<p><strong>ಮ್ಯಾಡ್ರಿಡ್:</strong> ಕ್ರೀಡೆ ಹಾಗೂ ಸುಸ್ಥಿರ ನಗರಾಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಹಾಗೂ ಸ್ಪೇನ್ ಎರಡು ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು. </p><p>ಸ್ಪೇನ್ನ ವಿದೇಶಾಂಗ ವ್ಯವಹಾರಗಳ ಸಚಿವ ಜೋಸ್ ಮ್ಯಾನ್ಯುಯಲ್ ಅಲ್ಬರೆಸ್ ಅವರೊಟ್ಟಿಗೆ ಸಭೆ ನಡೆಸಿದ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈಂಶಕರ್, ‘ಭಾರತದಲ್ಲಿ ಸ್ಪೇನ್ನ 230 ಕಂಪನಿಗಳಿವೆ. ಭಾರತದ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಅವೆಲ್ಲ ಕೈಜೋಡಿಸಲು ಸ್ವಾಗತಿಸುತ್ತೇನೆ’ ಎಂದು ಹೇಳಿದರು. </p><p>2026ನೇ ಇಸವಿಯು ಉಭಯ ದೇಶಗಳಿಗೆ ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ<br>ಮುಖ್ಯವಾದುದಾಗಿದೆ. ರಕ್ಷಣೆ, ರೈಲ್ವೆ, ನಗರಾಭಿವೃದ್ಧಿ ತಂತ್ರಜ್ಞಾನ, ಪರಿಸರಸ್ನೇಹಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ<br>ಉಭಯ ದೇಶಗಳಿಗೆ ಒಟ್ಟಾಗಿ ಕೆಲಸ ಮಾಡುವ ಅವಕಾಶಗಳಿವೆ ಎಂದೂ ಹೇಳಿದರು.</p><p>ಸ್ಪೇನ್ ಮತ್ತು ಐರೋಪ್ಯ ಒಕ್ಕೂಟದ ಜೊತೆಗಿನ ಭಾರತದ ಬಾಂಧವ್ಯವನ್ನು ‘ಈ ಪ್ರಕ್ಷುಬ್ಧ ಸಂದರ್ಭದಲ್ಲಿ ಸ್ಥಿರಗೊಳಿಸ ಬೇಕಾದ ಅಗತ್ಯವಿದೆ’ ಎಂದೂ ಅವರು ಪ್ರತಿಪಾದಿಸಿದರು.</p><p>ಮ್ಯಾಡ್ರಿಡ್ನಲ್ಲಿ ನಡೆಯುತ್ತಿರುವ ರಾಯಭಾರಿಗಳ 9ನೇ ವಾರ್ಷಿಕ ಸಮ್ಮೇಳನದಲ್ಲಿ ಅವರು ಈ ವಿಷಯವನ್ನು ಮಂಡಿಸಿದರು.</p><p>ವಿದೇಶಾಂಗ ಸಚಿವರಾದ ನಂತರ ಸ್ಪೇನ್ಗೆ ಮೊದಲ ಬಾರಿ ಭೇಟಿ ನೀಡಿರುವ ಜೈಶಂಕರ್, ಸೋಮವಾರದಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.</p><p>ಸ್ಪೇನ್ ಅಧ್ಯಕ್ಷ ಪೆದ್ರೊ ಭಾರತಕ್ಕೆ ಭೇಟಿ ನೀಡಿದ ಎರಡೂವರೆ ತಿಂಗಳ ನಂತರ ಜೈಶಂಕರ್ ಇಲ್ಲಿಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮ್ಯಾಡ್ರಿಡ್:</strong> ಕ್ರೀಡೆ ಹಾಗೂ ಸುಸ್ಥಿರ ನಗರಾಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಹಾಗೂ ಸ್ಪೇನ್ ಎರಡು ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು. </p><p>ಸ್ಪೇನ್ನ ವಿದೇಶಾಂಗ ವ್ಯವಹಾರಗಳ ಸಚಿವ ಜೋಸ್ ಮ್ಯಾನ್ಯುಯಲ್ ಅಲ್ಬರೆಸ್ ಅವರೊಟ್ಟಿಗೆ ಸಭೆ ನಡೆಸಿದ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈಂಶಕರ್, ‘ಭಾರತದಲ್ಲಿ ಸ್ಪೇನ್ನ 230 ಕಂಪನಿಗಳಿವೆ. ಭಾರತದ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಅವೆಲ್ಲ ಕೈಜೋಡಿಸಲು ಸ್ವಾಗತಿಸುತ್ತೇನೆ’ ಎಂದು ಹೇಳಿದರು. </p><p>2026ನೇ ಇಸವಿಯು ಉಭಯ ದೇಶಗಳಿಗೆ ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ<br>ಮುಖ್ಯವಾದುದಾಗಿದೆ. ರಕ್ಷಣೆ, ರೈಲ್ವೆ, ನಗರಾಭಿವೃದ್ಧಿ ತಂತ್ರಜ್ಞಾನ, ಪರಿಸರಸ್ನೇಹಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ<br>ಉಭಯ ದೇಶಗಳಿಗೆ ಒಟ್ಟಾಗಿ ಕೆಲಸ ಮಾಡುವ ಅವಕಾಶಗಳಿವೆ ಎಂದೂ ಹೇಳಿದರು.</p><p>ಸ್ಪೇನ್ ಮತ್ತು ಐರೋಪ್ಯ ಒಕ್ಕೂಟದ ಜೊತೆಗಿನ ಭಾರತದ ಬಾಂಧವ್ಯವನ್ನು ‘ಈ ಪ್ರಕ್ಷುಬ್ಧ ಸಂದರ್ಭದಲ್ಲಿ ಸ್ಥಿರಗೊಳಿಸ ಬೇಕಾದ ಅಗತ್ಯವಿದೆ’ ಎಂದೂ ಅವರು ಪ್ರತಿಪಾದಿಸಿದರು.</p><p>ಮ್ಯಾಡ್ರಿಡ್ನಲ್ಲಿ ನಡೆಯುತ್ತಿರುವ ರಾಯಭಾರಿಗಳ 9ನೇ ವಾರ್ಷಿಕ ಸಮ್ಮೇಳನದಲ್ಲಿ ಅವರು ಈ ವಿಷಯವನ್ನು ಮಂಡಿಸಿದರು.</p><p>ವಿದೇಶಾಂಗ ಸಚಿವರಾದ ನಂತರ ಸ್ಪೇನ್ಗೆ ಮೊದಲ ಬಾರಿ ಭೇಟಿ ನೀಡಿರುವ ಜೈಶಂಕರ್, ಸೋಮವಾರದಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.</p><p>ಸ್ಪೇನ್ ಅಧ್ಯಕ್ಷ ಪೆದ್ರೊ ಭಾರತಕ್ಕೆ ಭೇಟಿ ನೀಡಿದ ಎರಡೂವರೆ ತಿಂಗಳ ನಂತರ ಜೈಶಂಕರ್ ಇಲ್ಲಿಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>