<p><strong>ಮಾಸ್ಕೊ</strong>: ರಷ್ಯಾದ ಭದ್ರತಾ ಮಂಡಳಿಯು ಇಲ್ಲಿ ಮೇ 27ರಿಂದ 29ರವರೆಗೆ ಆಯೋಜಿಸಿರುವ 13ನೇ ಅಂತರರಾಷ್ಟ್ರೀಯ ಭದ್ರತಾ ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಭಾಗವಹಿಸುವ ನಿರೀಕ್ಷೆ ಇದೆ.</p><p>ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸೆರ್ಗೆಯ್ ಶೋಯಿಗು ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಕುರಿತು ನಡೆಯಲಿರುವ ಉನ್ನತ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಡೊಬಾಲ್ ಅವರಿಗೆ ಆಹ್ವಾನ ನೀಡಲಾಗಿದೆ. ಪಾಕಿಸ್ತಾನದ ಭದ್ರತಾ ಸಲಹೆಗಾರ ಲೆಫ್ಟಿನೆಂಟ್ ಜನರಲ್ ಅಸೀಮ್ ಮಲ್ಲಿಕ್ ಕೂಡ ಪಾಲ್ಗೊಳ್ಳಲಿದ್ದಾರೆ.</p><p>ಭಾರತ, ಪಾಕಿಸ್ತಾನ, ಚೀನಾ ಸೇರಿದಂತೆ ವಿಶ್ವದ ದಕ್ಷಿಣ ಮತ್ತು ಪೂರ್ವದ 150 ದೇಶಗಳು ಹಾಗೂ 20 ಅಂತರರಾಷ್ಟ್ರೀಯ ಸಂಸ್ಥೆಗಳ ನಾಯಕರಿಗೆ ಈ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ರಷ್ಯಾದ ಭದ್ರತಾ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.</p><p>‘ಆಪರೇಷನ್ ಸಿಂಧೂರ’ದ ನಂತರ ಭಾರತ ಮತ್ತು ಪಾಕಿಸ್ತಾನದ ಭದ್ರತಾ ಸಲಹೆಗಾರರು ಮುಖಾಮುಖಿ ಭೇಟಿಯಾಗುವ ನಿರೀಕ್ಷೆ ಇದ್ದು, ಉಭಯತ್ರರ ನಡುವೆ ನೇರ ಮಾತುಕತೆಗೆ ರಷ್ಯಾ ವ್ಯವಸ್ಥೆ ಕಲ್ಪಿಸಲಿದೆ ಎಂದು ‘ಕೊಮ್ಮರ್ಸ್ಯಾಂಟ್’ ಪತ್ರಿಕೆಯ ಅಂಕಣಕಾರ ಸೆರ್ಗಿ ಸ್ಟ್ರೋಕನ್ ಸುದ್ದಿಸಂಸ್ಥೆಗೆ ತಿಳಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ</strong>: ರಷ್ಯಾದ ಭದ್ರತಾ ಮಂಡಳಿಯು ಇಲ್ಲಿ ಮೇ 27ರಿಂದ 29ರವರೆಗೆ ಆಯೋಜಿಸಿರುವ 13ನೇ ಅಂತರರಾಷ್ಟ್ರೀಯ ಭದ್ರತಾ ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಭಾಗವಹಿಸುವ ನಿರೀಕ್ಷೆ ಇದೆ.</p><p>ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸೆರ್ಗೆಯ್ ಶೋಯಿಗು ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಕುರಿತು ನಡೆಯಲಿರುವ ಉನ್ನತ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಡೊಬಾಲ್ ಅವರಿಗೆ ಆಹ್ವಾನ ನೀಡಲಾಗಿದೆ. ಪಾಕಿಸ್ತಾನದ ಭದ್ರತಾ ಸಲಹೆಗಾರ ಲೆಫ್ಟಿನೆಂಟ್ ಜನರಲ್ ಅಸೀಮ್ ಮಲ್ಲಿಕ್ ಕೂಡ ಪಾಲ್ಗೊಳ್ಳಲಿದ್ದಾರೆ.</p><p>ಭಾರತ, ಪಾಕಿಸ್ತಾನ, ಚೀನಾ ಸೇರಿದಂತೆ ವಿಶ್ವದ ದಕ್ಷಿಣ ಮತ್ತು ಪೂರ್ವದ 150 ದೇಶಗಳು ಹಾಗೂ 20 ಅಂತರರಾಷ್ಟ್ರೀಯ ಸಂಸ್ಥೆಗಳ ನಾಯಕರಿಗೆ ಈ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ರಷ್ಯಾದ ಭದ್ರತಾ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.</p><p>‘ಆಪರೇಷನ್ ಸಿಂಧೂರ’ದ ನಂತರ ಭಾರತ ಮತ್ತು ಪಾಕಿಸ್ತಾನದ ಭದ್ರತಾ ಸಲಹೆಗಾರರು ಮುಖಾಮುಖಿ ಭೇಟಿಯಾಗುವ ನಿರೀಕ್ಷೆ ಇದ್ದು, ಉಭಯತ್ರರ ನಡುವೆ ನೇರ ಮಾತುಕತೆಗೆ ರಷ್ಯಾ ವ್ಯವಸ್ಥೆ ಕಲ್ಪಿಸಲಿದೆ ಎಂದು ‘ಕೊಮ್ಮರ್ಸ್ಯಾಂಟ್’ ಪತ್ರಿಕೆಯ ಅಂಕಣಕಾರ ಸೆರ್ಗಿ ಸ್ಟ್ರೋಕನ್ ಸುದ್ದಿಸಂಸ್ಥೆಗೆ ತಿಳಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>