ನವದೆಹಲಿ: ಗಲ್ಫ್ ಆಫ್ ಏಡನ್ ಕೊಲ್ಲಿಯಲ್ಲಿ ಇರಾನ್ ಬಂಡುಕೋರರ ಕ್ಷಿಪಣಿ ದಾಳಿಗೆ ತುತ್ತಾಗಿ ವಾಣಿಜ್ಯ ನೌಕೆಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಭಾರತದ ಯುದ್ಧನೌಕೆ ಐಎನ್ಎಸ್ ವಿಶಾಖಪಟ್ಟಣ ನಂದಿಸಿದೆ.
ವಾಣಿಜ್ಯ ಹಡಗಿನಿಂದ ನೆರವಿಗಾಗಿ ಬಂದ ಮನವಿಯ ಮೇರೆಗೆ ಯುದ್ಧನೌಕೆ ಕಾರ್ಯಾಚರಣೆ ನಡೆಸಿದೆ. ಇದರಲ್ಲಿ 22 ಭಾರತೀಯರು ಸಹ ಇದ್ದರು.
ಕೆಂಪು ಸಮುದ್ರ ಮತ್ತು ಗಲ್ಫ್ ಆಫ್ ಏಡನ್ ಕೊಲ್ಲಿಯು ವಾಣಿಜ್ಯ ಚಟುವಟಿಕೆಗಳಿಗೆ ಪ್ರಮುಖ ಜಲಮಾರ್ಗವಾಗಿದ್ದು, ಇತ್ತೀಚಿನ ದಿನಗಳಲ್ಲಿ ಇಲ್ಲಿ ಗಂಭೀರ ಭದ್ರತಾ ಆತಂಕ ಎದುರಾಗುತ್ತಿದೆ.
ಮಾರ್ಷಲ್ ದ್ವೀಪದಲ್ಲಿ ಎಂ.ವಿ. ಮಾರ್ಲಿನ್ ಲುವಾಂಡಾ ವಾಣಿಜ್ಯ ಹಡಗಿನ ಮೇಲೆ ಹುತಿ ಬಂಡುಕೋರರು ಖಂಡಾಂತರ ಕ್ಷಿಪಣಿಯ ದಾಳಿ ನಡೆಸಿರುವುದಾಗಿ ಅಮೆರಿಕ ಸೆಂಟ್ರಲ್ ಕಮಾಂಡ್ ಹೇಳಿದೆ.
ಹಡಗಿನಿಂದ ನೆರವಿಗಾಗಿ ಕರೆ ಬಂದ ಕೂಡಲೇ ಭಾರತದ ಕ್ಷಿಪಣಿ ವಿರೋಧಿ ಯುದ್ಧನೌಕೆ ಐಎನ್ಎಸ್ ವಿಶಾಖಪಟ್ಟಣಂ ಅನ್ನು ಕಾರ್ಯಾಚರಣೆಗೆ ಇಳಿಸಲಾಗಿತ್ತು.