲು ಆಗ ಭಾರತೀಯ ಗುಪ್ತದಳ ಸಂಸ್ಥೆ ‘ರಾ’ ಮುಖ್ಯಸ್ಥರಾಗಿದ್ದ ಸಾಮಂತ್ ಗೋಯಲ್ ಅವರ ಅನುಮೋದನೆ ಸಿಕ್ಕಿತ್ತು ಎಂದು ‘ವಾಷಿಂಗ್ಟನ್ ಪೋಸ್ಟ್’ ದೈನಿಕ ವರದಿ ಮಾಡಿದೆ.</p><p>ತನಿಖಾ ವರದಿ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕರೀನ್, ಪನ್ನೂ ಹತ್ಯೆ ಸಂಚಿನಲ್ಲಿ ಭಾರತೀಯ ಗುಪ್ತದಳ ಸಂಸ್ಥೆ ಅಧಿಕಾರಿಗಳ ಪಾತ್ರಗಳ ಕುರಿತು ತನಿಖೆ ನಡೆಯುತ್ತಿದೆ. ನ್ಯಾಯಾಂಗ ಇಲಾಖೆಯಿಂದಲೂ (ಡಿಓಜೆ) ಕ್ರಿಮಿನಲ್ ತನಿಖೆ ನಡೆಯುತ್ತಿದೆ’ ಎಂದರು.</p><p>‘ನಾವು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಭಾರತ ಸರ್ಕಾರವು ಅಷ್ಟೇ ಗಂಭೀರವಾಗಿ ಈ ವಿಷಯವನ್ನು ಕಾಣುತ್ತಿದೆ. ಈ ಕುರಿತಂತೆ ಭಾರತ ಸರ್ಕಾರಕ್ಕೆ ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ ’ ಎಂದರು.</p><p>‘ಭಾರತವು ಅಮೆರಿಕದ ಪ್ರಮುಖ ಪಾಲುದಾರ ದೇಶವಾಗಿದ್ದು, ಹಲವಾರು ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ಸಹಕಾರವನ್ನು ವಿಸ್ತರಿಸಲು ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದೇವೆ’ ಎಂದರು.</p><p>ಜೂನ್ 18ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ನಡೆದಿತ್ತು. ಅದೇ ಅವಧಿಯಲ್ಲಿ ಪನ್ನೂ ಹತ್ಯೆಗೂ ಸಂಚು ನಡೆದಿದ್ದು, ಆ ಕಾರ್ಯಾಚರಣೆಗೂ ವಿಕ್ರಂ ಯಾದವ್ ಅವರಿಗೂ ಸಂಪರ್ಕವಿದೆ ಎಂದೂ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>