<p><strong>ಹೈದರಾಬಾದ್:</strong> ತನ್ನ ರೂಮ್ಮೇಟ್ಗೆ ಚಾಕುವಿನಿಂದ ಇರಿದಿದ್ದ ಭಾರತದ ಟೆಕ್ ಉದ್ಯೋಗಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p><p>ಮೃತ ವ್ಯಕ್ತಿಯನ್ನು ತೆಲಂಗಾಣದ ಮೆಹಬೂಬ್ನಗರದ ನಿವಾಸಿ ಮೊಹಮ್ಮದ್ ನಿಜಾಮುದ್ದೀನ್ (30) ಎಂದು ಗುರುತಿಸಲಾಗಿದೆ. ಆದರೆ ಮೃತನ ಕುಟುಂಬದವರು ಜನಾಂಗೀಯ ತಾರತಮ್ಯ ನಡೆದಿದೆ ಎಂದು ಆರೋಪಿಸಿದ್ದು, ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.</p><p>ನಿಜಾಮುದ್ದೀನ್ ತನ್ನ ರೂಮ್ಮೇಟ್ಗೆ ಚಾಕುವಿನಿಂದ ಇರಿದ ನಂತರ ಪೊಲೀಸರಿಗೆ ಕರೆ ಬಂದಿತ್ತು, ಪೊಲೀಸರು ಸ್ಥಳಕ್ಕೆ ಬಂದ ಸಮಯದಲ್ಲಿ ಇವರಿಬ್ಬರ ನಡುವೆ ವಾಗ್ವಾದ ನಡೆಯುತ್ತಿತ್ತು, ರೂಮ್ಮೇಟ್ ಹಲ್ಲೆಗೊಳಗಾಗಿ ಕೆಳಗೆ ಬಿದ್ದಿದ್ದ, ನಿಜಾಮುದ್ದೀನ್ ಕೈಯಲ್ಲಿ ಚಾಕು ಇತ್ತು, ಈ ವೇಳೆ ಪೊಲಿಸರು ಗುಂಡು ಹಾರಿಸಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ನಿಜಾಮುದ್ದೀನ್ ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದರು. ಹಲ್ಲೆಗೆ ಒಳಗಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ನಿಜಾಮುದ್ದೀನ್ ಕಂಪ್ಯೂಟರ್ ಸೈನ್ಸ್ನಲ್ಲಿ ಮಾಸ್ಟರ್ಸ್ ಓದಿಕೊಂಡಿದ್ದರು. ಕ್ಯಾಲಿಫೋರ್ನಿಯಾದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಶಾಂತ ಸ್ವಭಾವದ ನಿಜಾಮುದ್ದೀನ್ ಧರ್ಮ ಆಧಾರಿತ ಭೇದಭಾವ, ವೇತನ ತಾರತಮ್ಯ ಸೇರಿದಂತೆ ಇಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ದೂರು ಸಲ್ಲಿಸಿದ್ದರು ಎಂದು ಅವರ ಕುಟುಂಬದವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತನ್ನ ರೂಮ್ಮೇಟ್ಗೆ ಚಾಕುವಿನಿಂದ ಇರಿದಿದ್ದ ಭಾರತದ ಟೆಕ್ ಉದ್ಯೋಗಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p><p>ಮೃತ ವ್ಯಕ್ತಿಯನ್ನು ತೆಲಂಗಾಣದ ಮೆಹಬೂಬ್ನಗರದ ನಿವಾಸಿ ಮೊಹಮ್ಮದ್ ನಿಜಾಮುದ್ದೀನ್ (30) ಎಂದು ಗುರುತಿಸಲಾಗಿದೆ. ಆದರೆ ಮೃತನ ಕುಟುಂಬದವರು ಜನಾಂಗೀಯ ತಾರತಮ್ಯ ನಡೆದಿದೆ ಎಂದು ಆರೋಪಿಸಿದ್ದು, ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.</p><p>ನಿಜಾಮುದ್ದೀನ್ ತನ್ನ ರೂಮ್ಮೇಟ್ಗೆ ಚಾಕುವಿನಿಂದ ಇರಿದ ನಂತರ ಪೊಲೀಸರಿಗೆ ಕರೆ ಬಂದಿತ್ತು, ಪೊಲೀಸರು ಸ್ಥಳಕ್ಕೆ ಬಂದ ಸಮಯದಲ್ಲಿ ಇವರಿಬ್ಬರ ನಡುವೆ ವಾಗ್ವಾದ ನಡೆಯುತ್ತಿತ್ತು, ರೂಮ್ಮೇಟ್ ಹಲ್ಲೆಗೊಳಗಾಗಿ ಕೆಳಗೆ ಬಿದ್ದಿದ್ದ, ನಿಜಾಮುದ್ದೀನ್ ಕೈಯಲ್ಲಿ ಚಾಕು ಇತ್ತು, ಈ ವೇಳೆ ಪೊಲಿಸರು ಗುಂಡು ಹಾರಿಸಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ನಿಜಾಮುದ್ದೀನ್ ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದರು. ಹಲ್ಲೆಗೆ ಒಳಗಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ನಿಜಾಮುದ್ದೀನ್ ಕಂಪ್ಯೂಟರ್ ಸೈನ್ಸ್ನಲ್ಲಿ ಮಾಸ್ಟರ್ಸ್ ಓದಿಕೊಂಡಿದ್ದರು. ಕ್ಯಾಲಿಫೋರ್ನಿಯಾದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಶಾಂತ ಸ್ವಭಾವದ ನಿಜಾಮುದ್ದೀನ್ ಧರ್ಮ ಆಧಾರಿತ ಭೇದಭಾವ, ವೇತನ ತಾರತಮ್ಯ ಸೇರಿದಂತೆ ಇಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ದೂರು ಸಲ್ಲಿಸಿದ್ದರು ಎಂದು ಅವರ ಕುಟುಂಬದವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>