<p><strong>ಜಕಾರ್ತ:</strong> ಪಶ್ಚಿಮ ಇಂಡೋನೇಷ್ಯಾದ ಸುಮಾತ್ರಾದ್ವೀಪದಲ್ಲಿ ಪ್ರಳಯ ಮತ್ತು ಭೂ ಕುಸಿತದಿಂದಾಗಿ ಮಕ್ಕಳು ಸೇರಿದಂತೆ22 ಮಂದಿ ಸಾವಿಗೀಡಾಗಿದ್ದಾರೆ.17 ಮಂದಿಗೆ ಗಂಭೀರ ಗಾಯಗಳಾಗಿವೆ.ಹಲವಾರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿವೆ.</p>.<p>ಬುಧವಾರದಿಂದ ಇಲ್ಲಿ ಭಾರೀ ಮಳೆಯಾಗಿರುವುದರಿಂದ ಜಲ ಪ್ರಳಯ ಜತೆ ಭೂಮಿ ಕುಸಿತಉಂಟಾಗಿದೆ.</p>.<p>ಕಳೆದ ಮೂರು ದಿನಗಳಲ್ಲಿ ಉತ್ತರ ಸುಮಾತ್ರಾ ಪ್ರದೇಶದಲ್ಲಿ ಕನಿಷ್ಠ 17 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಪಶ್ಚಿಮ ಸುಮಾತ್ರಾದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ಹೇಳಿವೆ.</p>.<p>ಇಲ್ಲಿನ ಮಾಂಡಯಲಿಂಗ್ ನಟಾಲ್ ಪ್ರಾಂತ್ಯದ ಮೌರಾ ಸಲಾದಿ ಗ್ರಾಮದಲ್ಲಿರುವ ಇಸ್ಲಾಮಿಕ್ ಬೋರ್ಡಿಂಗ್ ಸ್ಕೂಲ್ನ 11 ಮಕ್ಕಳು ಶುಕ್ರವಾರ ಸಾವಿಗೀಡಾಗಿದ್ದಾರೆ. ಜಲ ಪ್ರಳಯಕ್ಕೆ ಕಟ್ಟಡ ಕುಸಿದು ಈ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ಸುಟೊಪೊ ಪುರ್ವೊ ನುಗ್ರೊಹೊ ಹೇಳಿದ್ದಾರೆ. ಹಲವಾರು ಮನೆಗಳು ಈ ಪ್ರಕೃತಿ ವಿಕೋಪಕ್ಕೆ ನಾಶವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ:</strong> ಪಶ್ಚಿಮ ಇಂಡೋನೇಷ್ಯಾದ ಸುಮಾತ್ರಾದ್ವೀಪದಲ್ಲಿ ಪ್ರಳಯ ಮತ್ತು ಭೂ ಕುಸಿತದಿಂದಾಗಿ ಮಕ್ಕಳು ಸೇರಿದಂತೆ22 ಮಂದಿ ಸಾವಿಗೀಡಾಗಿದ್ದಾರೆ.17 ಮಂದಿಗೆ ಗಂಭೀರ ಗಾಯಗಳಾಗಿವೆ.ಹಲವಾರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿವೆ.</p>.<p>ಬುಧವಾರದಿಂದ ಇಲ್ಲಿ ಭಾರೀ ಮಳೆಯಾಗಿರುವುದರಿಂದ ಜಲ ಪ್ರಳಯ ಜತೆ ಭೂಮಿ ಕುಸಿತಉಂಟಾಗಿದೆ.</p>.<p>ಕಳೆದ ಮೂರು ದಿನಗಳಲ್ಲಿ ಉತ್ತರ ಸುಮಾತ್ರಾ ಪ್ರದೇಶದಲ್ಲಿ ಕನಿಷ್ಠ 17 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಪಶ್ಚಿಮ ಸುಮಾತ್ರಾದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ಬಲ್ಲಮೂಲಗಳು ಹೇಳಿವೆ.</p>.<p>ಇಲ್ಲಿನ ಮಾಂಡಯಲಿಂಗ್ ನಟಾಲ್ ಪ್ರಾಂತ್ಯದ ಮೌರಾ ಸಲಾದಿ ಗ್ರಾಮದಲ್ಲಿರುವ ಇಸ್ಲಾಮಿಕ್ ಬೋರ್ಡಿಂಗ್ ಸ್ಕೂಲ್ನ 11 ಮಕ್ಕಳು ಶುಕ್ರವಾರ ಸಾವಿಗೀಡಾಗಿದ್ದಾರೆ. ಜಲ ಪ್ರಳಯಕ್ಕೆ ಕಟ್ಟಡ ಕುಸಿದು ಈ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ಸುಟೊಪೊ ಪುರ್ವೊ ನುಗ್ರೊಹೊ ಹೇಳಿದ್ದಾರೆ. ಹಲವಾರು ಮನೆಗಳು ಈ ಪ್ರಕೃತಿ ವಿಕೋಪಕ್ಕೆ ನಾಶವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>