ವಿಶ್ವಸಂಸ್ಥೆ: ವಿಶ್ವಸಂಸ್ಥೆಯಡಿ ಶಾಂತಿಪಾಲಕನಾಗಿ ಕರ್ತವ್ಯ ನಿರ್ವಹಿಸುವಾಗ ಹುತಾತ್ಮನಾದ ಭಾರತೀಯ ಸೇರಿದಂತೆ 60ಕ್ಕೂ ಹೆಚ್ಚು ಮಿಲಿಟರಿ, ಪೊಲೀಸ್ ಮತ್ತು ನಾಗರಿಕ ಶಾಂತಿಪಾಲಕರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಪದಕ ಘೋಷಿಸಲಾಗಿದೆ.
ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನಾಚರಣೆ ಸಂದರ್ಭ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಸೇವೆ ಸಲ್ಲಿಸುವಾಗ ಹುತಾತ್ಮರಾದ ನಾಯಕ್ ಧನಂಜಯ್ ಕುಮಾರ್ ಸಿಂಗ್ ಅವರಿಗೆ ಮರಣೋತ್ತರವಾಗಿ ಡಾಗ್ ಹಮ್ಮರ್ಕ್ಜೋಲ್ಡ್ ಪದಕ ನೀಡಿ ಗೌರವಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಮೇ 30ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪದಕ ವಿತರಣೆ ಸಮಾರಂಭ ನಡೆಯಲಿದೆ. ಇದುವರೆಗೂ ಸುಮಾರು 180 ಭಾರತೀಯರು ವಿಶ್ವಸಂಸ್ಥೆಯ ಶಾಂತಿಪಾಲಕರಾಗಿ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾಗಿದ್ದಾರೆ.