<p><strong>ನವದೆಹಲಿ:</strong> ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಮತ್ತೆ ಪುನರಾರಂಭಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಘೋಷಿಸಿದ್ದಾರೆ. </p><p>ನಾಲ್ಕು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ ಭಾರತದ ರಾಯಭಾರ ಕಚೇರಿಯನ್ನು ಮತ್ತೆ ತೆರೆಯಲಾಗುತ್ತಿದೆ. ಈ ಮೂಲಕ ಅಫ್ಗಾನಿಸ್ತಾನದೊಂದಿಗೆ ರಾಜತಾಂತ್ರಿಕ ವ್ಯವಹಾರವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ. </p><p>2021ರಲ್ಲಿ ಅಫ್ಗಾನಿಸ್ತಾನದಿಂದ ಅಮೆರಿಕ ನೇತೃತ್ವದ ನ್ಯಾಟೊ ಪಡೆ ತನ್ನ ಸೇನೆಯನ್ನು ಹಿಂಪಡೆದಿತ್ತು. ಬಳಿಕ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ರಾಯಭಾರ ಕಚೇರಿಯನ್ನು ಮುಚ್ಚಲಾಗಿತ್ತು. ಅದಾದ ಒಂದು ವರ್ಷದ ಬಳಿಕ ವ್ಯಾಪಾರ, ವೈದ್ಯಕೀಯ ಹಾಗೂ ಮಾನವೀಯ ನೆರವಿಗಾಗಿ ಸಣ್ಣ ನಿಯೋಗವನ್ನು ರಚಿಸಿತ್ತು. </p><p>ಭಾರತಕ್ಕೆ ಭೇಟಿ ನೀಡಿರುವ ಅಫ್ಗಾನ್ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಅವರೊಂದಿಗೆ ಮಾತುಕತೆ ವೇಳೆ ವಿದೇಶಾಂಗ ಸಚಿವ ಜೈಶಂಕರ್ ಈ ಕುರಿತು ಘೋಷಣೆ ಮಾಡಿದ್ದಾರೆ. </p><p>ಈ ವೇಳೆ ಅಫ್ಗಾನಿಸ್ತಾನಕ್ಕೆ ಭಾರತದ ಬೆಂಬಲವನ್ನು ಜೈಶಂಕರ್ ಪುನರುಚ್ಚರಿಸಿದ್ದಾರೆ. </p>.Earthquake | ಅಫ್ಗಾನಿಸ್ತಾನ ಭೂಕಂಪ: ಸಾವಿನ ಸಂಖ್ಯೆ 2205ಕ್ಕೆ ಏರಿಕೆ.ಕಾಬುಲ್: ಅಫ್ಗಾನ್ ವಿದೇಶಾಂಗ ಕಚೇರಿ ಬಳಿ ಆತ್ಮಹತ್ಯಾ ದಾಳಿ– 6 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಮತ್ತೆ ಪುನರಾರಂಭಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಘೋಷಿಸಿದ್ದಾರೆ. </p><p>ನಾಲ್ಕು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ ಭಾರತದ ರಾಯಭಾರ ಕಚೇರಿಯನ್ನು ಮತ್ತೆ ತೆರೆಯಲಾಗುತ್ತಿದೆ. ಈ ಮೂಲಕ ಅಫ್ಗಾನಿಸ್ತಾನದೊಂದಿಗೆ ರಾಜತಾಂತ್ರಿಕ ವ್ಯವಹಾರವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ. </p><p>2021ರಲ್ಲಿ ಅಫ್ಗಾನಿಸ್ತಾನದಿಂದ ಅಮೆರಿಕ ನೇತೃತ್ವದ ನ್ಯಾಟೊ ಪಡೆ ತನ್ನ ಸೇನೆಯನ್ನು ಹಿಂಪಡೆದಿತ್ತು. ಬಳಿಕ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ರಾಯಭಾರ ಕಚೇರಿಯನ್ನು ಮುಚ್ಚಲಾಗಿತ್ತು. ಅದಾದ ಒಂದು ವರ್ಷದ ಬಳಿಕ ವ್ಯಾಪಾರ, ವೈದ್ಯಕೀಯ ಹಾಗೂ ಮಾನವೀಯ ನೆರವಿಗಾಗಿ ಸಣ್ಣ ನಿಯೋಗವನ್ನು ರಚಿಸಿತ್ತು. </p><p>ಭಾರತಕ್ಕೆ ಭೇಟಿ ನೀಡಿರುವ ಅಫ್ಗಾನ್ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಅವರೊಂದಿಗೆ ಮಾತುಕತೆ ವೇಳೆ ವಿದೇಶಾಂಗ ಸಚಿವ ಜೈಶಂಕರ್ ಈ ಕುರಿತು ಘೋಷಣೆ ಮಾಡಿದ್ದಾರೆ. </p><p>ಈ ವೇಳೆ ಅಫ್ಗಾನಿಸ್ತಾನಕ್ಕೆ ಭಾರತದ ಬೆಂಬಲವನ್ನು ಜೈಶಂಕರ್ ಪುನರುಚ್ಚರಿಸಿದ್ದಾರೆ. </p>.Earthquake | ಅಫ್ಗಾನಿಸ್ತಾನ ಭೂಕಂಪ: ಸಾವಿನ ಸಂಖ್ಯೆ 2205ಕ್ಕೆ ಏರಿಕೆ.ಕಾಬುಲ್: ಅಫ್ಗಾನ್ ವಿದೇಶಾಂಗ ಕಚೇರಿ ಬಳಿ ಆತ್ಮಹತ್ಯಾ ದಾಳಿ– 6 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>