<p><strong>ಲಂಡನ್</strong>: ಭಾರತೀಯ ಮೂಲದ ಇತಿಹಾಸಕಾರ ಸುನೀಲ್ ಅಮೃತ್ ಅವರ ‘ದಿ ಬರ್ನಿಂಗ್ ಅರ್ಥ್: ಆ್ಯನ್ ಎನ್ವಿರಾನ್ಮೆಂಟಲ್ ಹಿಸ್ಟರಿ ಆಫ್ ದಿ ಲಾಸ್ಟ್ 500 ಯಿಯರ್ಸ್’ ಕೃತಿಯು ಈ ವರ್ಷದ ‘ಬ್ರಿಟಿಷ್ ಅಕಾಡೆಮಿ’ ಪುಸ್ತಕ ಪ್ರಶಸ್ತಿಗೆ ಭಾಜನವಾಗಿದೆ.</p>.<p>ಸೃಜನೇತರ ಕೃತಿಗಳಿಗಾಗಿ ನೀಡುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯು ಒಟ್ಟು 25 ಸಾವಿರ ಪೌಂಡ್ (ಅಂದಾಜು ₹29 ಲಕ್ಷ) ಮೊತ್ತವನ್ನು ಒಳಗೊಂಡಿದೆ.</p>.<p>ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಅಮೃತ್, ದಕ್ಷಿಣ ಭಾರತ ಮೂಲದ ದಂಪತಿಗೆ ಕೆನ್ಯಾದಲ್ಲಿ ಜನಿಸಿದರು. ಸಿಂಗಪುರದಲ್ಲಿ ಆರಂಭಿಕ ಶಿಕ್ಷಣ ಪಡೆದ ಅವರು, ಬ್ರಿಟನ್ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.</p>.<p>ಬುಧವಾರ ಸಂಜೆ ಲಂಡನ್ನ ಬ್ರಿಟಿಷ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ತೀರ್ಪುಗಾರರ ತಂಡದ ಅಧ್ಯಕ್ಷೆ, ಬ್ರಿಟನ್ ಮೂಲದ ಇತಿಹಾಸಗಾರ್ತಿ ರೆಬೆಕ್ಕಾ ಅರ್ಲ್ ಈ ಪ್ರಶಸ್ತಿ ಘೋಷಿಸಿದರು.</p>.<p>‘ಹವಾಮಾನ ಬದಲಾವಣೆಯಿಂದಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಅರ್ಥ ಮಾಡಿಕೊಳ್ಳಲು ಬಯಸುವವರು ಓದಲೇಬೇಕಾದ ಕೃತಿ ಇದು. ಮಾನವನ ಇತಿಹಾಸ ಮತ್ತು ಪರಿಸರದಲ್ಲಾಗುವ ಪರಿವರ್ತನೆ ನಡುವಿನ ಪರಸ್ಪರ ಸಂಬಂಧಗಳನ್ನು ಈ ಕೃತಿ ತೆರೆದಿಡುತ್ತದೆ’ ಎಂದು ಅವರು ಬಣ್ಣಿಸಿದರು.</p>.<p>ಅಮೆರಿಕದಿಂದ ವರ್ಚುವಲ್ ವಿಧಾನದ ಮೂಲಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಸುನೀಲ್ ಅಮೃತ್, ‘ಈ ಕೃತಿಯು ಮಾನವ ಮತ್ತು ಪರಿಸರಕ್ಕೆ ಆಗುವ ಹಾನಿ ಹಾಗೂ ಅನುಭವಿಸುವ ಸಂಕಟಗಳನ್ನು ವಿವರಿಸುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್</strong>: ಭಾರತೀಯ ಮೂಲದ ಇತಿಹಾಸಕಾರ ಸುನೀಲ್ ಅಮೃತ್ ಅವರ ‘ದಿ ಬರ್ನಿಂಗ್ ಅರ್ಥ್: ಆ್ಯನ್ ಎನ್ವಿರಾನ್ಮೆಂಟಲ್ ಹಿಸ್ಟರಿ ಆಫ್ ದಿ ಲಾಸ್ಟ್ 500 ಯಿಯರ್ಸ್’ ಕೃತಿಯು ಈ ವರ್ಷದ ‘ಬ್ರಿಟಿಷ್ ಅಕಾಡೆಮಿ’ ಪುಸ್ತಕ ಪ್ರಶಸ್ತಿಗೆ ಭಾಜನವಾಗಿದೆ.</p>.<p>ಸೃಜನೇತರ ಕೃತಿಗಳಿಗಾಗಿ ನೀಡುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯು ಒಟ್ಟು 25 ಸಾವಿರ ಪೌಂಡ್ (ಅಂದಾಜು ₹29 ಲಕ್ಷ) ಮೊತ್ತವನ್ನು ಒಳಗೊಂಡಿದೆ.</p>.<p>ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಅಮೃತ್, ದಕ್ಷಿಣ ಭಾರತ ಮೂಲದ ದಂಪತಿಗೆ ಕೆನ್ಯಾದಲ್ಲಿ ಜನಿಸಿದರು. ಸಿಂಗಪುರದಲ್ಲಿ ಆರಂಭಿಕ ಶಿಕ್ಷಣ ಪಡೆದ ಅವರು, ಬ್ರಿಟನ್ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.</p>.<p>ಬುಧವಾರ ಸಂಜೆ ಲಂಡನ್ನ ಬ್ರಿಟಿಷ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ತೀರ್ಪುಗಾರರ ತಂಡದ ಅಧ್ಯಕ್ಷೆ, ಬ್ರಿಟನ್ ಮೂಲದ ಇತಿಹಾಸಗಾರ್ತಿ ರೆಬೆಕ್ಕಾ ಅರ್ಲ್ ಈ ಪ್ರಶಸ್ತಿ ಘೋಷಿಸಿದರು.</p>.<p>‘ಹವಾಮಾನ ಬದಲಾವಣೆಯಿಂದಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಅರ್ಥ ಮಾಡಿಕೊಳ್ಳಲು ಬಯಸುವವರು ಓದಲೇಬೇಕಾದ ಕೃತಿ ಇದು. ಮಾನವನ ಇತಿಹಾಸ ಮತ್ತು ಪರಿಸರದಲ್ಲಾಗುವ ಪರಿವರ್ತನೆ ನಡುವಿನ ಪರಸ್ಪರ ಸಂಬಂಧಗಳನ್ನು ಈ ಕೃತಿ ತೆರೆದಿಡುತ್ತದೆ’ ಎಂದು ಅವರು ಬಣ್ಣಿಸಿದರು.</p>.<p>ಅಮೆರಿಕದಿಂದ ವರ್ಚುವಲ್ ವಿಧಾನದ ಮೂಲಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಸುನೀಲ್ ಅಮೃತ್, ‘ಈ ಕೃತಿಯು ಮಾನವ ಮತ್ತು ಪರಿಸರಕ್ಕೆ ಆಗುವ ಹಾನಿ ಹಾಗೂ ಅನುಭವಿಸುವ ಸಂಕಟಗಳನ್ನು ವಿವರಿಸುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>