<p><strong>ಪಲು:</strong>ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪ ಮತ್ತು ಸುನಾಮಿಯಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.</p>.<p>ಆಹಾರ ಮತ್ತು ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳಲು ನಿರಾಶ್ರಿತರು ಹರಸಾಹಸ ಮಾಡುತ್ತಿದ್ದಾರೆ. ಸಾವಿನ ಸಂಖ್ಯೆ ಸಾವಿರವನ್ನೂ ಮೀರಬಹುದು ಎಂದು ಇಂಡೊನೇಷ್ಯಾ ಉಪಾಧ್ಯಕ್ಷ ಜುಸೂಫ್ ಕಲ್ಲಾ ಹೇಳಿದ್ದಾರೆ.</p>.<p>ಸುನಾಮಿಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು,ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.</p>.<p>ಹಾನಿಗೊಳಗಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಇಂಡೊನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ, ‘ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸೇನಾ ಪಡೆಗಳು ಹಗಲಿರುಳು ಶ್ರಮಿಸಬೇಕು’ ಎಂದು ಹೇಳಿದ್ದಾರೆ.</p>.<p>ಸೇನಾ ವಿಮಾನದ ಮೂಲಕ ಸಂತ್ರಸ್ತರಿಗೆ ಆಹಾರ ಹಾಗೂ ಪರಿಹಾರ ಸಾಮಗ್ರಿಯನ್ನು ವಿತರಿಸಲಾಗುತ್ತಿದೆ.</p>.<p><strong>ಫೇಸ್ಬುಕ್ ಬಳಕೆ: </strong>ಕಣ್ಮರೆಯಾದವರನ್ನು ಹುಡುಕುವ ಕಾರ್ಯದಲ್ಲಿಇಂಡೊನೇಷ್ಯಾ ಸೇನೆ ನಿರತವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ಆತಂಕದಲ್ಲಿರುವ ನಿರಾಶ್ರಿತರ ಅನುಕೂಲಕ್ಕಾಗಿ ಫೇಸ್ಬುಕ್ ಪುಟವನ್ನು ತೆರೆಯಲಾಗಿದೆ. ಪತ್ತೆಯಾದವರ ಮಾಹಿತಿಯನ್ನು ಈ ಪುಟದಲ್ಲಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಲು:</strong>ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪ ಮತ್ತು ಸುನಾಮಿಯಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.</p>.<p>ಆಹಾರ ಮತ್ತು ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳಲು ನಿರಾಶ್ರಿತರು ಹರಸಾಹಸ ಮಾಡುತ್ತಿದ್ದಾರೆ. ಸಾವಿನ ಸಂಖ್ಯೆ ಸಾವಿರವನ್ನೂ ಮೀರಬಹುದು ಎಂದು ಇಂಡೊನೇಷ್ಯಾ ಉಪಾಧ್ಯಕ್ಷ ಜುಸೂಫ್ ಕಲ್ಲಾ ಹೇಳಿದ್ದಾರೆ.</p>.<p>ಸುನಾಮಿಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು,ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.</p>.<p>ಹಾನಿಗೊಳಗಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಇಂಡೊನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ, ‘ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸೇನಾ ಪಡೆಗಳು ಹಗಲಿರುಳು ಶ್ರಮಿಸಬೇಕು’ ಎಂದು ಹೇಳಿದ್ದಾರೆ.</p>.<p>ಸೇನಾ ವಿಮಾನದ ಮೂಲಕ ಸಂತ್ರಸ್ತರಿಗೆ ಆಹಾರ ಹಾಗೂ ಪರಿಹಾರ ಸಾಮಗ್ರಿಯನ್ನು ವಿತರಿಸಲಾಗುತ್ತಿದೆ.</p>.<p><strong>ಫೇಸ್ಬುಕ್ ಬಳಕೆ: </strong>ಕಣ್ಮರೆಯಾದವರನ್ನು ಹುಡುಕುವ ಕಾರ್ಯದಲ್ಲಿಇಂಡೊನೇಷ್ಯಾ ಸೇನೆ ನಿರತವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ಆತಂಕದಲ್ಲಿರುವ ನಿರಾಶ್ರಿತರ ಅನುಕೂಲಕ್ಕಾಗಿ ಫೇಸ್ಬುಕ್ ಪುಟವನ್ನು ತೆರೆಯಲಾಗಿದೆ. ಪತ್ತೆಯಾದವರ ಮಾಹಿತಿಯನ್ನು ಈ ಪುಟದಲ್ಲಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>