<p><strong>ದುಬೈ: </strong>ಭಾರತೀಯ ಮೂಲದ ದುಬೈ ಉದ್ಯಮಿಯೊಬ್ಬರುಪಾಕಿಸ್ತಾನದ ಥಾರಪಾರ್ಕರ್ ಜಿಲ್ಲೆಯಲ್ಲಿ 60 ಹ್ಯಾಂಡ್ಪಂಪ್ ವ್ಯವಸ್ಥೆ ಕಲ್ಪಿಸುವ ಮೂಲಕ ಅಲ್ಲಿಯ ಜನರ ನೀರಿನ ದಾಹ ತಣಿಸಿದ್ದಾರೆ.</p>.<p>ಜೋಗಿಂಧರ್ ಸಿಂಗ್ ಸಲಾರಿಯಾ, ಬಡತನ ರೇಖೆಗಿಂತ ಕೆಳಗಿರುವ ಇಲ್ಲಿಯ ಜನರಿಗೆ ನೆರವಾಗಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಅರಿತ ಜೋಗಿಂಧರ್,ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ನೀರಿನ ವ್ಯವಸ್ಥೆಯ ಜತೆಗೆ ದವಸ ಧಾನ್ಯಗಳನ್ನು ಕಳುಹಿಸುವ ಮೂಲಕ ಇಲ್ಲಿಯ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.</p>.<p>ಸಾರಿಗೆ ಉದ್ಯಮ ನಡೆಸುತ್ತಿರುವ ಇವರು,ಪೆಹಲ ಚಾರಿಟೆಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.1993ರಿಂದ ದುಬೈನಲ್ಲಿ ನೆಲೆಸಿದ್ದಾರೆ.</p>.<p>‘ಪುಲ್ವಾಮಾ ದಾಳಿಯ ದಾಳಿಯ ನಂತರ ಭಾರತ ಮತ್ತು ಪಾಕ್ ನಡುವಿನ ಸಂಬಂಧ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಗ್ರಾಮಗಳಿಗೆ ನೆರವು ನೀಡುವುದು ಅಗತ್ಯ’ ಎಂದು ಜೋಗಿಂಧರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಾಮಾಜಿಕ ಕಾರ್ಯಕರ್ತ ಭೀಲ್ ಖಂಗರ್ ಈ ಯೋಜನೆಯ ಸಾಕಾರಕ್ಕೆ ನೆರವಾಗಿದ್ದಾರೆ. ಈ ಗ್ರಾಮಗಳಲ್ಲಿ ರಸ್ತೆಗಳ ವ್ಯವಸ್ಥೆ ಸಮರ್ಪಕವಾಗಿಲ್ಲ. ಆಸ್ಪತ್ರೆಯೂ 50 ಕಿ.ಮೀ. ದೂರದಲ್ಲಿದೆ. ಮುಖ್ಯರಸ್ತೆಗೆ ಬರಲು ಜನರು 25 ಕಿ.ಮೀ. ಕ್ರಮಿಸಬೇಕು. ಶಿಕ್ಷಣ ವ್ಯವಸ್ಥೆಯೂ ಗುಣಮಟ್ಟದಿಂದ ಕೂಡಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ: </strong>ಭಾರತೀಯ ಮೂಲದ ದುಬೈ ಉದ್ಯಮಿಯೊಬ್ಬರುಪಾಕಿಸ್ತಾನದ ಥಾರಪಾರ್ಕರ್ ಜಿಲ್ಲೆಯಲ್ಲಿ 60 ಹ್ಯಾಂಡ್ಪಂಪ್ ವ್ಯವಸ್ಥೆ ಕಲ್ಪಿಸುವ ಮೂಲಕ ಅಲ್ಲಿಯ ಜನರ ನೀರಿನ ದಾಹ ತಣಿಸಿದ್ದಾರೆ.</p>.<p>ಜೋಗಿಂಧರ್ ಸಿಂಗ್ ಸಲಾರಿಯಾ, ಬಡತನ ರೇಖೆಗಿಂತ ಕೆಳಗಿರುವ ಇಲ್ಲಿಯ ಜನರಿಗೆ ನೆರವಾಗಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಅರಿತ ಜೋಗಿಂಧರ್,ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ನೀರಿನ ವ್ಯವಸ್ಥೆಯ ಜತೆಗೆ ದವಸ ಧಾನ್ಯಗಳನ್ನು ಕಳುಹಿಸುವ ಮೂಲಕ ಇಲ್ಲಿಯ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.</p>.<p>ಸಾರಿಗೆ ಉದ್ಯಮ ನಡೆಸುತ್ತಿರುವ ಇವರು,ಪೆಹಲ ಚಾರಿಟೆಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.1993ರಿಂದ ದುಬೈನಲ್ಲಿ ನೆಲೆಸಿದ್ದಾರೆ.</p>.<p>‘ಪುಲ್ವಾಮಾ ದಾಳಿಯ ದಾಳಿಯ ನಂತರ ಭಾರತ ಮತ್ತು ಪಾಕ್ ನಡುವಿನ ಸಂಬಂಧ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಗ್ರಾಮಗಳಿಗೆ ನೆರವು ನೀಡುವುದು ಅಗತ್ಯ’ ಎಂದು ಜೋಗಿಂಧರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಾಮಾಜಿಕ ಕಾರ್ಯಕರ್ತ ಭೀಲ್ ಖಂಗರ್ ಈ ಯೋಜನೆಯ ಸಾಕಾರಕ್ಕೆ ನೆರವಾಗಿದ್ದಾರೆ. ಈ ಗ್ರಾಮಗಳಲ್ಲಿ ರಸ್ತೆಗಳ ವ್ಯವಸ್ಥೆ ಸಮರ್ಪಕವಾಗಿಲ್ಲ. ಆಸ್ಪತ್ರೆಯೂ 50 ಕಿ.ಮೀ. ದೂರದಲ್ಲಿದೆ. ಮುಖ್ಯರಸ್ತೆಗೆ ಬರಲು ಜನರು 25 ಕಿ.ಮೀ. ಕ್ರಮಿಸಬೇಕು. ಶಿಕ್ಷಣ ವ್ಯವಸ್ಥೆಯೂ ಗುಣಮಟ್ಟದಿಂದ ಕೂಡಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>