<p><strong>ಬೀಜಿಂಗ್:</strong> ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವ ಪ್ರಕ್ರಿಯೆಯನ್ನು ಭಾರತ ಮರು ಆರಂಭಿಸಿದೆ.</p><p>2020ರಲ್ಲಿ ಕೋವಿಡ್–19 ಕಾರಣದಿಂದಾಗಿ ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಭಾರತ ರದ್ದುಗೊಳಿಸಿತ್ತು, ಕೋವಿಡ್ ಬಳಿಕ ಪೂರ್ವ ಲಡಾಖ್ ಗಡಿಯ ವಿಚಾರವಾಗಿ ವೀಸಾ ನಿರ್ಬಂಧ ಮುಂದುವರಿದಿತ್ತು. </p><p>ಬೀಜಿಂಗ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ವಾರದಿಂದ ಚೀನಾ ಪ್ರಜೆಗಳು ಭಾರತದ ಪ್ರವಾಸಿ ವೀಸಾಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ. </p><p>ಬೀಜಿಂಗ್, ಶಾಂಘೈ ಮತ್ತು ಗುವಾಂಗ್ಝೌನಲ್ಲಿರುವ ಆಯಾ ಭಾರತೀಯ ವೀಸಾ ಅರ್ಜಿ ಕೇಂದ್ರಗಳಲ್ಲಿ ವೀಸಾಗಳಿಗೆ ಅರ್ಜಿ ಸಲ್ಲಿಸಬಹುದು. ಇದಕ್ಕೆ ಅಗತ್ಯವಿರುವ ಕಾರ್ಯವಿಧಾನಗಳು ಮತ್ತು ದಾಖಲೆಗಳ ಕುರಿತು ಕಚೇರಿಯು ಪ್ರಕಟಣೆ ಹೊರಡಿಸಿದೆ.</p><p>ಇದೀಗ ಗಾಲ್ವಾನ್ ಕಣಿವೆಯಲ್ಲಿ ನಡೆದ ಮಿಲಿಟರಿ ಘರ್ಷಣೆಯ ನಂತರ ತೀವ್ರ ಹದಗೆಟ್ಟ ದ್ವಿಪಕ್ಷೀಯ ಸಂಬಂಧಗಳನ್ನು ಸರಿಪಡಿಸುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.</p><p>ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜತೆಗೆ ಮಾತುಕತೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಶಾಂಘೈ ಕೋಆಪರೇಷನ್ ಸಂಸ್ಥೆ ಆಯೋಜಿಸಿದ್ದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಜುಲೈ 14, 15 ರಂದು ಜೈಶಂಕರ್ ಚೀನಾಕ್ಕೆ ಭೇಟಿ ನೀಡಿದ್ದರು ಈ ವೇಳೆ ಯಿ ಜತೆಗೆ ಮಾತುಕತೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವ ಪ್ರಕ್ರಿಯೆಯನ್ನು ಭಾರತ ಮರು ಆರಂಭಿಸಿದೆ.</p><p>2020ರಲ್ಲಿ ಕೋವಿಡ್–19 ಕಾರಣದಿಂದಾಗಿ ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಭಾರತ ರದ್ದುಗೊಳಿಸಿತ್ತು, ಕೋವಿಡ್ ಬಳಿಕ ಪೂರ್ವ ಲಡಾಖ್ ಗಡಿಯ ವಿಚಾರವಾಗಿ ವೀಸಾ ನಿರ್ಬಂಧ ಮುಂದುವರಿದಿತ್ತು. </p><p>ಬೀಜಿಂಗ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ವಾರದಿಂದ ಚೀನಾ ಪ್ರಜೆಗಳು ಭಾರತದ ಪ್ರವಾಸಿ ವೀಸಾಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ. </p><p>ಬೀಜಿಂಗ್, ಶಾಂಘೈ ಮತ್ತು ಗುವಾಂಗ್ಝೌನಲ್ಲಿರುವ ಆಯಾ ಭಾರತೀಯ ವೀಸಾ ಅರ್ಜಿ ಕೇಂದ್ರಗಳಲ್ಲಿ ವೀಸಾಗಳಿಗೆ ಅರ್ಜಿ ಸಲ್ಲಿಸಬಹುದು. ಇದಕ್ಕೆ ಅಗತ್ಯವಿರುವ ಕಾರ್ಯವಿಧಾನಗಳು ಮತ್ತು ದಾಖಲೆಗಳ ಕುರಿತು ಕಚೇರಿಯು ಪ್ರಕಟಣೆ ಹೊರಡಿಸಿದೆ.</p><p>ಇದೀಗ ಗಾಲ್ವಾನ್ ಕಣಿವೆಯಲ್ಲಿ ನಡೆದ ಮಿಲಿಟರಿ ಘರ್ಷಣೆಯ ನಂತರ ತೀವ್ರ ಹದಗೆಟ್ಟ ದ್ವಿಪಕ್ಷೀಯ ಸಂಬಂಧಗಳನ್ನು ಸರಿಪಡಿಸುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.</p><p>ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜತೆಗೆ ಮಾತುಕತೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಶಾಂಘೈ ಕೋಆಪರೇಷನ್ ಸಂಸ್ಥೆ ಆಯೋಜಿಸಿದ್ದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಜುಲೈ 14, 15 ರಂದು ಜೈಶಂಕರ್ ಚೀನಾಕ್ಕೆ ಭೇಟಿ ನೀಡಿದ್ದರು ಈ ವೇಳೆ ಯಿ ಜತೆಗೆ ಮಾತುಕತೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>