<p><strong>ಬೆಂಗಳೂರು</strong>: ಪ್ರಸಿದ್ಧ ಜ್ಯುವೇಲರಿ ಅಂಗಡಿ ಒಂದರಲ್ಲಿ ಪತ್ನಿಗಾಗಿ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ಸಿಂಗಪುರ ವ್ಯಕ್ತಿಯೊಬ್ಬರಿಗೆ ಲಾಟರಿಯಲ್ಲಿ ₹8 ಕೋಟಿಗೂ ಅಧಿಕ ಹಣ ಸಿಕ್ಕಿದೆ.</p><p>ಸಿಂಗಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎನ್ನುವ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ 1 ಮಿಲಿಯನ್ ಯುಎಸ್ ಡಾಲರ್ ಹಣ (₹8ಕೋಟಿಗೂ ಅಧಿಕ) ದಕ್ಕಿದೆ.</p><p>ಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಪುರದ ಪ್ರಸಿದ್ಧ ಮುಸ್ತಫಾ ಜುವೇಲರಿಯಲ್ಲಿ ಪತ್ನಿಗಾಗಿ ₹84 ಸಾವಿರ ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.</p><p>ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.</p><p>ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ. ಈ ಕುರಿತು ಹಿಂದೂಸ್ತಾನ್ ಟೈಮ್ಸ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಸಿದ್ಧ ಜ್ಯುವೇಲರಿ ಅಂಗಡಿ ಒಂದರಲ್ಲಿ ಪತ್ನಿಗಾಗಿ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ಸಿಂಗಪುರ ವ್ಯಕ್ತಿಯೊಬ್ಬರಿಗೆ ಲಾಟರಿಯಲ್ಲಿ ₹8 ಕೋಟಿಗೂ ಅಧಿಕ ಹಣ ಸಿಕ್ಕಿದೆ.</p><p>ಸಿಂಗಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎನ್ನುವ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ 1 ಮಿಲಿಯನ್ ಯುಎಸ್ ಡಾಲರ್ ಹಣ (₹8ಕೋಟಿಗೂ ಅಧಿಕ) ದಕ್ಕಿದೆ.</p><p>ಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಪುರದ ಪ್ರಸಿದ್ಧ ಮುಸ್ತಫಾ ಜುವೇಲರಿಯಲ್ಲಿ ಪತ್ನಿಗಾಗಿ ₹84 ಸಾವಿರ ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.</p><p>ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.</p><p>ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ. ಈ ಕುರಿತು ಹಿಂದೂಸ್ತಾನ್ ಟೈಮ್ಸ್ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>