<p><strong>ಡೆನ್ಪಸಾರ್ (ಇಂಡೊನೇಷ್ಯಾ):</strong> ದ್ವೀಪರಾಷ್ಟ್ರ ಇಂಡೊನೇಷ್ಯಾದ ಎರಡು ಪ್ರಾಂತ್ಯಗಳಲ್ಲಿ ಬುಧವಾರ ಪ್ರವಾಹ ಸಂಭವಿಸಿ 11 ಮಂದಿ ಮೃತಪಟ್ಟಿದ್ದಾರೆ, 13 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. </p>.<p>ಈಸ್ಟ್ ನುಸಾ ಟೆಂಗಾರ ಪ್ರಾಂತ್ಯ ಹಾಗೂ ಬಾಲಿಯಲ್ಲಿ ಸೋಮವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದ ಪರಿಣಾಮ ಪ್ರವಾಹ ಕಂಡುಬಂದಿದೆ.</p>.<p>ಬಾಲಿಯಲ್ಲಿ 8 ಮಂದಿ ಮೃತಪಟ್ಟಿದ್ದು, 8 ಮಂದಿ ನಾಪತ್ತೆಯಾಗಿದ್ದರೆ, ಟೆಂಗಾರದಲ್ಲಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಇನ್ನು ಪ್ರವಾಹದ ಅಬ್ಬರಕ್ಕೆ ಬಾಲಿಯಲ್ಲಿ 9 ಜಿಲ್ಲೆಗಳು ತತ್ತರಿಸಿದ್ದು, ಪ್ರವಾಸಿ ತಾಣಗಳು ಹಾಗೂ ವಸತಿ ಪ್ರದೇಶಗಳಲ್ಲಿ ಸಾವಿರಾರು ಮನೆಗಳು, ಕಟ್ಟಡಗಳು ಜಲಾವೃತಗೊಂಡಿವೆ. ವಿವಿಧ ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿ ಹಲವು ರಸ್ತೆಗಳು, ಸೇತುವೆಗಳು ಕೂಡ ಹಾನಿಗೀಡಾಗಿವೆ.</p>.<p class="title">800ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ. ರಸ್ತೆ ಬದಿಯ ವಾಹನಗಳು ಕೊಚ್ಚಿ ಹೋಗಿದ್ದು, ಸರ್ಕಾರಿ ಕಚೇರಿಗಳು, ಭತ್ತದ ಗದ್ದೆಗಳು, ತೋಟಗಳು ಜಲಾವೃತಗೊಂಡು ಅಪಾರ ಪ್ರಮಾಣದ ಆಸ್ತಿ ನಾಶವಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆನ್ಪಸಾರ್ (ಇಂಡೊನೇಷ್ಯಾ):</strong> ದ್ವೀಪರಾಷ್ಟ್ರ ಇಂಡೊನೇಷ್ಯಾದ ಎರಡು ಪ್ರಾಂತ್ಯಗಳಲ್ಲಿ ಬುಧವಾರ ಪ್ರವಾಹ ಸಂಭವಿಸಿ 11 ಮಂದಿ ಮೃತಪಟ್ಟಿದ್ದಾರೆ, 13 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. </p>.<p>ಈಸ್ಟ್ ನುಸಾ ಟೆಂಗಾರ ಪ್ರಾಂತ್ಯ ಹಾಗೂ ಬಾಲಿಯಲ್ಲಿ ಸೋಮವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದ ಪರಿಣಾಮ ಪ್ರವಾಹ ಕಂಡುಬಂದಿದೆ.</p>.<p>ಬಾಲಿಯಲ್ಲಿ 8 ಮಂದಿ ಮೃತಪಟ್ಟಿದ್ದು, 8 ಮಂದಿ ನಾಪತ್ತೆಯಾಗಿದ್ದರೆ, ಟೆಂಗಾರದಲ್ಲಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಇನ್ನು ಪ್ರವಾಹದ ಅಬ್ಬರಕ್ಕೆ ಬಾಲಿಯಲ್ಲಿ 9 ಜಿಲ್ಲೆಗಳು ತತ್ತರಿಸಿದ್ದು, ಪ್ರವಾಸಿ ತಾಣಗಳು ಹಾಗೂ ವಸತಿ ಪ್ರದೇಶಗಳಲ್ಲಿ ಸಾವಿರಾರು ಮನೆಗಳು, ಕಟ್ಟಡಗಳು ಜಲಾವೃತಗೊಂಡಿವೆ. ವಿವಿಧ ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿ ಹಲವು ರಸ್ತೆಗಳು, ಸೇತುವೆಗಳು ಕೂಡ ಹಾನಿಗೀಡಾಗಿವೆ.</p>.<p class="title">800ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ. ರಸ್ತೆ ಬದಿಯ ವಾಹನಗಳು ಕೊಚ್ಚಿ ಹೋಗಿದ್ದು, ಸರ್ಕಾರಿ ಕಚೇರಿಗಳು, ಭತ್ತದ ಗದ್ದೆಗಳು, ತೋಟಗಳು ಜಲಾವೃತಗೊಂಡು ಅಪಾರ ಪ್ರಮಾಣದ ಆಸ್ತಿ ನಾಶವಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>