ಪ್ರಕರಣದ ವಿಚಾರಣೆ ವೇಳೆ ಪ್ರಸ್ತುತ ಪಡಿಸಿದ ಸಾಕ್ಷ್ಯಗಳ ಪ್ರಕಾರ, ಫೆಬ್ರವರಿ 2014 ಮತ್ತು ಅಕ್ಟೋಬರ್ 2016 ರ ನಡುವೆ, ಕರ್ತನ್ ಮತ್ತು ಶರ್ಮಿಷ್ಠ ದಂಪತಿ ಕ್ಯಾಲಿಫೋರ್ನಿಯಾದ ಸ್ಟಾಕ್ಟನ್ನಲ್ಲಿರುವ ತಮ್ಮ ಮನೆಯಲ್ಲಿ ಮನೆ ಕೆಲಸಕ್ಕಾಗಿ ವಿದೇಶಿ ಕೆಲಸಗಾರರನ್ನು ಇಟ್ಟುಕೊಂಡಿದ್ದರು. ಮನೆಗೆಲಸದವರಿಗಾಗಿ ಇಂಟರ್ನೆಟ್ ಮತ್ತು ಭಾರತ ಮೂಲದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಅದರಲ್ಲಿ ಉದ್ಯೋಗದ ವೇತನ ಮತ್ತು ನಿಬಂಧನೆಗಳ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವಿಧಾನದಲ್ಲಿ ಕೆಲಸಕ್ಕೆ ಸೇರಿಸಿಕೊಂಡವರಿಗೆ ದಂಪತಿ ಸರಿಯಾಗಿ ವೇತನ ನೀಡುತ್ತಿರಲಿಲ್ಲ. ಕಾರ್ಮಿಕರನ್ನು ಹೊರಗಡೆ ಹೋಗದಂತೆ ನಿರ್ಬಂಧ ವಿಧಿಸಿದ್ದರು. ಜತೆಗೆ, ಅವರಿಗೆ ಬೆದರಿಕೆ ಹಾಕುವ ಜತೆಗೆ, ದೈಹಿಕವಾಗಿ ಹಲ್ಲೆ ಮಾಡಿದ್ದರು ಎಂಬ ಆರೋಪವೂ ಇತ್ತು.