<p><strong>ಒಟ್ಟಾವ (ಕೆನಡಾ)</strong>: 62 ರಾಜತಾಂತ್ರಿಕ ಅಧಿಕಾರಿಗಳ ಪೈಕಿ 41 ಮಂದಿಯನ್ನು ಭಾರತದಿಂದ ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ಕೆನಡಾ ವಿದೇಶಾಂಗ ಸಚಿವೆ ಮೆಲಾನಿಯೆ ಜಾಲಿ ಹೇಳಿದ್ದಾರೆ.</p><p>ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ಹೆಚ್ಚಿನ ಸಂಖ್ಯೆಯ ರಾಜತಾಂತ್ರಿಕರು ವಾಪಸ್ ಆಗಿದ್ದಾರೆ ಎಂದು 'ಕೆನಡಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್' ಗುರುವಾರ ವರದಿ ಮಾಡಿದೆ.</p><p>ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಅದಾದ ಬಳಿಕ ಉಭಯ ರಾಷ್ಟ್ರಗಳ ಸಂಬಂಧ ಹಳಸಿದೆ. </p><p>ಉಭಯ ದೇಶಗಳು ಸಮಾನ ಸಂಖ್ಯೆಯಲ್ಲಿ ರಾಜತಾಂತ್ರಿಕ ಸಿಬ್ಬಂದಿಯನ್ನು ಹೊಂದಿರುವುದು ಅಗತ್ಯ ಎಂದು ಕಳೆದ ತಿಂಗಳು ಪ್ರತಿಪಾದಿಸಿದ್ದ ಭಾರತ, ಹೆಚ್ಚುವರಿ ರಾಜತಾಂತ್ರಿಕರನ್ನು ಅಕ್ಟೋಬರ್ 10ರೊಳಗೆ ವಾಪಸ್ ಕರೆಸಿಕೊಳ್ಳಬೇಕು ಎಂದು ಕೆನಡಾಗೆ ಸೂಚಿಸಿತ್ತು.</p>.ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಸಂಖ್ಯೆ ಕಡಿತ: ವಿಯೆನ್ನಾ ಒಪ್ಪಂದದಂತೆ ಕ್ರಮ- ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ (ಕೆನಡಾ)</strong>: 62 ರಾಜತಾಂತ್ರಿಕ ಅಧಿಕಾರಿಗಳ ಪೈಕಿ 41 ಮಂದಿಯನ್ನು ಭಾರತದಿಂದ ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ಕೆನಡಾ ವಿದೇಶಾಂಗ ಸಚಿವೆ ಮೆಲಾನಿಯೆ ಜಾಲಿ ಹೇಳಿದ್ದಾರೆ.</p><p>ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ಹೆಚ್ಚಿನ ಸಂಖ್ಯೆಯ ರಾಜತಾಂತ್ರಿಕರು ವಾಪಸ್ ಆಗಿದ್ದಾರೆ ಎಂದು 'ಕೆನಡಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್' ಗುರುವಾರ ವರದಿ ಮಾಡಿದೆ.</p><p>ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಅದಾದ ಬಳಿಕ ಉಭಯ ರಾಷ್ಟ್ರಗಳ ಸಂಬಂಧ ಹಳಸಿದೆ. </p><p>ಉಭಯ ದೇಶಗಳು ಸಮಾನ ಸಂಖ್ಯೆಯಲ್ಲಿ ರಾಜತಾಂತ್ರಿಕ ಸಿಬ್ಬಂದಿಯನ್ನು ಹೊಂದಿರುವುದು ಅಗತ್ಯ ಎಂದು ಕಳೆದ ತಿಂಗಳು ಪ್ರತಿಪಾದಿಸಿದ್ದ ಭಾರತ, ಹೆಚ್ಚುವರಿ ರಾಜತಾಂತ್ರಿಕರನ್ನು ಅಕ್ಟೋಬರ್ 10ರೊಳಗೆ ವಾಪಸ್ ಕರೆಸಿಕೊಳ್ಳಬೇಕು ಎಂದು ಕೆನಡಾಗೆ ಸೂಚಿಸಿತ್ತು.</p>.ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಸಂಖ್ಯೆ ಕಡಿತ: ವಿಯೆನ್ನಾ ಒಪ್ಪಂದದಂತೆ ಕ್ರಮ- ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>