<p><strong>ಸಿಂಗಪುರ</strong>: ಭಾರತ ಮೂಲದ, ಸಿಂಗಪುರ ಸಂಜಾತ ಹಾಗೂ ಮಾಜಿ ಸಚಿವ ಥರ್ಮನ್ ಷಣ್ಮುಗರತ್ನಂ ಮತ್ತು ಚೀನಾ ಮೂಲದ ಇಬ್ಬರು ಸರ್ಕಾರಿ ಕಂಪನಿಗಳ ಮಾಜಿ ಅಧಿಕಾರಿಗಳು ಸೆಪ್ಟೆಂಬರ್ 1 ರಂದು ನಡೆಯಲಿರುವ ಸಿಂಗಪುರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಪಡೆದಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ. </p>.<p>ಗುರುವಾರದ ಗಡುವಿನೊಳಗೆ ಅರ್ಹತಾ ಪ್ರಮಾಣಪತ್ರಕ್ಕಾಗಿ ಒಟ್ಟು ಆರು ಅರ್ಜಿಗಳನ್ನು ಅಧ್ಯಕ್ಷೀಯ ಚುನಾವಣಾ ಸಮಿತಿ (ಪಿಇಸಿ) ಸ್ವೀಕರಿಸಿದೆ ಎಂದು ಚುನಾವಣೆಗಳ ಇಲಾಖೆ (ಇಎಲ್ಡಿ) ತಿಳಿಸಿದೆ.</p>.<p>ಒಬ್ಬರಿಗಿಂತ ಹೆಚ್ಚು ಮಂದಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಪಡೆದರೆ, ಸೆಪ್ಟೆಂಬರ್ 1ರಂದು ಅಧ್ಯಕ್ಷೀಯ ಚುನಾವಣೆ ನಡೆಸುವುದಾಗಿ ಸಿಂಗಪುರ ಈ ಹಿಂದೆ ಪ್ರಕಟಿಸಿತ್ತು. ಹಾಲಿ ಅಧ್ಯಕ್ಷೆ ಹಲೀಮಾ ಯಾಕೋಬ್ ಅವರ ಆರು ವರ್ಷಗಳ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಳ್ಳಲಿದೆ.</p>.<p>66 ವರ್ಷದ ಥರ್ಮನ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಳೆದ ತಿಂಗಳು ಸಾರ್ವಜನಿಕ ಮತ್ತು ರಾಜಕೀಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಈ ಮೊದಲು ಅವರು ಸಿಂಗಪುರ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಕೆಲಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ</strong>: ಭಾರತ ಮೂಲದ, ಸಿಂಗಪುರ ಸಂಜಾತ ಹಾಗೂ ಮಾಜಿ ಸಚಿವ ಥರ್ಮನ್ ಷಣ್ಮುಗರತ್ನಂ ಮತ್ತು ಚೀನಾ ಮೂಲದ ಇಬ್ಬರು ಸರ್ಕಾರಿ ಕಂಪನಿಗಳ ಮಾಜಿ ಅಧಿಕಾರಿಗಳು ಸೆಪ್ಟೆಂಬರ್ 1 ರಂದು ನಡೆಯಲಿರುವ ಸಿಂಗಪುರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಪಡೆದಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ. </p>.<p>ಗುರುವಾರದ ಗಡುವಿನೊಳಗೆ ಅರ್ಹತಾ ಪ್ರಮಾಣಪತ್ರಕ್ಕಾಗಿ ಒಟ್ಟು ಆರು ಅರ್ಜಿಗಳನ್ನು ಅಧ್ಯಕ್ಷೀಯ ಚುನಾವಣಾ ಸಮಿತಿ (ಪಿಇಸಿ) ಸ್ವೀಕರಿಸಿದೆ ಎಂದು ಚುನಾವಣೆಗಳ ಇಲಾಖೆ (ಇಎಲ್ಡಿ) ತಿಳಿಸಿದೆ.</p>.<p>ಒಬ್ಬರಿಗಿಂತ ಹೆಚ್ಚು ಮಂದಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಪಡೆದರೆ, ಸೆಪ್ಟೆಂಬರ್ 1ರಂದು ಅಧ್ಯಕ್ಷೀಯ ಚುನಾವಣೆ ನಡೆಸುವುದಾಗಿ ಸಿಂಗಪುರ ಈ ಹಿಂದೆ ಪ್ರಕಟಿಸಿತ್ತು. ಹಾಲಿ ಅಧ್ಯಕ್ಷೆ ಹಲೀಮಾ ಯಾಕೋಬ್ ಅವರ ಆರು ವರ್ಷಗಳ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಳ್ಳಲಿದೆ.</p>.<p>66 ವರ್ಷದ ಥರ್ಮನ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಳೆದ ತಿಂಗಳು ಸಾರ್ವಜನಿಕ ಮತ್ತು ರಾಜಕೀಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಈ ಮೊದಲು ಅವರು ಸಿಂಗಪುರ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಕೆಲಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>