<p><strong>ಜಕಾರ್ತಾ:</strong>ಕೋವಿಡ್ ಸಂತ್ರಸ್ತರ ಆಹಾರ ಯೋಜನೆಗೆ ಸಂಬಂಧಿಸಿದಂತೆ ₹8.85 ಕೋಟಿ (1.2 ಮಿಲಿಯನ್ ಡಾಲರ್) ಲಂಚ ಸ್ವೀಕರಿಸಿದ ಆರೋಪದಡಿ ಇಂಡೊನೇಷ್ಯಾದ ಸಾಮಾಜಿಕ ವ್ಯವಹಾರಗಳ ಸಚಿವರನ್ನುಭಾನುವಾರ ಬಂಧಿಸಲಾಗಿದೆ.</p>.<p>ಇಂಡೊನೇಷ್ಯಾದ ಭ್ರಷ್ಟಾಚಾರ ನಿಗ್ರಹ ದಳವು ಶನಿವಾರ ಸಚಿವ ಜೂಲಿಯಾರಿ ಬಟುಬರಾ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ₹8.85 ಕೋಟಿ ಮೊತ್ತವನ್ನು ಒಳಗೊಂಡ ಸೂಟ್ಕೇಸ್, ಬ್ಯಾಗ್ ಅನ್ನು ವಶಕ್ಕೆ ಪಡೆದಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಇಂಡೊನೇಷ್ಯಾ ಅಧ್ಯಕ್ಷಜೋಕೊ ವಿಡೋಡೋ ಅವರು, ‘ಇದು ಜನರ ಹಣ. ಕೋವಿಡ್–19 ಸಮಯದಲ್ಲಿ ಆರ್ಥಿಕತೆ ವೃದ್ಧಿಸಲು ಇದರ ಅಗತ್ಯವಿದೆ. ನಾನು ಯಾವುದೇ ಭ್ರಷ್ಟರಿಗೆ ರಕ್ಷಣೆ ನೀಡುವುದಿಲ್ಲ’ ಎಂದರು.</p>.<p>ಕೋವಿಡ್ನಿಂದಾಗಿ ಇಂಡೊನೇಷ್ಯಾದ ಆರ್ಥಿಕತೆಯು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ನಿಂದ ಸಮಸ್ಯೆಗೊಳಗಾಗಿರುವ ಜನರಿಗಾಗಿ ಸರ್ಕಾರವು ಆಹಾರ ಪ್ಯಾಕೆಜ್ಗಳಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.</p>.<p>‘ಜೂಲಿಯಾರಿ ಬಟುಬರಾ ಅವರು ಸರ್ಕಾರದ ಆಹಾರ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸಿದ್ದಾರೆ. ಸಂತ್ರಸ್ಥರಿಗೆ ಆಹಾರ ವಿತರಣೆಯ ಗುತ್ತಿಗೆ ಪಡೆದಿದ್ದ ವ್ಯಕ್ತಿಗಳಿಬ್ಬರಿಂದ ಜೂಲಿಯಾರಿ ₹8.85 ಕೋಟಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತಾ:</strong>ಕೋವಿಡ್ ಸಂತ್ರಸ್ತರ ಆಹಾರ ಯೋಜನೆಗೆ ಸಂಬಂಧಿಸಿದಂತೆ ₹8.85 ಕೋಟಿ (1.2 ಮಿಲಿಯನ್ ಡಾಲರ್) ಲಂಚ ಸ್ವೀಕರಿಸಿದ ಆರೋಪದಡಿ ಇಂಡೊನೇಷ್ಯಾದ ಸಾಮಾಜಿಕ ವ್ಯವಹಾರಗಳ ಸಚಿವರನ್ನುಭಾನುವಾರ ಬಂಧಿಸಲಾಗಿದೆ.</p>.<p>ಇಂಡೊನೇಷ್ಯಾದ ಭ್ರಷ್ಟಾಚಾರ ನಿಗ್ರಹ ದಳವು ಶನಿವಾರ ಸಚಿವ ಜೂಲಿಯಾರಿ ಬಟುಬರಾ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ₹8.85 ಕೋಟಿ ಮೊತ್ತವನ್ನು ಒಳಗೊಂಡ ಸೂಟ್ಕೇಸ್, ಬ್ಯಾಗ್ ಅನ್ನು ವಶಕ್ಕೆ ಪಡೆದಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಇಂಡೊನೇಷ್ಯಾ ಅಧ್ಯಕ್ಷಜೋಕೊ ವಿಡೋಡೋ ಅವರು, ‘ಇದು ಜನರ ಹಣ. ಕೋವಿಡ್–19 ಸಮಯದಲ್ಲಿ ಆರ್ಥಿಕತೆ ವೃದ್ಧಿಸಲು ಇದರ ಅಗತ್ಯವಿದೆ. ನಾನು ಯಾವುದೇ ಭ್ರಷ್ಟರಿಗೆ ರಕ್ಷಣೆ ನೀಡುವುದಿಲ್ಲ’ ಎಂದರು.</p>.<p>ಕೋವಿಡ್ನಿಂದಾಗಿ ಇಂಡೊನೇಷ್ಯಾದ ಆರ್ಥಿಕತೆಯು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ನಿಂದ ಸಮಸ್ಯೆಗೊಳಗಾಗಿರುವ ಜನರಿಗಾಗಿ ಸರ್ಕಾರವು ಆಹಾರ ಪ್ಯಾಕೆಜ್ಗಳಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.</p>.<p>‘ಜೂಲಿಯಾರಿ ಬಟುಬರಾ ಅವರು ಸರ್ಕಾರದ ಆಹಾರ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸಿದ್ದಾರೆ. ಸಂತ್ರಸ್ಥರಿಗೆ ಆಹಾರ ವಿತರಣೆಯ ಗುತ್ತಿಗೆ ಪಡೆದಿದ್ದ ವ್ಯಕ್ತಿಗಳಿಬ್ಬರಿಂದ ಜೂಲಿಯಾರಿ ₹8.85 ಕೋಟಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>