<p><strong>ನವದೆಹಲಿ:</strong> ಎಲ್ಪಿಜಿ ಹೊತ್ತ ಟ್ಯಾಂಕರ್ ಹೊರ್ಮುಜ್ ಜಲಸಂಧಿಯನ್ನು ದಾಟುತ್ತಿದ್ದು, ಭಾರತೀಯ ನೌಕಾಪಡೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಏಜೆನ್ಸಿಗಳು ಬೇಕಾದ ನೆರವನ್ನು ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.</p><p>ಎಲ್ಪಿಜಿ ಹೊತ್ತ ಎಂ.ವಿ ಸನ್ಶೈನ್ ಸುರಕ್ಷಿತವಾಗಿ ದಾಟಲು ಭಾರತೀಯ ನೌಕಾಪಡೆ ನೆರವಾಗಲಿದೆ. ಇದು ಪರ್ಷಿಯನ್ ಕೊಲ್ಲಿಯಿಂದ ಸುರಕ್ಷಿತವಾಗಿ ದಾಟಲಿರುವ ಭಾರತದ 15ನೇ ಎಲ್ಪಿಜಿ ಹಡಗು ಎನಿಸಲಿದೆ. </p><p>ಹೊರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದ್ದರಿಂದ ಜಾಗತಿಕ ತೈಲ ಪೂರೈಕೆ ಸರಪಳಿಗೆ ಅಡಚಣೆ ಉಂಟಾಗಿದೆ. ಇದರಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. </p><p>ಏತನ್ಮಧ್ಯೆ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಶಮನಕ್ಕೆ ಸಂಬಂಧಿಸಿದಂತೆ ರಾಜತಾಂತ್ರಿಕವಾಗಿ ಭಾರತ ಕೈಗೊಳ್ಳುವ ಕ್ರಮಗಳನ್ನು ಸ್ವಾಗತಿಸುವುದಾಗಿ ಇರಾನ್ ಹೇಳಿದೆ. </p><p>ಭಾರತ ಯಾವಾಗಲೂ ಶಾಂತಿಯನ್ನು ಬಯಸುತ್ತದೆ. ಉಭಯ ರಾಷ್ಟ್ರಗಳ ನಡುವೆ ಉತ್ತಮ ಬಾಂಧವ್ಯವಿದೆ ಎಂದು ಇರಾನ್ನ ಉಪ ವಿದೇಶಾಂಗ ಸಚಿವರು ಉಲ್ಲೇಖಿಸಿದ್ದಾರೆ. </p>.ಹೊರ್ಮುಜ್ ದಾಟುವ ಹಡುಗಗಳ ಮೇಲೆ ಶುಲ್ಕ ವಿಧಿಸದಂತೆ ಇರಾನ್ಗೆ ಟ್ರಂಪ್ ಎಚ್ಚರಿಕೆ.ವೈರಿಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ: ಇರಾನ್ ಪ್ರತಿನಿಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಲ್ಪಿಜಿ ಹೊತ್ತ ಟ್ಯಾಂಕರ್ ಹೊರ್ಮುಜ್ ಜಲಸಂಧಿಯನ್ನು ದಾಟುತ್ತಿದ್ದು, ಭಾರತೀಯ ನೌಕಾಪಡೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಏಜೆನ್ಸಿಗಳು ಬೇಕಾದ ನೆರವನ್ನು ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.</p><p>ಎಲ್ಪಿಜಿ ಹೊತ್ತ ಎಂ.ವಿ ಸನ್ಶೈನ್ ಸುರಕ್ಷಿತವಾಗಿ ದಾಟಲು ಭಾರತೀಯ ನೌಕಾಪಡೆ ನೆರವಾಗಲಿದೆ. ಇದು ಪರ್ಷಿಯನ್ ಕೊಲ್ಲಿಯಿಂದ ಸುರಕ್ಷಿತವಾಗಿ ದಾಟಲಿರುವ ಭಾರತದ 15ನೇ ಎಲ್ಪಿಜಿ ಹಡಗು ಎನಿಸಲಿದೆ. </p><p>ಹೊರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದ್ದರಿಂದ ಜಾಗತಿಕ ತೈಲ ಪೂರೈಕೆ ಸರಪಳಿಗೆ ಅಡಚಣೆ ಉಂಟಾಗಿದೆ. ಇದರಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. </p><p>ಏತನ್ಮಧ್ಯೆ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಶಮನಕ್ಕೆ ಸಂಬಂಧಿಸಿದಂತೆ ರಾಜತಾಂತ್ರಿಕವಾಗಿ ಭಾರತ ಕೈಗೊಳ್ಳುವ ಕ್ರಮಗಳನ್ನು ಸ್ವಾಗತಿಸುವುದಾಗಿ ಇರಾನ್ ಹೇಳಿದೆ. </p><p>ಭಾರತ ಯಾವಾಗಲೂ ಶಾಂತಿಯನ್ನು ಬಯಸುತ್ತದೆ. ಉಭಯ ರಾಷ್ಟ್ರಗಳ ನಡುವೆ ಉತ್ತಮ ಬಾಂಧವ್ಯವಿದೆ ಎಂದು ಇರಾನ್ನ ಉಪ ವಿದೇಶಾಂಗ ಸಚಿವರು ಉಲ್ಲೇಖಿಸಿದ್ದಾರೆ. </p>.ಹೊರ್ಮುಜ್ ದಾಟುವ ಹಡುಗಗಳ ಮೇಲೆ ಶುಲ್ಕ ವಿಧಿಸದಂತೆ ಇರಾನ್ಗೆ ಟ್ರಂಪ್ ಎಚ್ಚರಿಕೆ.ವೈರಿಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ: ಇರಾನ್ ಪ್ರತಿನಿಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>